ಮೈಸೂರು(Mysuru): ಇನ್ನೆರಡು ದಿನ ನಗರದ ವಿದ್ಯುತ್ ದೀಪಾಲಂಕಾರ ವೀಕ್ಷಣೆಗೆ ಅವಕಾಶ ನೀಡುವ ಕಲ್ಪಿಸುವ ಮೂಲಕ ಸೆಸ್ಕಾಂ ಸಾಂಸ್ಕೃತಿಕ ನಗರಿ ಪ್ರವಾಸಿಗರಿಗೆ ಸಿಹಿ ಸುದ್ದಿ ನೀಡಿದೆ.
ದಸರಾ ಮಹೋತ್ಸವದ ಪ್ರಯುಕ್ತ ನಗರದಲ್ಲಿ ಮಾಡಲಾಗಿದ್ದ ವಿದ್ಯುತ್ ದೀಪಾಲಂಕಾರ ಉತ್ತಮ ಪ್ರತಿಕ್ರಿಯೆ ಮತ್ತು ಇನ್ನಷ್ಟು ದಿನಗಳ ಕಾಲ ಮುಂದುವರಿಸುವಂತೆ ಸಾರ್ವಜನಿಕರು ಮನವಿ ಮಾಡಿದ ಹಿನ್ನೆಲೆಯಲ್ಲಿ ಇನ್ನು ಎರಡು ದಿನ ನಗರದ ಹೃದಯ ಭಾಗದಲ್ಲಿ ಮಾತ್ರ ವಿದ್ಯುತ್ ದೀಪಾಲಂಕಾರವನ್ನು ಮುಂದುವರೆಸಲಾಗುತ್ತಿದೆ.
ಇದುವರೆಗೂ ಒಟ್ಟು 17 ದಿನಗಳ ಕಾಲ ದೀಪಾಲಂಕಾರವನ್ನು ಆಯೋಜಿಸುವ ಮೂಲಕ ಸೋಮವಾರಕ್ಕೆ ಅಂತಿಮಗೊಳಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಸೋಮವಾರ ರಾತ್ರಿ ಅರಮನೆ ಸುತ್ತಲಿನ ರಸ್ತೆಗಳು, ಚಾಮರಾಜ ಜೋಡಿ ರಸ್ತೆ, ಜೆಎಲ್ಬಿ ರಸ್ತೆಗಳಲ್ಲಿ ಹೆಚ್ಚು ಜನಸಂದಣಿ ಕಂಡು ಬಂತು. ಸಾಕಷ್ಟು ಜನರು ಸಂಭ್ರಮದಿಂದ ದೀಪಾಲಂಕಾರ ನೋಡುವಲ್ಲಿ ನಿರತರಾಗಿದ್ದರು.
ಸೆಸ್ಕಾಂ ಎಂಡಿ ಜಯವಿಭವಸ್ವಾಮಿ ಮಾತನಾಡಿ, ದೀಪಾಲಂಕಾರ ಮುಂದುವರಿಕೆಗೆ ಜನಪ್ರತಿನಿಧಿಗಳ, ಸಾರ್ವಜನಿಕರ, ವ್ಯಾಪಾರಸ್ಥರ, ಮಾಧ್ಯಮ ಮಿತ್ರರ ಒತ್ತಾಸೆಯಿದೆ. ಮುಂದುವರಿಕೆ ಮಾಡಿದರೆ ನಿಗಮಕ್ಕೆ ಹೆಚ್ಚುವರಿ ಹೊರೆಯಾಗುತ್ತದೆ. ಆದರೂ ತಮ್ಮೆಲ್ಲರ ಒತ್ತಾಸೆಯ ಮೇರೆಗೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಇಂಧನ ಮತ್ತು ಕನ್ನಡ ಸಂಸ್ಕೃತಿ ಸಚಿವರೊಡನೆ ಸಮಾಲೋಚಿಸಿಸಿದ್ದು, ಮೈಸೂರು ನಗರದ ಹೃದಯಭಾಗ ಹಾಗೂ ಮುಖ್ಯ ಸ್ಥಳಗಳಲ್ಲಿ 2 ದಿನ ಮುಂದುವರೆಸಲು ತೀರ್ಮಾನಿಸಲಾಗಿದೆ ಎಂದಿದ್ದಾರೆ.
ಅಂದರೆ ಅ.11 ಹಾಗೂ ಅ.12 ರಂದು ಸಂಜೆ 6.30 ರಿಂದ ರಾತ್ರಿ 10.30ರವರೆಗೆ ವಿದ್ಯುತ್ ದೀಪಾಲಂಕಾರವನ್ನು ಮೈಸೂರು ನಗರದ ಪ್ರಮುಖ ರಸ್ತೆಗಳು ಮತ್ತು ವೃತ್ತಗಳಲ್ಲಿ ಮುಂದುವರೆಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.