ಮೈಸೂರು(Mysuru): ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಪ್ರಾರಂಭವಾಗಿದ್ದು, ಸಕಲ ಸಿದ್ದತೆಗಳನ್ನು ಕೈಗೊಳ್ಳಲಾಗುತ್ತಿದೆ. ಅಲ್ಲದೇ ದಸರೆಯಲ್ಲಿ ಪ್ರವಾಸಿಗರನ್ನು ಕೈ ಬೀಸಿ ಕರೆಯುವ ದಸರಾ ವಸ್ತುಪ್ರದರ್ಶನ ಈ ಬಾರಿ ಸೆ. 26 ರಿಂದ ಪ್ರಾರಂಭಗೊಳ್ಳಲಿದೆ.
ಈ ಕುರಿತು ಸುದ್ದಿಗೋಷ್ಟಿಯಲ್ಲಿ ಮಾತನಾಡಿ ಮಾಹಿತಿ ನೀಡಿದ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಮಿರ್ಲೆ ಶ್ರೀನಿವಾಸಮೂರ್ತಿ , ವಿಶೇಷ ಕಾರ್ಯಕ್ರಮಗಳೊಂದಿಗೆ 90 ದಿನಗಳ ಕಾಲ ವಸ್ತುಪ್ರದರ್ಶನ ಆಯೋಜನೆ ಮಾಡಲಾಗಿದೆ. ಈ ಬಾರಿಯ ವಸ್ತುಪ್ರದರ್ಶನದಲ್ಲಿ ಪುನೀತ್ ರಾಜ್ ಕುಮಾರ್ ನೆನಪಿಗಾಗಿ 7 ಸ್ಯಾಂಡ್ ಮ್ಯೂಸಿಯಂ ಆಯೋಜನೆ ಮಾಡಲಾಗಿದೆ, ಯೋಗ 3ಡಿ ವಿಡಿಯೋ ಮ್ಯಾಪಿಂಗ್ ಇರಲಿದೆ ಎಂದರು.
6 ಮಂದಿ ಸ್ವಾತಂತ್ರ್ಯ ಹೋರಾಟಗಾರರ ಮರಳಾಕೃತಿ ನಿರ್ಮಿಸಲಾಗುತ್ತದೆ, ಆ 6 ಮಂದಿ ಸ್ವಾತಂತ್ರ್ಯ ಹೋರಾಟಗಾರರನ್ನು ಇನ್ನು ಆಯ್ಕೆ ಮಾಡಿಲ್ಲ. ಇನ್ನು ಕಾವೇರಿ ಬಹುಮಾಧ್ಯಮ ಕಲಾ ಗ್ಯಾಲರಿ ಉದ್ಘಾಟನೆಯಾಗಲಿದೆ.
ಹಾಗೆಯೇ ಆವರಣದಲ್ಲಿ ವೆಜ್ ಅಂಡ್ ನಾನ್ ವೆಜ್ ಪ್ರತ್ಯೇಕ ಸ್ಟಾಲ್ ಇರಲಿದೆ. ವಸ್ತುಪ್ರದರ್ಶನದ ಅವರಣವನ್ನು ಪ್ಲಾಸ್ಟಿಕ್ ಮುಕ್ತ ವಲಯ ಎಂದು ಘೋಷಣೆ ಹಿನ್ನೆಲೆ ಪ್ಲಾಸ್ಟಿಕ್ ಬಳಸುವಂತಿಲ್ಲ. ಪ್ಲಾಸ್ಟಿಕ್ ಬಳಕೆ ತಡೆಗಟ್ಟಲು ಪ್ರಾಧಿಕಾರದ ವತಿಯಿಂದಲೇ ಆರ್ ಓ ಪ್ಲಾಂಟ್ ಮೂಲಕ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗುತ್ತದೆ ಎಂದು ತಿಳಿಸಿದರು.
ನಯನ ಕುಮಾರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ವೈದ್ಯರ ದಿನಾಚರಣೆ ಅಂಗವಾಗಿ ಉಚಿತ ತಪಾಸಣಾ…..
ITBT ಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಆರ್ಜಿ ಸ್ವೀಕಾರ..!
'ಓಲ್ಡ್ ಈಸ್ ಗೋಲ್ಡ್' ಕರೋಕೆ ಗಾಯನ ಕಾರ್ಯಕ್ರಮ
ಅಪ್ಪ ಅಮ್ಮ ಅಪ್ಪು, ಎಂಬ ಚಿತ್ರದ ಧ್ವನಿಸುರುಳಿ ಬಿಡುಗಡೆ
ಭಾರತೀಯ ನ್ಯಾಯ ಸಮಿತಿ 2023 ಜುಲೈ 1, 2024 ರಿಂದ ಜಾರಿ!
ಮೈಸೂರಿನ ವಾಸನ್ ಐ ಕೇರ್ ನ 14ನೇ ವಾರ್ಷಿಕೋತ್ಸವದ ಆಚರಣೆ
"ವಾಲ್ಮೀಕಿ ಅಭಿವೃದ್ಧಿ ನಿಗಮ" ದಲ್ಲಿ ನಡೆದ ಬ್ರಹ್ಮಾಂಡ ಭ್ರಷ್ಟಾಚಾರ ಖಂಡಿಸಿ ಬೃಹತ್ ಪ್ರತಿಭಟನೆ
ಮೈಸೂರಿನಲ್ಲಿ,"ದಿ ಜ್ಯುವೆಲರಿ ಶೋ" ಉದ್ಘಟಿಸಿದ ನಟಿ ಆರಾಧನ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.