ಮನೆ ರಾಜ್ಯ ಬರ ನಿರ್ವಹಣೆ ಪರಿಶೀಲನೆ: ನಾಳೆ ಸಿಎಂ ವಿಡಿಯೋ ಸಂವಾದ

ಬರ ನಿರ್ವಹಣೆ ಪರಿಶೀಲನೆ: ನಾಳೆ ಸಿಎಂ ವಿಡಿಯೋ ಸಂವಾದ

0

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾರ್ಚ್‌ 5 ರಂದು ಬೆಳಿಗ್ಗೆ 11 ಗಂಟೆಗೆ ಗೃಹ ಕಚೇರಿ ಕೃಷ್ಣಾದಲ್ಲಿ ಬರ ಪರಿಸ್ಥಿತಿ ನಿರ್ವಹಣೆ ಮತ್ತಿತರ ವಿಷಯಗಳ ಕುರಿತು ಜಿಲ್ಲಾ ಉಸ್ತುವಾರಿ ಸಚಿವರು, ಕಾರ್ಯದರ್ಶಿಗಳು ಮತ್ತು ಇತರ ಹಿರಿಯ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಪ್ರಗತಿ ಪರಿಶೀಲನೆ ನಡೆಸಲಿದ್ದಾರೆ.

 ಅವರು ಈ ವಿಡಿಯೋ ಸಂವಾದದಲ್ಲಿ ಎಲ್ಲ ಜಿಲ್ಲೆಗಳ “ಕುಡಿಯುವ ನೀರು, ಬರ ನಿರ್ವಹಣೆ, ಜಾನುವಾರು ಮೇವು, ಉದ್ಯೋಗ ಹಾಗೂ ಕೃಷಿ” ವಿಷಯಗಳ ಕುರಿತು ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು, ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಲಿದ್ದಾರೆ.

ಹಿಂದಿನ ಲೇಖನಮಂಗಳೂರು ಕಾಲೇಜು ಆವರಣದಲ್ಲಿ ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ: ಆರೋಪಿ ಬಂಧನ
ಮುಂದಿನ ಲೇಖನಕಾಂಗ್ರೆಸ್ ಮುಂದುವರೆದರೆ ವಿಧಾನಸೌಧ ಗೋಪುರದ ಮೇಲೆ ಮೈಕ್ ಇಟ್ಟು ಆಜಾನ್ ಕೂಗಿದರು ಆಶ್ಚರ್ಯವಿಲ್ಲ: ಪ್ರತಾಪ್​ ಸಿಂಹ