ಬೆಂಗಳೂರು: ಐತಿಹಾಸಿಕ ಮೈಸೂರು ದಸರಾದ ಜಂಬೂಸವಾರಿ ಮೆರವಣಿಗೆಗೆ ಕ್ಷಣಗಣನೆ ಆರಂಭವಾಗಿದೆ. ಇದಕ್ಕೆ ಮುನ್ನ ಮೈಸೂರು ಅರಮನೆ ಬಲರಾಮ ಗೇಟ್ ಬಳಿ ಸಿಎಂ ಸಿದ್ದರಾಮಯ್ಯ ನಂದಿಧ್ವಜ ಪೂಜೆ ನೆರವೇರಿಸಿದರು.
ಈ ವೇಳೆ ಡಿಸಿಎಂ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಹೆಚ್ ಸಿ ಮಹದೇವಪ್ಪ, ಸಚಿವರಾದ ಕೆ.ಹೆಚ್.ಮುನಿಯಪ್ಪ, ವೆಂಕಟೇಶ್, ಶಿವರಾಜ್ ತಂಗಡಗಿ, ಕೆ.ಎನ್.ರಾಜಣ್ಣ, ಭೈರತಿ ಸುರೇಶ್ ಹಾಗೂ ಸಂಸದ ಪ್ರತಾಪ್ ಸಿಂಹ ಸಾಥ್ ನೀಡಿದರು.
ಈ ವೇಳೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಈ ವರ್ಷ ಮಳೆಯಿಲ್ಲದೆ ರಾಜ್ಯದ ಜನತೆ ಕಂಗಾಲಾಗಿದ್ದಾರೆ. ಬರಗಾಲ ತಾಂಡವವಾಡುತ್ತಿದೆ. ರೈತರು ಬಹಳ ಸಂಕಷ್ಟದಲ್ಲಿದ್ದಾರೆ. ಇನ್ನಾದರೂ ತಾಯಿ ಚಾಮುಂಡಿ ದೇವಿಯ ಅನುಗ್ರಹದಿಂದ ಮಳೆಯಾಗಲಿ ಎಂದು ನಾನು ಇಂದು ವಿಜಯ ದಶಮಿಯ ಶುಭ ಸಂದರ್ಭದಲ್ಲಿ ಪ್ರಾರ್ಥನೆ ಮಾಡುತ್ತೇನೆ ಎಂದರು.
ಇಂದು ಮಧ್ಯಾಹ್ನ 1.46ರಿಂದ 2.48ರ ಶುಭ ಮಕರ ಲಗ್ನದಲ್ಲಿ ನಂದಿಧ್ವಜ ಪೂಜೆ ನೆರವೇರಿದೆ. ನಂದಿಧ್ವಜಕ್ಕೆ ಪೂಜೆ ಸಲ್ಲಿಸಿ ನಂತರ ಬಂಜೂಸವಾರಿಗೆ ಚಾಲನೆ ನೀಡಲಾಗುತ್ತದೆ. ನಂತರ ನಂದಿಧ್ವಜ, ಸ್ತಬ್ದಚಿತ್ರ, ಕಲಾತಂಡಗಳು ಮೆರವಣಿಗೆಯಲ್ಲಿ ಸಾಗಲಿವೆ.ಮೈಸೂರು ಅರಮನೆಯಿಂದ ಹೊಡಲಿರುವ ಜಂಬೂ ಸವಾರಿ ಕೆ.ಆರ್.ಸರ್ಕಲ್ , ಆರ್ಯವೇದ ಸರ್ಕಲ್, ತಿಲಕ್ ನಗರ ಬಂಬೂ ಬಜಾರ್ ಮೂಲಕ ಬನ್ನಿ ಮಂಟಪ್ಪಕ್ಕೆ ತಲುಪಲಿದೆ. ಸುಮಾರು 4 ರಿಂದ 5 ಕಿ ಮೀ ಜಂಬೂ ಸವಾರಿ ನಡೆಯಲಿದೆ.
49 ಟ್ಯಾಬ್ಲೋಗಳು ಭಾಗಿ: ಈ ಬಾರಿ ಜಂಬೂಸವಾರಿ ಮೆರವಣಿಗೆಯಲ್ಲಿ 49 ಟ್ಯಾಬ್ಲೋಗಳು ಭಾಗಿಯಾಗಲಿವೆ. ರಾಜ್ಯಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಕುರಿತ ಸ್ತಬ್ಧ ಚಿತ್ರಗಳು ಸಹ ಇರುತ್ತವೆ. ಈ ಬಾರಿ ದಸರಾ ಮೆರವಣಿಗೆಯಲ್ಲಿ ಗಂಡುಕಲೆ ಎಂತಲೇ ಖ್ಯಾತಿ ಪಡೆದಿರುವ ಆಕರ್ಷಕ ನಂದಿಧ್ವಜ ಕುಣಿತದಲ್ಲಿ ಇದೇ ಮೊದಲ ಬಾರಿಗೆ 108 ನಂದಿಧ್ವಜ ಕುಣಿತ ಮಾಡಲಿದೆ.
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಕಾಂಗ್ರೆಸ್ ಯುವ ಮುಖಂಡರಾದ ರಮೇಶ್ ಗೌಡರವರ ಹುಟ್ಟುಹಬ್ಬವನ್ನು ಶಾಸಕರ ಕಚೇರಿಯಲ್ಲಿ, ಆಚರಿಸಿದರು….
ರಾಜ್ಯದ 25 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ವಾರ್ತಾ ಇಲಾಖೆಯ ಆಯುಕ್ತರಾಗಿ ಹೇಮಂತ್ ನಿಂಬಾಳ್ಳರ್ ವರ್ಗಾವಣೆ
ನಯನ ಕುಮಾರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ವೈದ್ಯರ ದಿನಾಚರಣೆ ಅಂಗವಾಗಿ ಉಚಿತ ತಪಾಸಣಾ…..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.