ಮನೆ ರಾಜಕೀಯ ಅಕ್ಟೋಬರ್ 16 ರಂದು ಕೆಪಿಸಿಸಿ ನೂತನ ಅಧ್ಯಕ್ಷರ ಚುನಾವಣೆ: ಡಿಕೆಶಿ

ಅಕ್ಟೋಬರ್ 16 ರಂದು ಕೆಪಿಸಿಸಿ ನೂತನ ಅಧ್ಯಕ್ಷರ ಚುನಾವಣೆ: ಡಿಕೆಶಿ

0

ರಾಯಚೂರು(Raichuru): ಅಕ್ಟೋಬರ್ 16 ರಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ನೂತನ ಅಧ್ಯಕ್ಷರ ಆಯ್ಕೆಗೆ ಚುನಾವಣೆ ನಡೆಯಲಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.

ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಭಾರತ ಜೋಡೋ ಪೂರ್ವಭಾವಿ ಸಭೆಗೂ ಮುನ್ನ ಮಾತನಾಡಿದ ಅವರು, ಬೆಂಗಳೂರಿನ ಅಂಬೇಡ್ಕರ್ ಭವನದಲ್ಲಿ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸಲಾಗುತ್ತದೆ. ಅಧ್ಯಕ್ಷ ಸ್ಥಾನಕ್ಕೆ ಪಕ್ಷದ ನಿಯಮಾಳಿಗಳ‌ ಮಾನದಂಡದಂತೆ ಸದಸ್ಯರು ಸ್ಪರ್ಧೆ ಮಾಡಬಹುದಾಗಿದೆ ಎಂದು ತಿಳಿಸಿದ್ದಾರೆ.

ನೀವು ಮತ್ತೊಮ್ಮೆ ಸ್ಪರ್ಧೆ ಮಾಡುತ್ತೀರಾ? ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಸದ್ಯ ನನ್ನ ಎರಡು ವರ್ಷ ಅವಧಿ ಮುಗಿಯುತ್ತಿದೆ. ಮತ್ತೆ ಸ್ಪರ್ಧೆ ಮಾಡಬೇಕೋ ಬೇಡವೋ ಎಂಬುದನ್ನು ನಾಯಕರು ತೀರ್ಮಾನ ಮಾಡುತ್ತಾರೆ ಎಂದು  ಹೇಳಿದರು.

ರಾಹುಲ್ ಗಾಂಧಿ ಸ್ಪರ್ಧೆ ಬಗ್ಗೆ ನನಗೆ ಗೊತ್ತಿಲ್ಲ. ರಾಜ್ಯ, ದೇಶ ಒಂದು ಮಾಡಲು ಅವರು ನಡೆಯುತ್ತಿದ್ದಾರೆ. ಬೆಲೆ ಏರಿಕೆ ತಪ್ಪಿಸಲು, ರೈತರಿಗೆ ಪ್ರೋತ್ಸಾಹ ಬೆಲೆ ಸಿಗಲು ನಡೆಯುತ್ತಿದ್ದಾರೆ. ಬಿಜೆಪಿಯವರು ಈಗ ಏನು ಬಯಲಿಗೆಳೆಯುತ್ತಾರೆ?.ಶೇ40ರಷ್ಟು ಕಮಿಷನ್ ಆರೋಪ ನಾವು ಮಾಡುತ್ತಿದ್ದೇವೆ. ಬಿಜೆಪಿಯ ಗೊಡ್ಡು ಬೆದರಿಕೆಗೆ ನಾವು ಹೆದರುವುದಿಲ್ಲ. ಯಾವ ಸವಾಲು ಬೇಕಾದರೂ ನಾವು ಎದುರಿಸಲು ಸಿದ್ಧವಾಗಿದ್ದೇವೆ ಎಂದು ಹೇಳಿದರು.

ಅಕ್ಟೋಬರ್ 22 ಮತ್ತು 23 ರಂದು ಭಾರತ ಜೋಡೋ ಪಾದಯಾತ್ರೆ ರಾಯಚೂರು ಜಿಲ್ಲೆಗೆ ಬರಲಿದೆ. ಕೃಷ್ಣಾ ನದಿಯಿಂದ ತುಂಗಭದ್ರಾ ನದಿವರೆಗೂ ಪಾದಯಾತ್ರೆ ನಡೆಸುವರು. ರಾಹುಲ್ ಗಾಂಧಿಯವರು ತಮ್ಮ ಕಬ್ಬಿಣದ ಕಾಲುಗಳ ಮೂಲಕ ಸಮಾಜದ ಎಲ್ಲ ಜನರನ್ನು ಜೋಡಿಸುವ ಕೆಲಸವನ್ನು ಸೂಜಿಯ ರೀತಿಯಲ್ಲಿ ಹೊಲಿಯುವ ಮೂಲಕ ಮಾಡುತ್ತಿದ್ದಾರೆ ಎಂದರು.

ಹಿಂದಿನ ಲೇಖನಓಪನ್ ಗ್ರ್ಯಾನ್‌ಸ್ಲಾಮ್ ಟೆನಿಸ್ ಟೂರ್ನಿ: ಚೊಚ್ಚಲ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದ ಕಾರ್ಲೊಸ್‌ ಅಲ್ಕರಾಜ್‌
ಮುಂದಿನ ಲೇಖನನಕ್ಕು ನಗಿಸುವ ಹಾಸ್ಯ