ಬೆಂಗಳೂರು: “ಅವರ ಬೆನ್ನು ಅವರಿಗೆ ಕಾಣುವುದಿಲ್ಲ. ನಾಲಿಗೆಗೂ ಮೂಳೆ ಇರುವುದಿಲ್ಲ. ಸಿಎಂ ಸೀಟಿನಲ್ಲಿ ಕೂತರೂ ‘ಸಿದ್ದಸುಳ್ಳು’ಗಳಿಗೆ ಕೊರತೆಯೇನೂ ಇಲ್ಲ” ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಮಾಡಿಕೊಂಡ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು “ಜೆಡಿಎಸ್ ಇನ್ಮುಂದೆ ಜಾತ್ಯಾತೀತ ಎಂದು ಹೇಳಿಕೊಳ್ಳಬಾರದು” ಎಂದು ವಾಗ್ದಾಳಿ ಮಾಡಿದ್ದರು. ಈ ಕುರಿತು ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ಅವರು ಸರಣಿ ಟ್ವೀಟ್ ಮಾಡಿ ವಾಗ್ದಾಳಿ ನಡೆಸಿದ್ದಾರೆ.
“ಜಾತ್ಯತೀತ ‘ ಎನ್ನುವ ಟ್ಯಾಗ್ ಲೈನ್ ಇಟ್ಟುಕೊಂಡು ಜಾತಿ ಸಭೆಗಳನ್ನು ಮಾಡಿ ಕುಕ್ಕರ್, ಇಸ್ತ್ರೀ ಪೆಟ್ಟಿಗೆ ಹಂಚುವುದು ಜಾತ್ಯತೀತವೇ? ಅಹಿಂದ ಎಂದು ಹೇಳಿಕೊಂಡು ಧರ್ಮಕ್ಕೊಂದು ಸಮಾವೇಶ, ಜಾತಿಗೊಂದು ಸಭೆ ನಡೆಸುವುದು ಜಾತ್ಯತೀತವೇ? ಸ್ವಲ್ಪ ಹೇಳುವಿರಾ ಸಿದ್ದರಾಮಯ್ಯನವರೇ?” ಎಂದು ಪ್ರಶ್ನಿಸಿದ್ದಾರೆ.
“ಕೋಮುವಾದಿ ಎಂದು ಬಿಜೆಪಿಯನ್ನು ಹೀಗಳೆಯುತ್ತಾ ಆ ಪದದಿಂದಲೇ ರಾಜಕೀಯ ಲಾಭ ಗಿಟ್ಟಿಸಿಕೊಳ್ಳುವ ಡೋಂಗಿ ಸಮಾಜವಾದಿ ನೀವು. ನಿಮ್ಮ ಅಡ್ಜಸ್ಟ್ಮೆಂಟ್ ರಾಜಕಾರಣ ಜಗತ್ಪ್ರಸಿದ್ಧಿ. I.N.D.I.A ಎಂಬ ಮೈತ್ರಿಕೂಟದಲ್ಲಿ ಅದೇ ಬಿಜೆಪಿಯ ಬಿ ಟೀಂಗಳನ್ನು ಇಟ್ಟುಕೊಂಡು, ಅವುಗಳ ಬಾಲಂಗೋಚಿ ಆಗಿರುವ ಕಾಂಗ್ರೆಸ್ ಪಕ್ಷ ಜಾತ್ಯತೀತವೇ? ಉತ್ತರಿಸಿ ಮುಖ್ಯಮಂತ್ರಿಗಳೇ?” ಎಂದು ಸವಾಲು ಹಾಕಿದ್ದಾರೆ.
