ಬೆಂಗಳೂರು: ಬೆಂಗಳೂರು ನಗರದಲ್ಲಿರುವ ಹೆಚ್.ಬಿ.ಆರ್. ಬಡಾವಣೆಯ 1ನೇ ಹಂತ, ಕಾಚರಕನಹಳ್ಳಿ ಗ್ರಾಮದ ಸರ್ವೆ ನಂ. 181, 182 ಮತ್ತು 183ರಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಸೇರಿರುವ ಜಾಗದಲ್ಲಿ ಅನಧಿಕೃತವಾಗಿ ನಿರ್ಮಾಣವಾಗಿದ್ದ ಕಟ್ಟಡಗಳನ್ನು ಇಂದು ಬೆಳಗ್ಗೆ ಬಿಡಿಎ ಅಧಿಕಾರಿಗಳು ತೆರವುಗೊಳಿಸಿದರು.
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಸ್ತಿ ಎಂದು ಕರ್ನಾಟಕ ರಾಜ್ಯ ಸರ್ಕಾರ 1985ರಲ್ಲಿ ಅಂತಿಮ ಅಧಿಸೂಚನೆ ಹೊರಡಿಸಿದ್ದು, ಸುಮಾರು ರೂ. 150 ಕೋಟಿ ಬೆಲೆ ಬಾಳುವ 2.20 ಎಕರೆ ಜಾಗವನ್ನು ಭದ್ರತೆಯ ಹಿತದೃಷ್ಟಿಯಿಂದ 200 ಅಧಿಕಾರಿಗಳು ಸೇರಿದಂತೆ 100 ಜನ ಕಾರ್ಮಿಕರು ಹಾಗೂ 15 ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳ ಸಮ್ಮುಖದಲ್ಲಿ ತೆರವುಗೊಳಿಸಿ ಪ್ರಾಧಿಕಾರದ ಸುಪರ್ದಿಗೆ ತೆಗೆದುಕೊಳ್ಳಲಾಯಿತು.
ಅನಧಿಕೃತ ಕಟ್ಟಡಗಳ ತೆರವು ಕಾರ್ಯಕ್ಕೂ ಮುನ್ನ ನೂತನವಾಗಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಯುಕ್ತರ ಹುದ್ದೆಯ ಪ್ರಭಾರವನ್ನು ವಹಿಸಿಕೊಂಡ ಎನ್.ಜಯರಾಂ ಅವರು ಪ್ರಾಧಿಕಾರದ ಕಾನೂನು ಕೋಶದ ಅಧಿಕಾರಿಗಳೊಂದಿಗೆ ಚರ್ಚಿಸಿ, ಸಲಹೆಯನ್ನು ಪಡೆದು, ತೆರವು ಕಾರ್ಯಕ್ಕೆ ಅಧಿಕಾರಿಗಳಿಗೆ ಸೂಚನೆ ನೀಡಿ, ಕಾರ್ಯವನ್ನು ವ್ಯವಸ್ಥಿತವಾಗಿ ನಡೆಸಲಾಗಿದೆ.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.