ಮೈಸೂರು(Mysuru): ವಿಶ್ವ ವಿಖ್ಯಾತ ದಸರಾಗೆ ದಿನಗಣನೆ ಆರಂಭವಾಗಿದ್ದು, ಅರಮನೆ ನಗರಿ ಜಗಮಗಿಸಲು ಸಿದ್ದಗೊಳ್ಳುತ್ತಿದೆ. ಈ ಬಾರಿ ದಿವಂಗತ ನಟ ಪುನೀತ್ ರಾಜ್ ಕುಮಾರ್ ಆಕೃತಿ ಪ್ರವಾಸಿಗರನ್ನು ಸೆಳೆಯಲಿದೆ.
ಈ ಕುರಿತು ಮಾಹಿತಿ ನೀಡಿದ ಸಂಸದ ಪ್ರತಾಪ್ ಸಿಂಹ, ಈ ಬಾರಿ ಒಟ್ಟು 124 ಕಿ ಮೀ ರಸ್ತೆಯಲ್ಲಿ ವಿದ್ಯುತ್ ದೀಪಾಲಂಕಾರ ಮಾಡಲಾಗುತ್ತದೆ. 96 ವೃತ್ತಗಳಲ್ಲಿ ವಿಶೇಷ ದೀಪಾಲಂಕಾರವಿರಲಿದೆ. ಕಳೆದ ಬಾರಿಗಿಂತ ಹೆಚ್ಚುವರಿಯಾಗಿ ದೀಪಾಲಂಕಾರ ಮಾಡಲಾಗುತ್ತಿದ್ದು, ವೀಕ್ಷಣೆಯ ಅವಧಿಯನ್ನು ವಿಸ್ತರಣೆ ಮಾಡಲಾಗುತ್ತಿದೆ ಎಂದರು.
ಕಳೆದ ವರ್ಷ ನಿಧನರಾದ. ಪುನೀತ್ ರಾಜ್’ಕುಮಾರ್ ಸೇರಿದಂತೆ 28 ವಿವಿಧ ಬಗೆಯ ಪ್ರತಿಕೃತಿಗಳು ಈ ಬಾರಿಯ ದಸರಾ ದೀಪಾಲಂಕಾರದ ಆಕರ್ಷಣೆಯಾಗಿರಲಿಗೆ ಎಂದು ತಿಳಿಸಿದರು.
ಇನ್ನು ರಾತ್ರಿ 7 ಗಂಟೆಯಿಂದ 10:30ರವರೆಗೂ ವಿದ್ಯುತ್ ದೀಪಾಲಂಕಾರ ವೀಕ್ಷಣೆಗೆ ಅವಕಾಶವಿದ್ದು, ರಾತ್ರಿ 11ರವರೆಗೂ ವಿಸ್ತರಣೆ ಮಾಡಲು ಚಿಂತನೆ ನಡೆಸಲಾಗಿದೆ. ಮೈಸೂರಿಗೆ ಸಂಪರ್ಕ ಕಲ್ಪಿಸುವ ಸ್ಥಳಗಳಲ್ಲಿ ವಿದ್ಯುತ್ ದೀಪಗಳಿಂದ ದ್ವಾರಗಳ ನಿರ್ಮಾಣ, ವಿಮಾನ ನಿಲ್ದಾಣದಿಂದ ಮೈಸೂರಿನವರೆಗೂ ವಿಶೇಷ ದೀಪಾಲಂಕಾರ ಮಾಡಲಾಗುತ್ತದೆ ಎಂದು ತಿಳಿಸಿದರು.
ಏಪ್ರಿಲ್ 26ಕ್ಕೆ ಮೊದಲ ಹಂತದ ಚುನಾವಣೆ……
'ಕೈ' ಪರ ಪ್ರಚಾರದಲ್ಲಿದ್ದಾಗ ತಡೆದ ಬಿಜೆಪಿ ಕಾರ್ಯಕರ್ತರು….
ಹಿರಿಯ ನಾಗರಿಕರಿಗೆ ಹಾಗೂ ಅಂಗವಿಕಲರಿಗೆ ರಾಪಿಡೋ ವತಿಯಿಂದ ಸಿಹಿ ಸುದ್ದಿ
ಏಪ್ರಿಲ್ 26ಕ್ಕೆ ಏನೆಲ್ಲ ಲಭ್ಯವಿರುತ್ತದೆ….
ಲಂಡನ್ನಲ್ಲಿ ಅನಂತ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್ ಮದುವೆ.
ಲೋಕಸಭಾ ಚುನಾವಣೆಗೆ ಬೆಂಗಳೂರಿನಲ್ಲಿ ನಿಷೇಧಾಗ್ನೆ ಜಾರಿ..
ಮನೆ ಮಾರಾಟಕ್ಕೆಮನೆ ಮಾರಾಟಕ್ಕೆ….
ಅಮೆರಿಕದಲ್ಲೂ ಕೂಡ ಹೆಚ್ಚಾಗುತ್ತಿದ್ದಾರೆ ಭಾರತೀಯರು.
27ರೂ. ಗೆ, 28000 ಸಾವಿರ ದಂಡ.
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.