ಮನೆ ರಾಜ್ಯ ಚಾಲಕನ ಅಜಾಗ್ರತೆಯ ಬಸ್ ಚಾಲನೆ: 12 ಮಂದಿ ಪ್ರಯಾಣಿಕರಿಗೆ ಗಾಯ

ಚಾಲಕನ ಅಜಾಗ್ರತೆಯ ಬಸ್ ಚಾಲನೆ: 12 ಮಂದಿ ಪ್ರಯಾಣಿಕರಿಗೆ ಗಾಯ

0

ಗುಡಿಬಂಡೆ: ಚಾಲಕ ಅತಿ ವೇಗ ಮತ್ತು ಅಜಾಗ್ರತೆಯಿಂದ ಬಸ್ ಚಾಲನೆ ಮಾಡಿದ ಪರಿಣಾಮ ಬಸ್ ನಲ್ಲಿದ್ದ ಸುಮಾರು 12ಕ್ಕೂ ಹೆಚ್ಚು ಪ್ರಯಾಣಿಕರಿಗೆ ಮಾರಣಾಂತಿಕ ಗಾಯಗಳಾದ ಗಟನೆ ಪಟ್ಟಣದ ಸಮೀಪ ನಡೆದಿದೆ.

ಬಾಗೇಪಲ್ಲಿಯಿಂದ ಗುಡಿಬಂಡೆ ಬರುತ್ತಿದ್ದ ಸಾರಿಗೆ ಬಸ್‌ ನ ಚಾಲಕ ಬಸ್ ಅನ್ನು ಅತಿ ವೇಗವಾಗಿ ಚಾಲನೆ ಮಾಡಿಕೊಂಡು ಬರುತ್ತಿದ್ದಂತೆ ಪಟ್ಟಣದ ಸಮೀಪದ ಉಪ್ಪಾರಹಳ್ಳಿ ಗ್ರಾಮ ಬಿಡುತ್ತಿದ್ದಂತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಬಸ್‌ ಪಕ್ಕದ ಜಮೀನುಗಳಿಗೆ ನುಗ್ಗಿದೆ.

ಈ ಪರಿಣಾಮ ಬಸ್ ಮುಂಭಾಗದ ಎರಡು ಚಕ್ರಗಳು ಕಿತ್ತು ಬಂದಿದ್ದು, ಬಸ್ ನಲ್ಲಿದ್ದ ಸುಮಾರು 12ಕ್ಕೂ ಹೆಚ್ಚು ಪ್ರಯಾಣಿಕರಿಗೆ ತೀವ್ರತರವಾದ ರಕ್ತಗಾಯಗಳಾದರೇ, ನಿರ್ವಾಹಕ ಸೇರಿದಂತೆ ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.

ಗಾಯಾಳುಗಳನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಹಿಂದಿನ ಲೇಖನಆನೇಕಲ್ ನ ಮನೆಯೊಂದರಲ್ಲಿ ಸಿಲಿಂಡರ್ ಸ್ಫೋಟ: ವ್ಯಕ್ತಿಗೆ ಗಂಭೀರ ಗಾಯ
ಮುಂದಿನ ಲೇಖನಮೈಸೂರು: ಹಸಿರು ಪಟಾಕಿ ಹೊರತುಪಡಿಸಿ ಇತರೆ ಪಟಾಕಿಗಳ ಬಳಕೆಗೆ ನಿಷೇಧ