ಕೆ ಸುಧಾಕರ್ ಗೆ ಗಂಡಾಂತರ.
ಕಾಂಗ್ರೆಸ್ ಕಾರ್ಯಕರ್ತರಿಗೆ ಐಟಿ ಕಿರುಕುಳ
ಇಂಡಿಗನತ್ತ ಗ್ರಾಮದಲ್ಲಿ ಮತಗಟ್ಟೆ ದ್ವಂಸ
ಏಪ್ರಿಲ್ 26ಕ್ಕೆ ಮೊದಲ ಹಂತದ ಚುನಾವಣೆ……
'ಕೈ' ಪರ ಪ್ರಚಾರದಲ್ಲಿದ್ದಾಗ ತಡೆದ ಬಿಜೆಪಿ ಕಾರ್ಯಕರ್ತರು….
ಹಿರಿಯ ನಾಗರಿಕರಿಗೆ ಹಾಗೂ ಅಂಗವಿಕಲರಿಗೆ ರಾಪಿಡೋ ವತಿಯಿಂದ ಸಿಹಿ ಸುದ್ದಿ
ಏಪ್ರಿಲ್ 26ಕ್ಕೆ ಏನೆಲ್ಲ ಲಭ್ಯವಿರುತ್ತದೆ….
ಲಂಡನ್ನಲ್ಲಿ ಅನಂತ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್ ಮದುವೆ.
ಲೋಕಸಭಾ ಚುನಾವಣೆಗೆ ಬೆಂಗಳೂರಿನಲ್ಲಿ ನಿಷೇಧಾಗ್ನೆ ಜಾರಿ..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ಹುಬ್ಬಳ್ಳಿ(Hubballi): ಕಾಂಗ್ರೆಸ್ ನವರದ್ದು ಯಥಾ ಬುದ್ಧಿ, ತಥಾ ಮಾತುಗಳು. ಕಾಂಗ್ರೆಸ್’ನವರಿಗೆ ವಿನಾಶದ ಕನಸುಗಳು ಬೀಳುತ್ತಿವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
‘ಯುವ ಜನೋತ್ಸವವನ್ನು, ಯುವ ವಿನಾಶೋತ್ಸವ’ ಎಂಬ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಟ್ವೀಟ್ ಕುರಿತು ನಗರದ ವಿಮಾನ ನಿಲ್ದಾಣದಲ್ಲಿ ಸೋಮವಾರ ಪ್ರತಿಕ್ರಿಯಿಸಿದ ಅವರು, ಎಲ್ಲದರಲ್ಲೂ ಕಾಂಗ್ರೆಸ್’ನವರು ವಿನಾಶವನ್ನೇ ನೋಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಯಾವುದೇ ಒಳ್ಳೆಯ ಕೆಲಸವನ್ನು ಮೆಚ್ಚುವುದು ಕಾಂಗ್ರೆಸ್ ನವರಿಗೆ ಗೊತ್ತಿಲ್ಲ. ಇತ್ತೀಚೆಗೆ ಅವರ ಭಾಷೆ, ನಡವಳಿಕೆ ಹಾಗೂ ಚಿಂತನೆ ಕೀಳುಮಟ್ಟದಿಂದ ಕೂಡಿವೆ. ದೇಶ ಹಾಗೂ ರಾಜ್ಯದ ಪ್ರಗತಿ ವಿಚಾರದಲ್ಲಿ ತೀರಾ ತಳಮಟ್ಟಕ್ಕಿಳಿಯುತ್ತಿರುವುದು, ಅವರ ಹತಾಶೆಯ ಮನಸ್ಥಿತಿಯನ್ನು ತೋರಿಸುತ್ತದೆ ಎಂದು ಪರೋಕ್ಷವಾಗಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು.
ಯುವಜನೋತ್ಸವವು ಅರ್ಥಪೂರ್ಣವಾಗಿ ನಡೆದಿದ್ದು, ಯುವಜನರಿಗೆ ಸ್ಫೂರ್ತಿ ನೀಡಿದೆ. ಪ್ರತಿಭೆಗಳ ಅನಾವರಣಕ್ಕೆ ವೇದಿಕೆಯಾಗಿದೆ. ರಾಜ್ಯ ಸರ್ಕಾರ ತನ್ನ ಯುವ ನೀತಿಯಲ್ಲಿ ಗ್ರಾಮೀಣ ಪ್ರದೇಶದ ಕಬಡ್ಡಿ, ಕೊಕ್ಕೊ ಸೇರಿದಂತೆ ಐದು ಕ್ರೀಡೆಗಳನ್ನು ಉತ್ತೇಜಿಸಲು ಕ್ರಮ ಕ್ರಮ ಕೈಗೊಂಡಿದೆ.
ಗಡ್ಕರಿ ಅವರಿಗೆ ಬೆದರಿಕೆ ಕರೆ: ಕರೆ ಹಿನ್ನೆಲೆ ಪತ್ತೆಗೆ ಕ್ರಮ
ಹಿಂಡಲಗಾ ಜೈಲಿನಿಂದ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಬೆದರಿಕೆ ಕರೆ ಬಂದಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ, ಕರೆಯ ಹಿಂದೆ ಯಾರಿದ್ದಾರೆ, ಹಿನ್ನೆಲೆ ಏನು ಹಾಗೂ ಯಾರು ಮಾರ್ಗದರ್ಶನ ನೀಡಿದ್ದಾರೆ ಎಂಬುದು ಮುಖ್ಯವಾಗಿದ್ದು, ಅದನ್ನು ಪತ್ತೆ ಹಚ್ಚುವ ಕೆಲಸವನ್ನು ಪೊಲೀಸರು ಮಾಡುತ್ತಿದ್ದಾರೆ ಎಂದರು.
ಪ್ರಿಯಾಂಕ ಗಾಂಧಿ ಅವರ ನಾ ನಾಯಕಿ ಕಾರ್ಯಕ್ರಮಕ್ಕೆ ನಮ್ಮ ವಿರೋಧವಿಲ್ಲ. ಆದರೆ, ನಾ ನಾಯಕಿ ಎಂದು ಸ್ವಯಂ ಆಗಿ ಹೇಳಿಕೊಳ್ಳುವ ಸ್ಥಿತಿ ಅವರಿಗೆ ಬಂದಿದೆ. ಅವರನ್ನು ನಾಯಕಿ ಮಾಡಲು ಕರ್ನಾಟಕದ ಮಹಿಳೆಯರು ಸಿದ್ಧರಿಲ್ಲ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.