ಹುಬ್ಬಳ್ಳಿ: ಮದ್ಯದ ಅಮಲಿನಲ್ಲಿ ಪತ್ನಿ ಹಾಗೂ ಮೂವರು ಮಕ್ಕಳ ಮೇಲೆ ಸುತ್ತಿಗೆಯಿಂದ ಹಲ್ಲೆ ಮಾಡಿದ ಪತಿ ಬಳಿಕ ತಾನೂ ನೇಣಿಗೆ ಕೊರಳೊಡ್ಡಿರುವ ಘಟನೆ ತಾಲೂಕಿನ ಸುಳ್ಳ ಗ್ರಾಮದಲ್ಲಿ ಬುಧವಾರ ಬೆಳಗಿನ ಜಾವ ನಡೆದಿದೆ.
ಹಲ್ಲೆಯಿಂದಾಗಿ ಗಂಭೀರವಾಗಿ ಗಾಯಗೊಂಡಿದ್ದ ಪುತ್ರ ಶ್ರೇಯಸ್ ಊರ್ಫ್ ಮೈಲಾರಪ್ಪ (6) ಚಿಕಿತ್ಸೆಗೆ ಸ್ಪಂದಿಸಿದೆ ಮೃತಪಟ್ಟರೆ, ಪತ್ನಿ ಮುದಕವ್ವ (30), ಪುತ್ರಿಯರಾದ ಶಾಮಲಾ (8), ಸೃಷ್ಟಿ (4) ಗಂಭೀರವಾಗಿ ಗಾಯಗೊಂಡಿದ್ದು, ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾರೆ.
ಕಿಮ್ಸ್ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರ ಸ್ಥಿತಿಯು ಚಿಂತಾಜನಕವಾಗಿದೆ ಎಂದು ಮೂಲಗಳು ತಿಳಿಸಿವೆ.
ಗೌಂಡಿ ಕೆಲಸ ಮಾಡಿಕೊಂಡಿದ್ದ ಸುಳ್ಳ ಗ್ರಾಮದ ಪಕ್ಕೀರಪ್ಪ ಮಾದರ ಅನಾರೋಗ್ಯದಿಂದ ಬಳಲುತ್ತಿದ್ದ ಹಾಗೂ ಮದ್ಯವ್ಯಸನಿ ಕೂಡ ಆಗಿದ್ದ. ಇಂದು ಬೆಳಗಿನ ನಾಲ್ಕು ಗಂಟೆ ಸುಮಾರಿಗೆ ಮನೆಯಲ್ಲಿನ ಟಿವಿ ಸೌಂಡ್ ಜಾಸ್ತಿ ಮಾಡಿ ಮಾರಕಾಸ್ತ್ರದಿಂದ ಹೆಂಡತಿ ಮುದಕವ್ವನ ಮೇಲೆ ಹಲ್ಲೆ ನಡೆಸಿದಾಗ ಜೋರಾಗಿ ಕಿರುಚಿದ್ದಾಳೆ. ಆಗ ಮಲಗಿದ್ದ ಮೂರು ಮಕ್ಕಳು ಎದ್ದು ಅಳಲು ಶುರು ಮಾಡಿದಾಗ ಅಂತಕಕ್ಕೀಡಾದ ಪಕ್ಕೀರಪ್ಪನು ತನ್ನ ಮೂರು ಮಕ್ಕಳ ಮೇಲೂ ಅದೇ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದಾನೆ. ಬಳಿಕ ಮನೆಯಲ್ಲೇ ನೇಣಿಗೆ ಶರಣಾಗಿದ್ದಾನೆ.
ಬೆಳ್ಳಗ್ಗೆ 6:00 ಗಂಟೆ ಸುಮಾರಿಗೆ ಮನೆಯ ಅಕ್ಕಪಕ್ಕದವರು ಟಿವಿ ಸೌಂಡ್ ಕೇಳಿ ಬಾಗಿಲು ಬಡಿದಾಗ ಯಾರು ಬಾಗಿಯಲು ತೆರೆಯದಿದ್ದಾಗ ಮುರಿದಿದ್ದಾರೆ. ಆಗ ರಕ್ತದ ಮಡುವಿನಲ್ಲಿ ಮೂವರು ಮಕ್ಕಳು ಹಾಗೂ ಮುದಕವ್ವ ಬಿದ್ದಿದ್ದನ್ನು ನೋಡಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಎಸ್ ಪಿ ಹಾಗೂ ಹುಬ್ಬಳ್ಳಿ ಗ್ರಾಮೀಣ ಠಾಣೆಯ ಇನ್ ಸ್ಪೆಕ್ಟರ್ ಮತ್ತು ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ನಯನ ಕುಮಾರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ವೈದ್ಯರ ದಿನಾಚರಣೆ ಅಂಗವಾಗಿ ಉಚಿತ ತಪಾಸಣಾ…..
ITBT ಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಆರ್ಜಿ ಸ್ವೀಕಾರ..!
'ಓಲ್ಡ್ ಈಸ್ ಗೋಲ್ಡ್' ಕರೋಕೆ ಗಾಯನ ಕಾರ್ಯಕ್ರಮ
ಅಪ್ಪ ಅಮ್ಮ ಅಪ್ಪು, ಎಂಬ ಚಿತ್ರದ ಧ್ವನಿಸುರುಳಿ ಬಿಡುಗಡೆ
ಭಾರತೀಯ ನ್ಯಾಯ ಸಮಿತಿ 2023 ಜುಲೈ 1, 2024 ರಿಂದ ಜಾರಿ!
ಮೈಸೂರಿನ ವಾಸನ್ ಐ ಕೇರ್ ನ 14ನೇ ವಾರ್ಷಿಕೋತ್ಸವದ ಆಚರಣೆ
"ವಾಲ್ಮೀಕಿ ಅಭಿವೃದ್ಧಿ ನಿಗಮ" ದಲ್ಲಿ ನಡೆದ ಬ್ರಹ್ಮಾಂಡ ಭ್ರಷ್ಟಾಚಾರ ಖಂಡಿಸಿ ಬೃಹತ್ ಪ್ರತಿಭಟನೆ
ಮೈಸೂರಿನಲ್ಲಿ,"ದಿ ಜ್ಯುವೆಲರಿ ಶೋ" ಉದ್ಘಟಿಸಿದ ನಟಿ ಆರಾಧನ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.