ಬೆಂಗಳೂರು: ಚುನಾವಣಾ ಅಕ್ರಮದ ಮೇಲೆ ನಿಗಾವಹಿಸಿರುವ ವಿವಿಧ ತನಿಖಾ ತಂಡಗಳು ಸೋಮವಾರ ಒಟ್ಟು 2.68 ಕೋಟಿ ರೂ. ನಗದು, 7.06 ಕೋಟಿ ರೂ. ಮೌಲ್ಯದ ಮೂರು ಕೆಜಿ ಚಿನ್ನಾಭರಣ, 68 ಕೆಜಿ ಬೆಳ್ಳಿ, 103 ಕೆಜಿ ಹಳೆ ಬೆಳ್ಳಿಯನ್ನು ಜಪ್ತಿ ಮಾಡಿವೆ.
ಲೋಕಸಭೆ ಚುನಾವಣೆ ಹಿನ್ನೆಲೆ ನೀತಿ ಸಂಹಿತೆ ಜಾರಿಯಾದ ಬಳಿಕ ಇದುವರೆಗೆ 44.09 ಕೋಟಿ ರೂ. ನಗದು ಸೇರಿ 288 ಕೋಟಿ ರೂ. ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.
ಇದರಲ್ಲಿ 134 ಕೋಟಿ ರೂ. ಮೌಲ್ಯದ 1.39 ಕೋಟಿ ಲೀಟರ್ ಮದ್ಯ, 9.54 ಕೋಟಿ ರೂ. ಮೌಲ್ಯದ 339 ಕೆಜಿ ಮಾದಕ ವಸ್ತುಗಳು, 10.56 ಕೋಟಿ ರೂ. ಮೌಲ್ಯದ 19 ಕೆಜಿ ಚಿನ್ನ, 69.23 ಲಕ್ಷ ರೂ. ಮೌಲ್ಯದ 230 ಕೆಜಿ ಬೆಳ್ಳಿ ಸೇರಿದೆ ಎಂದು ಮುಖ್ಯ ಚುನಾವಣಾಧಿಕಾರಿ ಕಚೇರಿ ತಿಳಿಸಿದೆ.
ಬಳ್ಳಾರಿ ಲೋಕಸಭಾ ಕ್ಷೇತ್ರದಲ್ಲಿ 7.06 ಕೋಟಿ ರೂ. ಮೌಲ್ಯದ 3 ಕೆಜಿ ಚಿನ್ನ, 68 ಕೆಜಿ ಬೆಳ್ಳಿ, 103 ಕೆಜಿ ಹಳೇ ಬೆಳ್ಳಿ, 5.60 ಲಕ್ಷ ರೂ. ನಗದು ವಶಪಡಿಸಿಕೊಳ್ಳಲಾಗಿದೆ. ಬೆಂಗಳೂರು ಉತ್ತರ ಕ್ಷೇತ್ರದಲ್ಲಿ 10 ಲಕ್ಷ ರೂ. ಮೌಲ್ಯದ 1,411 ಫ್ಯಾನ್ಸ್ ಪರಿಕರಗಳ ಜಪ್ತಿ ಮತ್ತು ಬೆಂಗಳೂರು ಕೇಂದ್ರ ಕ್ಷೇತ್ರದಲ್ಲಿ 2.62 ಕೋಟಿ ರೂ. ನಗದು ವಶಪಡಿಸಿಕೊಳ್ಳಲಾಗಿದೆ ಎಂದು ಕಚೇರಿ ಮಾಹಿತಿ ನೀಡಿದೆ.
ಮತದಾರನಿಗೆ YSR ಕಾಂಗ್ರೆಸ್ ಶಾಸಕನಿಂದ ಕಪಾಳ ಮೋಕ್ಷ…
ಮೋದಿ ಇಂದು ಪಟ್ನಾ ಸಾಹಿಬ್ ಗುರುದ್ವಾರಕ್ಕೆ ಭೇಟಿ ನೀಡಿದ್ರು
ರಾಜಕೀಯ ಕೊನೆಗಾಲದಲ್ಲಿ ನನ್ನ ಕೈ ಹಿಡಿದವರು ದೇವೇಗೌಡರು ಜೆಡಿಎಸ್ ಶಾಸಕ ಎ.ಮಂಜು ಹೇಳಿಕೆ.
HSRP ನಂಬರ್ ಪ್ಲೇಟ್ ಅಳವಡಿಸಿಲ್ವಾ ? ಹಾಗಿದ್ರೆ ದಂಡ ಬೀಳೋದು ಖಚಿತ…!
ಹ್ಯಾಪಿ ಮದರ್ಸ್ ಡೇ…….
ಹ್ಯಾಪಿ ಮದರ್ಸ್ ಡೇ…..
ಅಕ್ಷಯ ತೃತೀಯದಂದು ಚಿನ್ನ ಬೆಳ್ಳಿ ಮಾರಾಟದಲ್ಲಿ ಹೊಸ ದಾಖಲೆ..!
ಹೆಚ್ಚು ಹೊತ್ತು ಮೆಟ್ರೋದಲ್ಲಿ ಇದ್ದ ಕಾರಣ ದಂಡ ವಿಧಿಸಲಾಗಿದೆ…
ಲೆಮನ್ ಜ್ಯೂಸ್ ಆರೋಗ್ಯಕ್ಕೆ ಉತ್ತಮ..!
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.