ಮನೆ ರಾಜಕೀಯ ತನಿಖೆಗೆ ಮೊದಲೇ ಈಶ್ವರಪ್ಪಗೆ ಕ್ಲೀನ್ ಚಿಟ್ : ಡಿಕೆಶಿ ಆರೋಪ

ತನಿಖೆಗೆ ಮೊದಲೇ ಈಶ್ವರಪ್ಪಗೆ ಕ್ಲೀನ್ ಚಿಟ್ : ಡಿಕೆಶಿ ಆರೋಪ

0

ಬೆಂಗಳೂರು:  ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ರಕ್ಷಣೆಗೆ ಸಿಎಂ ಬಸವರಾಜ ಬೊಮ್ಮಾಯಿ ನಿಂತಿದ್ದಾರೆ. ತನಿಖೆ ಮಾಡುವ ಮೊದಲೇ ಈಶ್ವರಪ್ಪಗೆ ಕ್ಲೀನ್ ಚಿಟ್ ನೀಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಆರೋಪಿಸಿದರು.

ಬೆಂಗಳೂರಿನಲ್ಲಿ ಮಾತನಾಡಿದ ಡಿ.ಕೆ ಶಿವಕುಮಾರ್,  ಈಶ್ವರಪ್ಪ ರಕ್ಷಣೆಗೆ ಸಿಎಂ ಬೊಮ್ಮಾಯಿ  ಮುಂದಾಗಿದ್ದಾರೆ. ಈಶ್ವರಪ್ಪ ತಪ್ಪು ಮಾಡಿಲ್ಲ ಅಂತಾ ಸಿಎಂ ಬೊಮ್ಮಾಯಿ ಮತ್ತು ಮಾಜಿ ಸಿಎಂ ಬಿಎಸ್ ವೈ ನೇರವಾಗಿ ಹೇಳುತ್ತಾರೆ.  ನಾನು ಸಿಎಂ ಬೊಮ್ಮಾಯಿ ಬಗ್ಗೆ ಏನೋ ಅಂದುಕೊಂಡಿದ್ದೆ.  ರಾಜ್ಯದಲ್ಲಿ ಆಡಳಿತ  ಹಾಳಾಗ್ತಾ ಇರೋದಕ್ಕೆ ಸಿಎಂ ಕಾರಣ. ತನಿಖಾ ಹಾದಿಯ ದಿಕ್ಕನ ತಪ್ಪಿಸುತ್ತಿದ್ದಾರೆ ಎಂದು ಕಿಡಿಕಾರಿದರು.

ಇದೇ ವೇಳೆ ಮಾಜಿ ಸಚಿವ ಸಿ.ಟಿ ರವಿಗೆ ಟಾಂಗ್ ನೀಡಿದ ಡಿ.ಕೆ ಶಿವಕುಮಾರ್, ಸಿಟಿ ರವಿ ಬಹಳ ದೊಡ್ಡವರಿದ್ದಾರೆ ಅಧಿಕಾರಿಗಳಿಗೆ ಹೆದರಿಸೋದು ಬೆದರಿಸೋದು.   ಅವರು ಮಾತನಾಡಿರುವ ಫೋನ್ ಕಾಲ್ ಬಗ್ಗೆ  ಮಾಹಿತಿ ಇದೆ ಮುಂದಿನ ದಿನಗಳಲ್ಲಿ ತನಿಖೆಯಿಂದ ಹೊರಬರುತ್ತದೆ ಎಂದು ಡಿಕೆ ಶಿವಕುಮಾರ್ ತಿಳಿಸಿದರು.

ಹಿಂದಿನ ಲೇಖನನಾನು ನಿರ್ದೋಷಿ: ಕೆ.ಎಸ್ ಈಶ್ವರಪ್ಪ
ಮುಂದಿನ ಲೇಖನಬೆಂಗಳೂರು ವಿವಿ ಇಬ್ಬರು ಸಿಂಡಿಕೇಟ್‌ ಸದಸ್ಯರ ನಾಮನಿರ್ದೇಶನ ವಾಪಸ್‌: ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್‌ ತಡೆ