ಬೆಂಗಳೂರು: ಟ್ಯಾಕ್ಸಿ, ಕ್ಯಾಬ್ ಸೇರಿದಂತೆ ಸಾರ್ವಜನಿಕ ಸೇವಾ ವಾಹನಗಳಿಗೆ ವೆಹಿಕಲ್ ಲೋಕೇಷನ್ ಟ್ರ್ಯಾಕಿಂಗ್ ಡಿವೈಸ್ (ವಿಎಲ್ಟಿ) ಮತ್ತು ಎಮರ್ಜೆನ್ಸಿ ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಡಿಸೆಂಬರ್ 1ರಿಂದ ಈ ಆದೇಶ ಜಾರಿಗೆ ಬರಲಿದೆ. ಆದರೆ ಎಲ್ಲಾ ಅಳವಡಿಕೆಗೆ 2024ರ ನವೆಂಬರ್ 30ರವರೆಗೆ ಅಂದರೆ ಒಂದು ವರ್ಷ ಅವಧಿಯ ಅವಕಾಶವನ್ನು ನೀಡಿದೆ.
ರಾಜ್ಯದಲ್ಲಿ ಮಹಿಳೆಯರು, ಮಕ್ಕಳು ಹಾಗೂ ಪ್ರಯಾಣಿಕರ ಸುರಕ್ಷತೆಗಾಗಿ ಸಾರ್ವಜನಿಕ ಸೇವೆ ಇರುವ ಖಾಸಗಿ ವಾಹನಗಳಿಗೆ ಎಮರ್ಜೆನ್ಸಿ ಪ್ಯಾನಿಕ್ ಬಟನ್ ಅಳವಡಿಸುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಈ ಕೆಲಸ ಶೀಘ್ರವಾಗಿ ಆಗಬೇಕಿರುವುದರಿಂದ ಆರ್ ಟಿಒಗಳಲ್ಲಿ ಈ ಯೋಜನೆಗೆ ಒಳಪಡುವ ವಾಹನಗಳಿಗೆ ಮಾತ್ರ ಎಫ್.ಸಿ ನವೀಕರಣಕ್ಕೆ ಸೂಚನೆ ನೀಡಲಾಗಿದೆ.
ಕೇಂದ್ರ ಹಾಗೂ ರಾಜ್ಯ ಸರ್ಕಾರದ 60:40 ಅನುಪಾತದ ಸಹಭಾಗಿತ್ವದಲ್ಲಿ ಸಾರ್ವಜನಿಕ ಸೇವಾ ವಾಹನಗಳಲ್ಲಿ ಈ ಡಿವೈಸ್ ಅಳವಡಿಕೆಗೆ ಒಪ್ಪಿಗೆ ನೀಡಲಾಗಿದೆ. ಈ ಯೋಜನೆ ಜಾರಿಗೆ 2035.90 ಲಕ್ಷಗಳ ವೆಚ್ಚಕ್ಕೆ ಅನುಮೋದನೆ ನೀಡಲಾಗಿದ್ದು, ವಾಹನ ಮಾಲೀಕರು ಅರ್ಹ ಕಂಪನಿಗಳಿಂದ ಪ್ಯಾನಿಕ್ ಬಟನ್ ಅಳವಡಿಸಬೇಕು ಎಂದು ತಿಳಿಸಲಾಗಿದೆ.
ಪ್ಯಾನಿಕ್ ಬಟನ್ ಒಳಗೊಂಡ ವೆಹಿಕಲ್ ಲೊಕೇಷನ್ ಟ್ರ್ಯಾಕಿಂಗ್ ಡಿವೈಸ್ ಅಳವಡಿಸಲು 7,599 ರೂಪಾಯಿ ನಿಗದಿ ಮಾಡಲಾಗಿದೆ. ಡಿಸೆಂಬರ್ 1 ರಿಂದಲೇ ಈ ಯೋಜನೆ ಪ್ರಾರಂಭವಾಗಲಿದೆ. ಒಂದು ವರ್ಷದೊಳಗೆ(30/11/24 ) ಪರ್ಮಿಟ್ ವಾಹನಗಳು ಈ ಸಾಧನಗಳನ್ನ ಅಳವಡಿಸಿರಬೇಕು. ಇಲ್ಲವಾದಲ್ಲಿ ಸಾರಿಗೆ ಇಲಾಖೆಯಿಂದ ಕ್ರಮ ಕೈಗೊಳ್ಳಲಾಗುತ್ತದೆ. ಅಲ್ಲದೇ ಡಿವೈಸ್ ಅಳವಡಿಕೆ ಮಾಡದಿದ್ದರೆ ಎಫ್ ಸಿ ನವೀಕರಣವಾಗಲ್ಲ ಎಂದು ರಾಜ್ಯ ಸಾರಿಗೆ ಇಲಾಖೆ ಆದೇಶದಲ್ಲಿ ಉಲ್ಲೇಖಿಸಿದೆ.
