ಮೈಸೂರು(Mysuru): ದಸರಾ ಕಾರ್ಯಕ್ರಮಗಳಲ್ಲಿ ಜನಮನ್ನಣೆ ಗಳಿಸಿದ ಅರಮನೆ ದಸರಾ ಸಾಂಸ್ಕೃತಿಕ ಕಾರ್ಯಕ್ರಮದ ವೇದಿಕೆ ಸಿದ್ದಪಡಿಸುವ ಕಾರ್ಯ ಭರದಿಂದ ಸಾಗಿದ್ದು, ಅರಮನೆ ಎದುರು ವಿಶಾಲವಾದ ವೇದಿಕೆ ನಿರ್ಮಿಸಲು ಕಾರ್ಮಿಕರು ಕೆಲಸ ಆರಂಭಿಸಿದ್ದಾರೆ.
೧೦*೨೦ ಅಡಿ ಅಗಲದ ವೇದಿಕೆ ನಿರ್ಮಾಣ ಮಾಡಲಿದ್ದು, ದಸರಾ ಮಹೋತ್ಸವದ ಬ್ಯಾಕ್ಡ್ರಾಪ್ ಹೊಂದಿರಲಿದೆ. ಪರ್ಯಾಯವಾಗಿ ಮಳೆ ಬಂದರೆ ಕಾರ್ಯಕ್ರಮ ನಡೆಸಿ ಕೊಡಲು ಅನುಕೂಲವಾಗುವಂತಹ ಮತ್ತೊಂದು ವಾಟರ್ ಪ್ರೂಫ್ ವೇದಿಕೆ ನಿರ್ಮಾಣ ಮಾಡಲಾಗುತ್ತದೆ.
ವಿವಿಐಪಿ, ವಿಐಪಿಗಳು, ಅಧಿಕಾರಿಗಳು, ಪ್ರಾಯೋಜಕತ್ವ ಹೊಂದಿ ದವರಿಗೆ ಪ್ರತ್ಯೇಕ ಗ್ಯಾಲರಿ ನಿರ್ಮಾಣ ಮಾಡಲಾಗಿದೆ. ಎರಡರಿಂದ ಮೂರು ಸಾವಿರ ಮಂದಿಯಷ್ಟು ಕುಳಿತು ಕಾರ್ಯಕ್ರಮ ವೀಕ್ಷಿಸಲು ಆಸನದ ವ್ಯವಸ್ಥೆ ಮಾಡಲಾಗುತ್ತದೆ.
ವೇದಿಕೆ ನಿರ್ಮಾಣದ ಗುತ್ತಿಗೆ ಪಡೆದಿರುವ ಗುತ್ತಿಗೆದಾರರು ಬೇಕಾದ ಎಲ್ಲಾ ಮೆಟಿರಿಯಲ್ಗಳನ್ನು ಲಾರಿಯಲ್ಲಿ ತಂದಿಳಿಸಿದ್ದಾರೆ. ಗಣ್ಯರು ಕೂರಲು ಹೊಸ ಆಸನಗಳನ್ನು ಶೇಖರಿಸಿಡಲಾಗಿದೆ. ಮತ್ತೊಂದು ಬದಿಯಲ್ಲಿ ಬ್ಯಾರಿಕೇಡ್ಗಳನ್ನು ಹಾಕಲಾಗುತ್ತದೆ. ನಿಗದಿತ ಗ್ಯಾಲರಿಗೆ ಹೋಗುವಂತೆ ಮಾಡಬೇಕಿರುವ ಕಾರಣ ಪ್ರವೇಶ ದ್ವಾರದಲ್ಲೇ ಮೂರು ಸಾಲುಗಳನ್ನು ನಿರ್ಮಾಣ ಮಾಡಲಿದ್ದು, ಇದರಿಂದಾಗಿ ಗಣ್ಯರ ಸಾಲಿನಲ್ಲಿ ಸಾರ್ವಜನಿಕರು ಕೂರುವುದನ್ನು ತಡೆಯಲು ಸಾಧ್ಯವಾಗಲಿದೆ.
ಲಂಡನ್ನಲ್ಲಿ ಅನಂತ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್ ಮದುವೆ.
ಲೋಕಸಭಾ ಚುನಾವಣೆಗೆ ಬೆಂಗಳೂರಿನಲ್ಲಿ ನಿಷೇಧಾಗ್ನೆ ಜಾರಿ..
ಮನೆ ಮಾರಾಟಕ್ಕೆಮನೆ ಮಾರಾಟಕ್ಕೆ….
ಅಮೆರಿಕದಲ್ಲೂ ಕೂಡ ಹೆಚ್ಚಾಗುತ್ತಿದ್ದಾರೆ ಭಾರತೀಯರು.
27ರೂ. ಗೆ, 28000 ಸಾವಿರ ದಂಡ.
ಸಿದ್ದರಾಮಯ್ಯ ಅವರಿಗೆ ಫ್ರೀ ಟಿಕೆಟ್ ಹಾರಾ ಅರ್ಪಣೆ…..
ಬಿರುಗಾಳಿಗೆ ಕುಸಿದು ಬಿದ್ದ ಮೊಬೈಲ್ ಟವರ್.
ನಿಜವಾಗಲೂ ಇತ್ತು ವಾಸುಕಿ ಸರ್ಪ….
ರಮ್ಯಾ ಔಟ್, ಐಶ್ವರ್ಯ ಎಂಟ್ರಿ…
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.