ನವದೆಹಲಿ/ಬೆಂಗಳೂರು: ಕೇಂದ್ರ ಸರ್ಕಾರದಿಂದ ಬರ ಪರಿಹಾರ ಕೊಡಿಸುವಂತೆ ಕರ್ನಾಟಕ ಸರ್ಕಾರ ಸುಪ್ರೀಂಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದೆ. ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ, “ಎಲ್ಲ ವಿಚಾರಗಳಿಗೂ ರಾಜ್ಯಗಳು ಸುಪ್ರೀಂಕೋರ್ಟ್ಗೆ ಬರಬೇಕಾ?” ಎಂದು ಕೇಂದ್ರ ಸರ್ಕಾರಕ್ಕೆ ಖಾರವಾಗಿ ಪ್ರಶ್ನಿಸಿತು. ಇದಕ್ಕೆ, “ಎರಡು ವಾರದಲ್ಲಿ ಈ ಸಮಸ್ಯೆಯನ್ನು ಬಗೆಹರಿಸುತ್ತೇವೆ” ಎಂದು ಕೇಂದ್ರ ಸರ್ಕಾರ ಪರವಾಗಿ ವಾದ ಮಂಡಿಸಿದ ವಕೀಲ ಎಸ್ ಜಿ ಮೆಹ್ತಾ ಕೋರ್ಟ್ ತಿಳಿಸಿದರು.
ಬರ ಪರಿಹಾರ ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಕಳೆದ ವರ್ಷ ಡಿಸೆಂಬರ್ನಲ್ಲೇ ಕರ್ನಾಟಕ ಸರ್ಕಾರ ಮನವಿ ಮಾಡಿತ್ತು. ಆದರೆ ಕೇಂದ್ರ ಸರ್ಕಾರ ಪರಿಹಾರ ಬಿಡುಗಡೆ ಮಾಡಿಲ್ಲ. ಹೀಗಾಗಿ ಸುಪ್ರೀಂಕೋರ್ಟ್ ನಲ್ಲಿ ಕರ್ನಾಟಕ ಸರ್ಕಾರ ಅರ್ಜಿ ಸಲ್ಲಿಸಿದೆ ಎಂದು ಕರ್ನಾಟಕ ಸರ್ಕಾರ ಪರ ಹಿರಿಯ ವಕೀಲ ಕಪಿಲ್ ಸಿಬಲ್ ವಾದ ಮಂಡಿಸಿದರು.
ವಾದ ಬಗೆಹರಿಸುತ್ತೇವೆ ಎಂದು ಸುಪ್ರೀಂಕೋರ್ಟ್ ನಲ್ಲಿ ಕೇಂದ್ರ ಸರ್ಕಾರ ಹೇಳಿದೆ. ಅಟಾರ್ನಿ ಜನರಲ್, ಸಾಲಿಸಿಟರ್ ಜನರಲ್ ಹಾಜರಾಗಿದ್ದರು. ಎರಡು ವಾರದಲ್ಲಿ ಪ್ರತಿಕ್ರಿಯೆ ನೀಡುತ್ತೇವೆ ಎಂದಿದ್ದಾರೆ. ನೋಟಿಸ್ ಕೊಡಬೇಡಿ ಅಂತ ಕೂಡ ಕೇಳಿಕೊಂಡಿದ್ದಾರೆ. ಎಲ್ಲಿ ಕೇಂದ್ರಕ್ಕೆ ಮುಜುಗರ ಆಗುತ್ತೋ ಎಂಬ ಆತಂಕವಿದೆ. ಹಾಗಾಗಿ ನೋಟಿಸ್ ಕೊಡಬೇಡಿ ಎಂದು ಕೇಂದ್ರ ಕೇಳಿದೆ ಎಂದು ದೆಹಲಿಯಲ್ಲಿ ಸಚಿವ ಕೃಷ್ಣಭೈರೇಗೌಡ ಹೇಳಿದರು.
ಅಮಿತ್ ಶಾ, ನಿರ್ಮಲಾ ಸೀತಾರಾಮನ್ ಮಹಾನ್ ಸುಳ್ಳುಗಾರರು. ಕರ್ನಾಟಕ ತಡವಾಗಿ ಅರ್ಜಿ ಸಲ್ಲಿಸಿತು ಅಂತ ಅಮಿತ್ ಶಾ ಹೇಳಿದರು. ಆ ವಾದವನ್ನು ಅಮಿತ್ ಶಾ ಕೋರ್ಟ್ ಮುಂದೆ ಮಂಡಿಸಬೇಕು. ಅಮಿತ್ ಶಾ ರಾಜ್ಯಕ್ಕೆ ಬಂದು ಭಾಷಣ ಮಾಡುವುದಲ್ಲ ಅಫಿಡವಿಟ್ ಸಲ್ಲಿಸಲಿ. ಕೇಂದ್ರ ಸಚಿವ ಅಮಿತ್ ಶಾ ಸತ್ಯ ಒಪ್ಪಿಕೊಂಡರೆ ಜನರು ಕ್ಷಮಿಸುತ್ತಾರೆ. ಇದೊಂದು ಮಲತಾಯಿ ಧೋರಣೆ ಅನ್ನೋದು ಜನರಿಗೆ ಗೊತ್ತಾಗಿದೆ. ಇಕ್ಕಟ್ಟಿನ ಪರಿಸ್ಥಿತಿಯಲ್ಲಿ ಆರ್.ಅಶೋಕ್, ಬಿಜೆಪಿಯವರು ಇದ್ದಾರೆ. ವಿರೋಧ ಪಕ್ಷದ ನಾಯಕ ಅಶೋಕ್ಗೆ ಜ್ಞಾನದ ಕೊರತೆ ಇದೆ. ಹೀಗೆ ಮಾತನಾಡಿದರೆ ವಿಪಕ್ಷ ಸ್ಥಾನಕ್ಕೂ ಮರ್ಯಾದೆ ಇರಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ವಾಗ್ದಾಳಿ ಮಾಡಿದರು.
ಹ್ಯಾಪಿ ಮದರ್ಸ್ ಡೇ…….
ಹ್ಯಾಪಿ ಮದರ್ಸ್ ಡೇ…..
ಅಕ್ಷಯ ತೃತೀಯದಂದು ಚಿನ್ನ ಬೆಳ್ಳಿ ಮಾರಾಟದಲ್ಲಿ ಹೊಸ ದಾಖಲೆ..!
ಹೆಚ್ಚು ಹೊತ್ತು ಮೆಟ್ರೋದಲ್ಲಿ ಇದ್ದ ಕಾರಣ ದಂಡ ವಿಧಿಸಲಾಗಿದೆ…
ಲೆಮನ್ ಜ್ಯೂಸ್ ಆರೋಗ್ಯಕ್ಕೆ ಉತ್ತಮ..!
ಜೈಲಿನಲ್ಲಿರುವವರು ಮತ ಚಲಾಯಿಸಬಹುದೇ ?
ಉದ್ಯೋಗ ಅವಕಾಶ, ಆನ್ಲೈನಲ್ಲಿ ಅರ್ಜಿ ಸಲ್ಲಿಸಿ….
ಯಾಕೆ ಮೇ 8ನ್ನ ವಿಶ್ವ ರೆಡ್ ಕ್ರಾಸ್ ದಿನ ಎಂದು ಆಚರಿಸಲಾಗುತ್ತದೆ
ಬೆಂಗಳೂರಿನಲ್ಲಿ ಭೂಕುಸಿತ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.