ರಾಂಚಿ : ಜಾರ್ಖಂಡ್ನ ಪಲಮು ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಹಾಗೂ ನಿಷೇಧಿತ ಟಿಎಸ್ಪಿಸಿ, ಸಿಪಿಐ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಭದ್ರತಾ ಸಿಬ್ಬಂದಿ ಹುತಾತ್ಮರಾಗಿದ್ದು, ಓರ್ವ ಸಿಬ್ಬಂದಿ ಗಾಯಗೊಂಡಿದ್ದಾರೆ.
ಈ ಕುರಿತು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದು, ನೆನ್ನೆ ಮನಾಟು ಪೊಲೀಸ್ ಠಾಣಾ ವ್ಯಾಪ್ತಿಯ ಕೇದಾಲ್ ಪ್ರದೇಶದಲ್ಲಿ ತಡರಾತ್ರಿ ಗುಂಡಿನ ಚಕಮಕಿ ನಡೆದಿದೆ ಎಂದು ತಿಳಿಸಿದ್ದಾರೆ.
ಗುಂಡಿನ ಚಕಮಕಿಯಲ್ಲಿ ಇಬ್ಬರು ಭದ್ರತಾ ಸಿಬ್ಬಂದಿ ಹುತಾತ್ಮರಾಗಿದ್ದು, ಓರ್ವ ಸಿಬ್ಬಂದಿ ಗಾಯಗೊಂಡಿದ್ದಾರೆ. ಸದ್ಯ ಗಾಯಾಳುವನ್ನು ಮೇದಿನಿರೈ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.















