ಮನೆ ರಾಷ್ಟ್ರೀಯ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಡಾ. ವೀರೇಂದ್ರ ಹೆಗ್ಗಡೆ

ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಡಾ. ವೀರೇಂದ್ರ ಹೆಗ್ಗಡೆ

0

ನವದೆಹಲಿ(Newdelhi): ರಾಜ್ಯಸಭೆಗೆ ನಾಮನಿರ್ದೇಶನಗೊಂಡಿರುವ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು ಇಂದು ಕನ್ನಡದಲ್ಲಿಯೇ ಪ್ರಮಾಣ ವಚನ ಸ್ವೀಕರಿಸಿ, ತಮ್ಮ ಭಾಷಾ ಪ್ರೇಮ ಮೆರೆದಿದ್ದಾರೆ.

ವೀರೇಂದ್ರ ಹೆಗ್ಗಡೆ ಅವರು, ಭಾರತ ಸಂವಿಧಾನದಲ್ಲಿ ನಿಜವಾದ ನಂಬಿಕೆಯನ್ನು ಹೊಂದಿ, ನನ್ನ ಕರ್ತವ್ಯವನ್ನು ಶ್ರದ್ಧಾಪೂರ್ವಕವಾಗಿ ನಿರ್ವಹಿಸುವೆ ಎಂದು ದೇವರ ಹೆಸರಿನಲ್ಲಿ ಪ್ರಮಾಣ ಮಾಡುವ ಮೂಲಕ ಪ್ರಮಾಣ ವಚನ ಸ್ವೀಕರಿಸಿದರು.

ಇಂದು ಬೆಳಿಗ್ಗೆ ಸಂಸತ್‌ ಭವನಕ್ಕೆ ಆಗಮಿಸಿದ  ವೀರೇಂದ್ರ ಹೆಗ್ಗಡೆ ಅವರನ್ನು ಕೇಂದ್ರ ಸಚಿವರಾದ‌ ಪ್ರಹ್ಲಾದ ಜೋಶಿ, ಮತ್ತು ಪಿಯೂಷ್ ಗೋಯೆಲ್,  ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಮುಂತಾದವರು ಬಹಳ ಆತ್ಮೀಯವಾಗಿ ಸ್ವಾಗತಿಸಿದರು.

ಇದನ್ನೂ ಓದಿ … ರಾಜ್ಯಸಭೆ ಸದಸ್ಯರಾಗಿ ಇಂದು ಪ್ರಮಾಣವಚನ ಸ್ವೀಕರಿಸಲಿರುವ ಡಿ.ವೀರೇಂದ್ರ ಹೆಗ್ಗಡೆ

ಹಿಂದಿನ ಲೇಖನಶೆಡ್ ಮೇಲೆ ಅಪಾರ್ಟ್ ಮೆಂಟ್  ಗೋಡೆ ಕುಸಿತ:  ಕಾರ್ಮಿಕರ ಸಾವು
ಮುಂದಿನ ಲೇಖನಏಕಾಗ್ರತೆಗೆ ಸಂಗೀತ ಸಹಕಾರಿ: ಶ್ವೇತಾ ಮಡಪ್ಪಾಡಿ