ಮನೆ ರಾಷ್ಟ್ರೀಯ ಡಾ.ವೀರೇಂದ್ರ ಹೆಗ್ಗಡೆ, ಪಿಟಿ ಉಷಾ, ಇಳಯರಾಜ, ವಿಜಯೇಂದ್ರ ಪ್ರಸಾದ್‌ ರಾಜ್ಯಸಭೆಗೆ ನಾಮನಿರ್ದೇಶನ

ಡಾ.ವೀರೇಂದ್ರ ಹೆಗ್ಗಡೆ, ಪಿಟಿ ಉಷಾ, ಇಳಯರಾಜ, ವಿಜಯೇಂದ್ರ ಪ್ರಸಾದ್‌ ರಾಜ್ಯಸಭೆಗೆ ನಾಮನಿರ್ದೇಶನ

0

ನವದೆಹಲಿ (New Delhi) : ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಸೇರಿದಂತೆ ನಾಲ್ವರನ್ನು ಕೇಂದ್ರ ಸರ್ಕಾರವು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿದೆ.

ಹೆಗ್ಗಡೆ ಅವರೊಂದಿಗೆ ಖ್ಯಾತ ಅಥ್ಲೀಟ್ ಪಿ.ಟಿ. ಉಷಾ ಮತ್ತು ಸಂಗೀತ ಸಂಯೋಜಕ, ಗೀತರಚನೆಕಾರ ಮತ್ತು ಗಾಯಕ ಇಳಯರಾಜ ಹಾಗೂ ಚಿತ್ರ ಸಾಹಿತಿ ವಿ.ವಿಜಯೇಂದ್ರ ಪ್ರಸಾದ್‌ ಅವರು ರಾಜ್ಯಸಭೆಗೆ ನಾಮನಿರ್ದೇಶನಗೊಂಡಿದ್ದಾರೆ.

ನಾಮನಿರ್ದೇಶಿತ ಸದಸ್ಯರ ವಿಭಾಗದಲ್ಲಿ ಖಾಲಿ ಉಳಿದಿದ್ದ ಸ್ಥಾನಗಳಿಗೆ ಇವರನ್ನು ಆಯ್ಕೆ ಮಾಡಲಾಗಿದೆ. ರಾಜ್ಯಸಭೆಗೆ ನಾಮನಿರ್ದೇಶನಗೊಂಡಿರುವ ನಾಲ್ವರು ಸಾಧಕರನ್ನು ಅಭಿನಂದಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಇವರೊಂದಿಗೆ ತಾವು ಕಾಣಿಸಿಕೊಂಡ ಅಪರೂಪದ ಸಂದರ್ಭದ ಚಿತ್ರಗಳನ್ನು ಟ್ವೀಟ್‌ನಲ್ಲಿ ಹಂಚಿಕೊಂಡಿದ್ದಾರೆ.

‘ಸಮುದಾಯಕ್ಕೆ ಮಹೋನ್ನತ ಸೇವೆ ಸಲ್ಲಿಸುವ ನಿಟ್ಟಿನಲ್ಲಿ ವೀರೇಂದ್ರ ಹೆಗ್ಗಡೆಯವರು ಮುಂಚೂಣಿಯಲ್ಲಿದ್ದಾರೆ. ಧರ್ಮಸ್ಥಳದ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸುವ ಅವಕಾಶ ಹಾಗೂ ಅವರು ಆರೋಗ್ಯ, ಶಿಕ್ಷಣ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ಕೈಗೊಂಡಿರುವ ಮಹತ್ತರ ಕಾರ್ಯಗಳಿಗೆ ಸಾಕ್ಷಿಯಾಗುವ ಅವಕಾಶ ನನಗೆ ಒದಗಿತ್ತು. ಖಂಡಿತವಾಗಿ ಅವರು ಸಂಸದೀಯ ನಡಾವಳಿಗಳನ್ನು ಮತ್ತಷ್ಟು ಉತ್ಕೃಷ್ಟಗೊಳಿಸುವರು’ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಕನ್ನಡದಲ್ಲೇ ಟ್ವೀಟ್‌ ಮಾಡಿದ್ದಾರೆ.

‘ಪಿ.ಟಿ. ಉಷಾ ಅವರು ದೇಶದಪ್ರತಿಯೊಬ್ಬರಿಗೆ ಸ್ಫೂರ್ತಿ. ಕ್ರೀಡಾ ಕ್ಷೇತ್ರದಲ್ಲಿ ಹಲವು ವರ್ಷಗಳಿಂದ ಅವರು ದೇಶಕ್ಕೆ ಸಾಕಷ್ಟು ಉದಯೋನ್ಮುಖಪ್ರತಿಭೆಗಳನ್ನು ಪರಿಚಯಿಸಿದ್ದಾರೆ. ಅವರ ಕೊಡುಗೆ ಶ್ಲಾಘನೀಯ. ರಾಜ್ಯಸಭೆಯ ಸದಸ್ಯರಾಗಿ ನಾಮನಿರ್ದೇಶನಗೊಂಡಿರುವ ಉಷಾ ಅವರಿಗೂ ಅಭಿನಂದನೆಗಳು’ ಎಂದು ಮೋದಿ ಮತ್ತೊಂದು ಟ್ವೀಟ್‌ ಮಾಡಿದ್ದಾರೆ.

‘ಇಳಯರಾಜ ಅವರು ಸೃಜನಶೀಲ ಪ್ರತಿಭೆ. ಸಾಕಷ್ಟು ಸಾಧನೆ ಮಾಡಿದ್ದಾರೆ. ಹಲವು ತಲೆಮಾರುಗಳ ಸುಂದರ ಭಾವನೆಗಳಿಗೆ ಜೀವ ತುಂಬಿದ್ದಾರೆ. ಅವರ ಜೀವನವೂ ಸ್ಫೂರ್ತಿದಾಯಕವಾಗಿದೆ. ಇವರನ್ನು ರಾಜ್ಯ ಸಭೆಗೆ ಆಯ್ಕೆ ಮಾಡಿರುವುದು ಸಂತಸ ತಂದಿದೆ’ ಎಂದು ಮೋದಿ ಹೇಳಿದ್ದಾರೆ.

ಹಿಂದಿನ ಲೇಖನಸೂರ್ಯ ನಮಸ್ಕಾರ ಮಾಡಲು ಯಾವ ಸಮಯ ಉತ್ತಮ, ಪಾಲಿಸಬೇಕಾದ ಕ್ರಮಗಳು
ಮುಂದಿನ ಲೇಖನಇಂದಿನ ರಾಶಿ ಭವಿಷ್ಯ