ಬೆಂಗಳೂರು: ಭಟ್ಕಳದಲ್ಲಿ ಮಾಂಸಾಹಾರ ಸೇವಿಸಿ ನಾಗಬನ ಹಾಗೂ ಹನುಮ ದೇವಾಲಯಕ್ಕೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಭೇಟಿ ನೀಡಿದ್ದರು ಎಂಬ ವಿಚಾರ ಸಾಕಷ್ಟು ಟೀಕೆಗೆ ಗ್ರಾಸವಾಗಿತ್ತು. ಈ ಕುರಿತು ಇಂದು ಸರಣಿ ಟ್ವೀಟ್ ಮಾಡಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸಿ.ಟಿ.ರವಿ ವಿರುದ್ಧ ಕಿಡಿಕಾರಿದ್ದಾರೆ.
ಮಾಂಸ ತಿಂದು ದೇವಸ್ಥಾನಕ್ಕೆ ಹೋಗಿರುವ ವಿಡಿಯೋ ಜಗತ್ತಿಗೆಲ್ಲ ಸತ್ಯ ಸಾರುತ್ತಿರುವಾಗ “ತಾನು ತಿಂದದ್ದು ನಿಜ, ದೇವಸ್ಥಾನದ ಒಳಪ್ರವೇಶಿಸಿಲ್ಲ, ರಸ್ತೆಯಲ್ಲಿಯೇ ನಿಂತು ಕೈಮುಗಿದಿದ್ದೆ’’ ಎಂಬ ಸಿ ಟಿ ರವಿ ಅವರ ವಾದ, ಸದಾ ಹಸಿಹಸಿ ಸುಳ್ಳು ಹೇಳುವ ಅವರ ಹುಟ್ಟು ಗುಣಕ್ಕೆ ತಕ್ಕ ಹಾಗೆ ಇದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಮಾಂಸ ತಿನ್ನುವುದು ತಿನ್ನದಿರುವುದು, ದೇವಸ್ಥಾನಗಳಿಗೆ ಹೋಗುವುದು ಹೋಗದಿರುವುದು ವೈಯಕ್ತಿಕ ಆಯ್ಕೆಗಳು. ಇದು ರಾಜಕೀಯ ಚರ್ಚೆಯ ವಸ್ತು ಆಗಬಾರದು. ರಾಜಕೀಯ ನಾಯಕರು ಜನತೆಯ ಕಲ್ಯಾಣ, ರಾಜ್ಯದ ಅಭಿವೃದ್ದಿ ಬಗ್ಗೆ ಚರ್ಚಿಸಬೇಕು. ಪರದೂಷಣೆಯಲ್ಲಿ ನಿರತರಾಗಿರುವ ಬಿಜೆಪಿಯ ಸಿಟಿ ರವಿ ಅವರಿಗೆ ದೇವರು ಒಳ್ಳೆಯ ಬುದ್ದಿ ಕೊಡಲಿ ಎಂದು ಹೇಳಿದ್ದಾರೆ.
ನಾನು ಮೀನು ತಿಂದು ದೇವಸ್ಥಾನಕ್ಕೆ ಹೋಗಿದ್ದೆ ಎಂಬ ಸುಳ್ಳು ಸುದ್ದಿಯನ್ನೇ ಪ್ರಚಾರ ಮಾಡಿ ನನ್ನನ್ನು ಹಿಂದೂ ವಿರೋಧಿ ಎಂದು ಬಿಜೆಪಿ ನಾಯಕರು ನಾಯಕರು ಪ್ರಚಾರ ಮಾಡಿದ್ದರು. ಆ ರೀತಿ ಅಪಪ್ರಚಾರ ಮಾಡಿದವರೆಲ್ಲರೂ ಈಗ ಸಿ ಟಿ ರವಿ ಅವರ ಕೃತ್ಯದಿಂದಾಗಿ ತಾವು ಮಾಡಿದ್ದ ವಾಂತಿಯನ್ನು ತಾವೇ ತಿನ್ನುವಂತಾಗಿದೆ ಎಂದಿದ್ದಾರೆ.
ನಾನು ಮೀನು ತಿಂದು ದೇವಸ್ಥಾನಕ್ಕೆ ಹೋಗಿದ್ದೆ ಎಂಬ ಬಿಜೆಪಿ ನಾಯಕರ ಸುಳ್ಳು ಸುದ್ದಿಯನ್ನು ನಂಬಿ ನನ್ನನ್ನು ಟೀಕಿಸಿದ್ದ ರಾಜ್ಯದ ಕೆಲವು ಮಠಾಧೀಶರು, ಸಿ.ಟಿ.ರವಿ ಅವರು ಮಾಂಸತಿಂದು ದೇವಸ್ಥಾನಕ್ಕೆ ಹೋಗಿರುವ ಬಗ್ಗೆ ಮೌನವಾಗಿರುವುದು ನನಗೆ ಅಚ್ಚರಿ ಉಂಟುಮಾಡಿದೆ ಎಂದು ಟ್ವೀಟ್ ನಲ್ಲಿ ಹೇಳಿದ್ದಾರೆ.
'ಕೈ' ಪರ ಪ್ರಚಾರದಲ್ಲಿದ್ದಾಗ ತಡೆದ ಬಿಜೆಪಿ ಕಾರ್ಯಕರ್ತರು….
ಹಿರಿಯ ನಾಗರಿಕರಿಗೆ ಹಾಗೂ ಅಂಗವಿಕಲರಿಗೆ ರಾಪಿಡೋ ವತಿಯಿಂದ ಸಿಹಿ ಸುದ್ದಿ
ಏಪ್ರಿಲ್ 26ಕ್ಕೆ ಏನೆಲ್ಲ ಲಭ್ಯವಿರುತ್ತದೆ….
ಲಂಡನ್ನಲ್ಲಿ ಅನಂತ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್ ಮದುವೆ.
ಲೋಕಸಭಾ ಚುನಾವಣೆಗೆ ಬೆಂಗಳೂರಿನಲ್ಲಿ ನಿಷೇಧಾಗ್ನೆ ಜಾರಿ..
ಮನೆ ಮಾರಾಟಕ್ಕೆಮನೆ ಮಾರಾಟಕ್ಕೆ….
ಅಮೆರಿಕದಲ್ಲೂ ಕೂಡ ಹೆಚ್ಚಾಗುತ್ತಿದ್ದಾರೆ ಭಾರತೀಯರು.
27ರೂ. ಗೆ, 28000 ಸಾವಿರ ದಂಡ.
ಸಿದ್ದರಾಮಯ್ಯ ಅವರಿಗೆ ಫ್ರೀ ಟಿಕೆಟ್ ಹಾರಾ ಅರ್ಪಣೆ…..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.