“ಸ್ಟಾಲಿನ್, ಮಮತಾ ಬ್ಯಾನರ್ಜಿ, ಫಾರೂಕ್ ಅಬ್ದುಲ್ಲಾ, ನಿತೀಶ್ ಕುಮಾರ್, ಹೇಮಂತ್ ಸೊರೇನ್, ವೈಕೋ, ಮೆಹಬೂಬಾ ಮುಫ್ತಿ, ಅಖೈರಿಗೆ ಶಿವಸೇನೆಯ ಉದ್ಧವ್ ಠಾಕ್ರೆ. ಇವರೆಲ್ಲರೂ ಬಿಜೆಪಿ ಪಡಸಾಲೆಯಲ್ಲಿ ಪೊಗದಸ್ತಾಗಿ ಅಧಿಕಾರದ ಭೋಜನ ಉಂಡವರಲ್ಲವೇ? ಅವರ ಪಕ್ಕ ಕುರ್ಚಿ ಹಾಕಿಕೊಂಡು ಕೂರಲು ನಿಮಗೆ ನಾಚಿಕೆ ಆಗುವುದಿಲ್ಲವೇ?” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
“2006ರಲ್ಲಿ ಬಿಜೆಪಿ ಜತೆ ಸರಕಾರ ರಚಿಸಿದ ಏಕೈಕ ಕಾರಣಕ್ಕೆ ಬಿಜೆಪಿ ಬಿ ಟೀಂ ಎಂದು ಜೆಡಿಎಸ್ಗೆ ಮುದ್ರೆ ಹಾಕಿದಿರಿ. 2018ರಲ್ಲಿ ಅದೇ ಬಿ ಟೀಂ ಜತೆ ಸರಕಾರ ರಚಿಸಲು ಮಾನ್ಯ ದೇವೇಗೌಡರ ಮನೆಗೆ ಬಂದು ಸಾಲಾಗಿ ಕೈಕಟ್ಟಿ ನಿಂತುಕೊಂಡಿರಿ ಮರೆತಿರಾ ಛದ್ಮವೇಷಧಾರಿ?? ಪಾಪ.. ನಿಮಗೆ ಕೋಮುವಾದ, ಜಾತ್ಯತೀತ ಸಿದ್ಧಾಂತದ ಕನಸು ಈಗ ಬಿದ್ದಿದೆ. ನಿಮ್ಮ ರಾಜಕೀಯ ಬದುಕಿಗಾಗಿ ಜಾತಿಜಾತಿಗಳನ್ನು ಒಡೆದು ಬೆಂಕಿ ಇಟ್ಟು ಆ ಕೆನ್ನಾಲಗೆಯಲ್ಲೇ ಚಳಿ ಕಾಯಿಸಿಕೊಳ್ಳುವುದಷ್ಟೇ ನಿಮಗೆ ಗೊತ್ತು” ಎಂದು ವಾಗ್ದಾಳಿ ಮಾಡಿದರು.
“ಜಾತ್ಯತೀತ ಎನ್ನುವುದು ನಾಲಿಗೆ ಮೇಲಿನ ಮಾತಲ್ಲ, ಹೃದಯದ ಆಳದಲ್ಲಿರುವ ನಿಷ್ಠೆ. ಸ್ವಾರ್ಥ ರಾಜಕಾರಣವನ್ನೇ ಹಾಸಿಹೊದ್ದು, ಅಧಿಕಾರ ದಾಹವೇ ಹಾಸುಹೊಕ್ಕಾಗಿರುವ ನಿಮಗೆ ಜಾತ್ಯತೀತತೆ ಕೇವಲ ಭಾಷಣದ ಸರಕಷ್ಟೇ. ಜಾತ್ಯತೀತತೆ ಕುರಿತು ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್ ಡಿ ದೇವೇಗೌಡ ಅವರು ಹಾಗೂ ನಾನು ಈಗಾಗಲೇ ಸ್ಪಷ್ಟವಾಗಿ ಹೇಳಿದ್ದೇವೆ, ಅದೂ ಜನರಿಗೆ? ನಮ್ಮ ಬದ್ಧತೆ, ಅಚಲತೆ, ಜಾತ್ಯತೀತತೆಯನ್ನು ಪ್ರಶ್ನಿಸುವ ಯೋಗ್ಯತೆ ನಿಮಗೆ ಖಂಡಿತಾ ಇಲ್ಲ. ಈ ಗುಣಗಳು ನಿಮಗೆ ಅನ್ವಯ ಆಗುವುದೂ ಇಲ್ಲ. ಏನಂತೀರಿ?” ಎಂದು ಹ್ಯಷ್ಟ್ಯಾಗ್ ಛದ್ಮವೇಷಧಾರಿ ಎಂದು ಟ್ವೀಟ್ ಮಾಡಿದ್ದಾರೆ.
ಕೆ ಸುಧಾಕರ್ ಗೆ ಗಂಡಾಂತರ.
ಕಾಂಗ್ರೆಸ್ ಕಾರ್ಯಕರ್ತರಿಗೆ ಐಟಿ ಕಿರುಕುಳ
ಇಂಡಿಗನತ್ತ ಗ್ರಾಮದಲ್ಲಿ ಮತಗಟ್ಟೆ ದ್ವಂಸ
ಏಪ್ರಿಲ್ 26ಕ್ಕೆ ಮೊದಲ ಹಂತದ ಚುನಾವಣೆ……
'ಕೈ' ಪರ ಪ್ರಚಾರದಲ್ಲಿದ್ದಾಗ ತಡೆದ ಬಿಜೆಪಿ ಕಾರ್ಯಕರ್ತರು….
ಹಿರಿಯ ನಾಗರಿಕರಿಗೆ ಹಾಗೂ ಅಂಗವಿಕಲರಿಗೆ ರಾಪಿಡೋ ವತಿಯಿಂದ ಸಿಹಿ ಸುದ್ದಿ
ಏಪ್ರಿಲ್ 26ಕ್ಕೆ ಏನೆಲ್ಲ ಲಭ್ಯವಿರುತ್ತದೆ….
ಲಂಡನ್ನಲ್ಲಿ ಅನಂತ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್ ಮದುವೆ.
ಲೋಕಸಭಾ ಚುನಾವಣೆಗೆ ಬೆಂಗಳೂರಿನಲ್ಲಿ ನಿಷೇಧಾಗ್ನೆ ಜಾರಿ..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.