ಮನೆ ಅಪರಾಧ ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಗಗನಸಖಿ ಸಾವು

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಗಗನಸಖಿ ಸಾವು

0

ಮುಂಬೈ: ವೈಯಕ್ತಿಕ ಕೆಲಸಕ್ಕಾಗಿ ದೆಹಲಿಯಿಂದ ಮುಂಬೈಗೆ ಬಂದಿದ್ದ ಗಗನಸಖಿ ಅಪಘಾತವೊಂದರಲ್ಲಿ ಸಾವಿಗೀಡಾಗಿದ್ದು, ಘಟನೆ  ಕುರಿತ ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ.

Join Our Whatsapp Group

ಮೃತರನ್ನು ಪಲ್ಲವಿ ಭಟ್ಟಾಚಾರ್ಯ ಎಂದು ಗುರುತಿಸಲಾಗಿದೆ.

ಆಕೆಯ ಸ್ನೇಹಿತ ಕುಡಿದ ಅಮಲಿನಲ್ಲಿ ಬಿಎಂಡಬ್ಲ್ಯೂ ಕಾರು ಚಲಾಯಿಸುತ್ತಿದ್ದ ಎನ್ನಲಾಗಿದೆ.

ನಿಯಂತ್ರಣ ತಪ್ಪಿ ಬಿಎಂಸಿ ಟ್ರಕ್​’ಗೆ ಡಿಕ್ಕಿ ಹೊಡೆದಿದ್ದಾರೆ ಪಾರ್ಟಿ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದಾಗ ಜುಹು ಪ್ರದೇಶದಲ್ಲಿ ಘಟನೆ ನಡೆದಿದೆ.

ಅವರು ದೆಹಲಿ ನಿವಾಸಿಯಾಗಿದ್ದು, ಮೂಲತಃ ಪಶ್ಚಿಮ ಬಂಗಾಳದ ಕೋಲ್ಕತ್ತಾದವರು. ಅವರು ಗಗನಸಖಿಯಾಗಿ ಕೆಲಸ ಮಾಡುತ್ತಿದ್ದರು. ಇತ್ತೀಚೆಗಷ್ಟೇ ಕೆಲಸ ಬದಲಾಯಿಸಿ ಬೇರೊಂದು ವಿಮಾನ ಕಂಪನಿಗೆ ಸೇರ್ಪಡೆಯಾಗಿದ್ದರು. ಲೇಸರ್ ಸರ್ಜರಿಗಾಗಿ ಮುಂಬೈಗೆ ಬಂದಿದ್ದರು ಎನ್ನಲಾಗಿದೆ. ಯುವಕ 120 ಕಿ.ಮೀ ವೇಗದಲ್ಲಿ ಕಾರು ಚಲಾಯಿಸುತ್ತಿದ್ದ ಎನ್ನುವ ಮಾಹಿತಿ ಲಭ್ಯವಾಗಿದೆ.

ಅರ್ಧವ್ಯು ಎಂಬುವವರು ಪಲ್ಲವಿಯ ಸ್ನೇಹಿತನಾಗಿದ್ದ,  ಭಾರತಿ ದಿಲ್​’ಪ್ರಸಾದ್ ರೈ ಹಾಗೂ ಅಂಕಿತ್ ನರೇಂದ್ರ ಖರೆ ಎಂಬುವವರ ಜತೆ ರೆಸ್ಟೊ ಬಾರ್’​ಗೆ ತೆರಳಿದ್ದರು.

ಬೆಳಗಿನ ಜಾವ ಸುಮಾರು 2.30ರ ಸಮಯದಲ್ಲಿ ಬಾಂದೇಕರ್ ಅವರ ತಾಯಿಯ ಬಿಎಂಡಬ್ಲ್ಯೂ ಕಾರಿನಲ್ಲಿ ಹಿಂದಿರುಗುತ್ತಿದ್ದರು, ಕುಡಿದು ಚಾಲನೆ ಮಾಡುತ್ತಿದ್ದರು. ಕಾರು ಬಿಎಂಸಿ ಕಸದ ಲಾರಿಗೆ ಡಿಕ್ಕಿ ಹೊಡೆದಿತ್ತು. ಅಪಘಾತದಲ್ಲಿ ಕಾರಿನಲ್ಲಿದ್ದ ಎಲ್ಲರೂ ತೀವ್ರವಾಗಿ ಗಾಯಗೊಂಡಿದ್ದಾರೆ, ಪಲ್ಲವಿ ಭಟ್ಟಾಚಾರ್ಯ ಮೃತಪಟ್ಟಿದ್ದು, ಮೂವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಹಿಂದಿನ ಲೇಖನಡಾ. ಸುಧಾಕರ್​ ಸೋಲಿನಿಂದ ನೊಂದ ಅಂಧ ಅಭಿಮಾನಿ ಆತ್ಮಹತ್ಯೆಗೆ ಶರಣು
ಮುಂದಿನ ಲೇಖನತಮಿಳುನಾಡಿನಲ್ಲಿ ಕಳ್ಳಬಟ್ಟಿ ದುರಂತ: ಸಾವಿನ ಸಂಖ್ಯೆ 12ಕ್ಕೆ ಏರಿಕೆ