ಮನೆ ರಾಜ್ಯ ರಾಜ್ಯದಲ್ಲಿ ಬರಗಾಲ: ಮೋಡ ಬಿತ್ತನೆಗೆ ಶೀಘ್ರವೇ ಕ್ರಮ: ಡಿಸಿಎಂ ಡಿ.ಕೆ ಶಿವಕುಮಾರ್

ರಾಜ್ಯದಲ್ಲಿ ಬರಗಾಲ: ಮೋಡ ಬಿತ್ತನೆಗೆ ಶೀಘ್ರವೇ ಕ್ರಮ: ಡಿಸಿಎಂ ಡಿ.ಕೆ ಶಿವಕುಮಾರ್

0

ಬೆಳಗಾವಿ:  ರಾಜ್ಯದಲ್ಲಿ ಈ ಬಾರಿ ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ಬರಗಾಲ ಆವರಿಸಿದ್ದು , ಈ ಹಿನ್ನೆಲೆಯಲ್ಲಿ ಮೋಡಬಿತ್ತನೆಗೆ ಶೀಘ್ರವೇ ಕ್ರಮ ಕೈಗೊಳ್ಳುವುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಭರವಸೆ ನೀಡಿದ್ದಾರೆ.

ರಾಜ್ಯದಲ್ಲಿ ಬರಗಾಲ ಹಿನ್ನೆಲೆ ಮೋಡ ಬಿತ್ತನೆ ಮಾಡುವಂತೆ ಸದನಲ್ಲಿ ಪ್ರಕಾಶ್ ಕೋಳಿವಾಡ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದರು.

ಈ ಕುರಿತು ಮಾತನಾಡಿದ ಡಿಸಿಎಂ ಡಿ.ಕೆ ಶಿವಕುಮಾರ್, ಮೋಡ ಬಿತ್ತನೆ ಈ ಹಿಂದೆ ಯಶಸ್ಸು ಕಂಡಿದೆ. ಹೀಗಾಗಿ ಈ ಬಗ್ಗೆ ಆರ್ಥಿಕ ಇಲಾಖೆ ಜತೆ  ಚರ್ಚಿಸಿ ನಿರ್ಧಾರ ಕೈಘೊಳ್ಳುತ್ತೇವೆ ಎಂದರು.

ಮೋಡ ಬಿತ್ತನೆಯನ್ನು ಬಹಳ ರಾಜ್ಯಗಳಲ್ಲಿ ಪ್ರಯೋಗ ಮಾಡುತ್ತಿದ್ದಾರೆ. ಈ ಬಗ್ಗೆ ಹಣಕಾಸು ಇಲಾಖೆ ಜತೆ ಚರ್ಚೆ ಮಾಡಿ ಕ್ರಮ ಕೈಗೊಳ್ಳುತ್ತೇನೆ, ರಾಜ್ಯ ಸರ್ಕಾರದಿಂದ ಶೀಘ್ರವೇ ಮೋಡ ಬಿತ್ತನೆ ಆರಂಭವಾಗಲಿದೆ ಎಂದು ಡಿಕೆ ಶಿವಕುಮಾರ್ ತಿಳಿಸಿದರು.

ಹಿಂದಿನ ಲೇಖನರಾಮಮಂದಿರ ನಿರ್ಮಾಣ ಕಾರ್ಯ ಎಲ್ಲಿಯವರೆಗೆ ಬಂದಿದೆ?: ಫೋಟೋ ಬಿಡುಗಡೆ ಮಾಡಿದ ಟ್ರಸ್ಟ್
ಮುಂದಿನ ಲೇಖನವ್ಯಕ್ತಿ ಆತ್ಮಹತ್ಯೆ: ಮಾನಸಿಕ ಕಿರುಕುಳ ನೀಡಿದ ಮೂವರು ಆರೋಪಿಗಳಿಗೆ ಮೂರು ವರ್ಷ ಜೈಲು