ಯೆಲ್ಲೋ ಬೋರ್ಡ್ ನ ಟ್ಯಾಕ್ಸಿಗಳು, ಕ್ಯಾಬ್ ಗಳು, ಖಾಸಗಿ ಬಸ್ ಗಳು, ನ್ಯಾಷನಲ್ ಪರ್ವಿುಟ್ ಹೊಂದಿರುವ ಗೂಡ್ಸ್ ವಾಹನಗಳಿಗೆ ಈ ಆದೇಶ ಅನ್ವಯವಾಗಲಿದೆ. ಇನ್ನು ವಾಹನಗಳಿಗೆ ವಿಎಲ್ ಟಿ ಸೇರಿದಂತೆ ಪ್ಯಾನಿಕ್ ಬಟನ್ ಅಳವಡಿಕೆಗೆ 7,599 ರೂಪಾಯಿ ಖರ್ಚಾಗಲಿದೆ. ಜಿಎಸ್ ಟಿ ಹೊರತುಪಡಿಸಿ ಈ ಬೆಲೆಯನ್ನು ನಿಗದಿ ಮಾಡಲಾಗಿದೆ.
ವಿಎಲ್ ಟಿ ಹಾಗೂ ಪ್ಯಾನಿಕ್ ಬಟನ್ ಕೆಲಸ ಹೇಗೆ?
ವಿಎಲ್ಟಿ ಹಾಗೂ ಪ್ಯಾನಿಕ್ ಬಟನ್ ಅಳವಡಿಕೆಯ ನಂತರ ಮಾನಿಟರಿಂಗ್ ನಕ್ಷೆಯಲ್ಲಿ ವಾಹನದ ಲೊಕೇಷನ್ ಟ್ರ್ಯಾಕಿಂಗ್ ಆರಂಭವಾಗುತ್ತದೆ. ಇದು ನಿರ್ಬಂಧಿತ ಪ್ರದೇಶ, ಸಂಚಾರ ನಿಯಮಗಳ ಉಲ್ಲಂಘನೆ ಹಾಗೂ ಅತಿ ವೇಗದ ಎಚ್ಚರಿಕೆ ಕೂಡ ಕೊಡಲಿದೆ. ಇಂತಹ ವಾಹನಗಳಲ್ಲಿ ಪ್ರಯಾಣಿಸುವಾಗ ಆರೋಗ್ಯದಲ್ಲಿ ಏರುಪೇರು, ಲೈಂಗಿಕ ದೌರ್ಜನ್ಯ ಸೇರಿದಂತೆ ಯಾವುದೇ ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಪ್ಯಾನಿಕ್ ಬಟನ್ ಒತ್ತಿದರೆ ಕಮಾಂಡ್ ಸೆಂಟರ್ ಗೆ ಎಚ್ಚರಿಕೆ ಸಂದೇಶ ರವಾನೆಯಾಗುತ್ತದೆ. ಇದರಿಂದ ಕಮಾಂಡ್ ಸೆಂಟರ್ ವಾಹನದ ಲೊಕೇಷನ್ ಸಮೇತವಾಗಿ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಲಿದ್ದು ಇದರಿಂದ ಸಂಭವಿಸಬಹುದಾದ ಅನಾಹುತ ತಡೆಯಬಹುದಾಗಿದೆ.
ಬಾಗಲಕೋಟೆಯಲ್ಲಿ ಬೃಹತ್ ಮೊಸಳೆಯ ರಕ್ಷಣೆ
ಡಿಕೆಶಿ ವಿರುದ್ಧ ದೇವರಾಜೇಗೌಡ ಇನ್ನೊಂದು ಬಾಂಬ್…!
ಸೋಮವಾರ ಪೇಟೆಯಿಂದ ಬೆಂಗಳೂರಿಗೆ ಬರುತ್ತಿದ್ದ ಬಸ್. ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ
ಅಭಿವೃದ್ಧಿಗೆ ಮತ ನೀಡಿ ಎಂದ ರಶ್ಮಿಕ ಮಂದಣ್ಣ
SSLCಗೆ ಇನ್ನಿರಲ ಗ್ರೇಸ್ ಮಾರ್ಕ್ಸ್
ಕಾಫಿ ನಾಡಿನಲ್ಲಿ ಮಳೆಯ ಅಬ್ಬರ
T20 ವಿಶ್ವಕಪ್ ನಲ್ಲಿ ಕನ್ನಡ ರಾರಾಜಿಸಲಿದೆ.
ಕೆಎಸ್ಆರ್ಟಿಸಿ ಬಸ್ನ ಕಿಟಕಿಯಲ್ಲಿ ಮಹಿಳೆಯ ತಲೆ ಲಾಕ್.
ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದ ಚಿರತೆ….
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.