ಮನೆ ಆರೋಗ್ಯ ಮಧುಮೇಹದಿಂದ ಮುಕ್ತಿ ಪಡೆಯಲು ವಾರಕ್ಕೊಮ್ಮೆ ಈ ತರಕಾರಿ ಸೇವಿಸಿ

ಮಧುಮೇಹದಿಂದ ಮುಕ್ತಿ ಪಡೆಯಲು ವಾರಕ್ಕೊಮ್ಮೆ ಈ ತರಕಾರಿ ಸೇವಿಸಿ

0

ತರಕಾರಿಗಳನ್ನು ತಿನ್ನುವುದು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಅದರಲ್ಲೂ ಮಧುಮೇಹಿಗಳು ಕೆಲವು ನಿರ್ದಿಷ್ಟ ತರಕಾರಿಗಳನ್ನು ನಿಯಮಿತವಾಗಿ ತಿಂದರೆ ರಕ್ತದಲ್ಲಿನ ಸಕ್ಕರೆ ಪ್ರಮಾಣ ತಗ್ಗುತ್ತದೆ.

Join Our Whatsapp Group

ಹಾಗಾದರೆ ಯಾವ ತರಕಾರಿಗಳನ್ನು ತಿನ್ನುವುದರಿಂದ ಮಧುಮೇಹ ರೋಗಿಗಳ ರಕ್ತದಲ್ಲಿನ ಸಕ್ಕರೆ ನಿಯಂತ್ರಣದಲ್ಲಿರುತ್ತದೆ ಎಂಬ ಮಾಹಿತಿಯನ್ನು ತಿಳಿಯೋಣ. ಈ ಐದು ಆಹಾರಗಳನ್ನು ವಾರದಲ್ಲಿ ಒಮ್ಮೆಯಾದ್ರೂ ತಿಂದರೆ ನಿಜಕ್ಕೂ ಪರಿಣಾಮಕಾರಿ ಎನಿಸಿಕೊಳ್ಳುತ್ತದೆ.

ಪಾಲಕ್ ಸೊಪ್ಪು: ಸಕ್ಕರೆ ರೋಗಿಗಳು ಪಾಲಕ್ ಸೊಪ್ಪನ್ನು ಕಡ್ಡಾಯವಾಗಿ ಸೇವಿಸಬೇಕು. ಇದು ಇನ್ಸುಲಿನ್ ಅನ್ನು ಸುಧಾರಿಸುತ್ತದೆ. ಪಾಲಕ್ ರಸವನ್ನು ಕುಡಿಯುವುದು ಕೂಡ ತುಂಬಾ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಪಾಲಕ್ ಸೊಪ್ಪನ್ನು ತಿನ್ನುವ ಮೂಲಕವೂ ರಕ್ತದೊತ್ತಡವನ್ನು ನಿಯಂತ್ರಿಸಬಹುದು.

ಸೌತೆಕಾಯಿ: ಮೆಡಿಕಲ್ ನ್ಯೂಸ್ ಟುಡೇ ವರದಿಯ ಪ್ರಕಾರ, ಸೌತೆಕಾಯಿಯ ಸೇವನೆಯು ಸಕ್ಕರೆ ರೋಗಿಗಳಿಗೆ ಸಹ ಪ್ರಯೋಜನಕಾರಿ. ಸೌತೆಕಾಯಿಯಲ್ಲಿರುವ ನೀರಿನ ಅಂಶವು ಸಕ್ಕರೆಯನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.

ಎಲೆಕೋಸು: ಈ ತರಕಾರಿ ತಿನ್ನಲು ರುಚಿಯಾಗಿರುತ್ತದೆ, ಆರೋಗ್ಯಕ್ಕೂ ಪ್ರಯೋಜನಕಾರಿಯಾಗಿದೆ. ಎಲೆಕೋಸು ಉತ್ತಮ ಪ್ರಮಾಣದ ಫೈಬರ್ ಅನ್ನು ಹೊಂದಿರುತ್ತದೆ, ಇದು ರಕ್ತದಲ್ಲಿನ ಸಕ್ಕರೆಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಟೊಮೆಟೊ:. ಟೊಮೆಟೊ ಲೈಕೋಪೀನ್ ಎಂಬ ಆಂಟಿಆಕ್ಸಿಡೆಂಟ್ ಅನ್ನು ಹೊಂದಿರುತ್ತದೆ, ಇದು ರಕ್ತದಲ್ಲಿನ ಸಕ್ಕರೆಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದನ್ನು ನೀವು ಹಸಿಯಾಗಿ, ಬೇಯಿಸಿಯೂ ತಿನ್ನಬಹುದು.

ಬೆಂಡೆಕಾಯಿ: ಬೆಂಡೆಕಾಯಿ ರಕ್ತದಲ್ಲಿನ ಸಕ್ಕರೆಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಎಂದು ಅನೇಕ ಅಧ್ಯಯನಗಳಲ್ಲಿ ತಿಳಿದುಬಂದಿದೆ. ಬೆಂಡೆಕಾಯಿ ಫೈಬರ್ ಅನ್ನು ಹೊಂದಿರುತ್ತದೆ. ಇದು ನಿಮ್ಮ ಕರುಳನ್ನು ತಲುಪುವ ಮೂಲಕ ಸಕ್ಕರೆ ಹೀರಿಕೊಳ್ಳುವಿಕೆಯನ್ನು ನಿಧಾನಗೊಳಿಸುತ್ತದೆ.

ಹಿಂದಿನ ಲೇಖನಬಾರೆ ವೆಂಕಟರಮಣಿ ಶ್ರೀದೇವಿ
ಮುಂದಿನ ಲೇಖನಕುತ್ತಿಗೆ, ಬೆನ್ನು ನೋವನ್ನು ಕಡಿಮೆ ಮಾಡಲು ಅತ್ಯುತ್ತಮ ಯೋಗ ಭಂಗಿಗಳು