ಮೈಸೂರು: ವಿಧಾನ ಸಭಾ ಚುನಾವಣೆಯಲ್ಲಿ ಪಾಲ್ಗೊಂಡು ದೇಶದ ಪ್ರತಿಯೊಬ್ಬ ಪ್ರಜೆಯು ಕೂಡ ಮತದಾನವನ್ನು ಮಾಡಬೇಕು. ಪ್ರತಿಯೊಬ್ಬರು ಮತದಾನದಲ್ಲಿ ಜೊತೆಗೂಡಿ ಸಕ್ರಿಯ ಮತದಾನವನ್ನು ಮಾಡಿ ನೈತಿಕ ಮತದಾನ ನಮ್ಮ ಆದ್ಯ ಕರ್ತವ್ಯವಾಗಿದೆ. ಮತದಾನಕ್ಕೆ ಹೆಚ್ಚಿನ ಪ್ರಮುಖ್ಯತೆಯನ್ನು ನೀಡಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳಾದ ಡಾ. ಕೆ ವಿ ರಾಜೇಂದ್ರರವರು ತಿಳಿಸಿದರು.
ಜಿಲ್ಲಾಡಳಿತ ಹಾಗೂ ಜಿಲ್ಲಾ ಸ್ವೀಪ್ ಸಮಿತಿಯ ವತಿಯಿಂದ ಅರಮನೆ ಮುಂಭಾದದಲ್ಲಿ ಅಯೋಜಿಸಿದ ಮತದಾನ ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಪ್ರತಿಯೊಬ್ಬರು ಚುನಾವಣೆಯಲ್ಲಿ ಪಾಲ್ಗೋಂಡು ಮತದಾನವನ್ನು ಮಾಡಿ ನಿಮ್ಮ ಅಕ್ಕಪಕ್ಕದಲ್ಲಿನ ಸಾರ್ವಜನಿಕರಲ್ಲಿಯೂ ಕೂಡ ಮತದಾನದ ಬಗ್ಗೆ ಅರಿವು ಮೂಡಿಸಿ ಎಂದರು.
ಜಿಲ್ಲೆಯಲ್ಲಿ 18 ವರ್ಷ ಮೇಲ್ಪಟ್ಟ ಯುವ ಮತದಾರರ ಸಂಖ್ಯೆ ಹೆಚ್ಚಿದೆ ಪ್ರತಿಯೊಬ್ಬ ಯುವ ಮತದಾರರು ಕೂಡ ಈ ಬಾರಿಯ ಚುನಾವಣೆಯಲ್ಲಿ ಸಕ್ರಿಯವಾಗಿ ಭಾಗಿಯಾಗಿ ಎಂದರು. ಏಪ್ರಿಲ್ 1 ಕ್ಕೆ 18 ವರ್ಷ ತುಂಬಿದ ಯುವಕ ಯುವತಿಯರಿಗೂ ಈ ಬಾರಿ ಮತದಾನವನ್ನು ಮಾಡಲು ಅವಕಾಶವನ್ನು ಕಲ್ಪಿಸಲಾಗಿದೆ. ಪ್ರತಿಯೊಬ್ಬರು ಚುನಾವಣಾ ಪಟ್ಟಿಯನ್ನು ನೋಡಿಕೊಂಡು ಮತದಾನದಲ್ಲಿ ಪಾಲ್ಗೊಳ್ಳಿ ಎಂದು ತಿಳಿಸಿದರು.
ಮತದಾರರ ಪಟ್ಟಿಯಿಂದ ಹೆಸರುಗಳು ಕೈ ಬಿಟ್ಟು ಹೋಗದಂತೆ ಮತ್ತು ಮರಣ ಹೊಂದಿದವರ ಪಟ್ಟಿಯ ಬಗ್ಗೆ ಗಮನಹರಿಸಬೇಕು. 80 ವರ್ಷ ಮೇಲ್ಪಟ್ಟಿದ್ದು ಮತಗಟ್ಟೆಗೆ ಬಂದು ಮತ ಹಾಕಲು ಸಾಧ್ಯವಾಗದವರಿಗೆ 12 ಡಿ ಮೂಲಕ ಮತದಾನ ಮಾಡಲು ಅವಕಾಶವಿದೆ. ಸಿ-ವಿಜಿಲ್ ಆಫ್ ಮೂಲಕ ಚುನಾವಣಾ ಸಂಬಂಧಿತ ದಾಖಲಾದ ದೂರುಗಳಿಗೆ ನೂರು ನಿಮಿಷಗಳಲ್ಲಿ ಪರಿಹಾರಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಕರ್ನಾಟಕ ವಿಧಾನಸಭಾ ಚುನಾವಣೆ 2023 ರ ಹಿನ್ನೆಲೆಯಲ್ಲಿ ಜಿಲ್ಲೆಯ ಮತದಾರರಲ್ಲಿ ಮತದಾನ ಮಾಡುವ ಕುರಿತು ಅರಿವು ಮೂಡಿಸುವ ಸಲುವಾಗಿ ಜಿಲ್ಲೆಯ ಐಕಾನ್ ಆಗಿ ನೇಮಕವಾಗಿರುವ ಅಂತರಾಷ್ಟ್ರೀಯ ಮಟ್ಟದ ಕ್ರಿಕೆಟ್ ಕ್ಷೇತ್ರದಲ್ಲಿ ಖ್ಯಾತಿ ಹೊಂದಿರುವ ಜಾವಗಲ್ ಶ್ರೀನಾಥ್ ಅವರು ಮಾತನಾಡಿ ಪ್ರಜಾಪ್ರಭುತ್ವ ನಿರ್ಮಾಣವಾಗುವುದು ಕೇವಲ ಮತದಾನದಿಂದ. ಪ್ರತಿಯೊಬ್ಬ ಪ್ರಜೆಯ ಮತದಾನವು ಕೂಡ ಉತ್ತಮ ಪ್ರಜಾಪ್ರಭುತ್ವ ನಿರ್ಮಾಣ ಮಾಡಲು ಸಾಧ್ಯವಾಗುವುದು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಮಹಾನಗರ ಪಾಲಿಕೆಯ ಅಯುಕ್ತರಾದ ಲಕ್ಷ್ಮಿಕಾಂತ್ ರೆಡ್ಡಿ, ಜಿಲ್ಲಾ ಪಂಚಾಯತ್ನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಾದ ಕೆ.ಎಂ.ಗಾಯಿತ್ರಿ, ಪೋಲಿಸ್ ವರಿಷ್ಠಾಧಿಕಾರಿಗಳಾದ ಸೀಮಾ ಲಾಟ್ಕರ್ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು, ವೀಕಲ ಚೇತನರು ಮತ್ತು ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.