ಮೈಸೂರು: ಜಿಲ್ಲೆಯಲ್ಲಿ 212 ಜನ ತೃತೀಯ ಲಿಂಗಿಗಳಿಗೆ ಮತದಾರರ ಚೀಟಿ ಇಲ್ಲವೆಂಬ ಮಾಹಿತಿ ಇದ್ದು ಎಲ್ಲಾ ತೃತೀಯ ಲಿಂಗಗಳು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಂಡು ಅರ್ಹ ಪ್ರತಿಯೊಬ್ಬ ತೃತೀಯ ಲಿಂಗಿಗಳು ಮತದಾರರ ಚೀಟಿ ಹೊಂದಿರಬೇಕು ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾ ಅಧಿಕಾರಿಗಳಾದ ಡಾ. ಕೆ ವಿ ರಾಜೇಂದ್ರ ತಿಳಿಸಿದರು.
ಜಿಲ್ಲಾ ಪಂಚಾಯತ್ನ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ತೃತೀಯಲಿಂಗಿಗಳಿಗೆ ಮತದಾರ ಗುರುತಿನ ಚೀಟಿ ವಿತರಣಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮತದಾರರ ಚೀಟಿಯಲ್ಲಿ ಹೆಸರು ಬದಲಾವಣೆಗೆ ಪೂರಕವಾದ ದಾಖಲೆಗಳು ಅಗತ್ಯ. ತಕ್ಷಣಕ್ಕೆ ಅದು ಸಾಧ್ಯವಿಲ್ಲ. ಹೆಸರು ಬದಲಾವಣೆಗೆ ನೋಟರಿ ಮಾಡಿಸಿ ಕೋರ್ಟ್ ನಲ್ಲಿ ತಿದ್ದುಪಡಿ ಮಾಡಿಸಿ ನಂತರ ಪತ್ರಿಕೆಯಲ್ಲಿ ಪ್ರಕಟ ಮಾಡಿಸಬೇಕು. ವಯಸ್ಸಿನ ಬದಲಾವಣೆಗೆ ದಾಖಲೆಗಳು ಬೇಕು. ಪ್ರಸ್ತುತ ವಿಳಾಸ ಮತ್ತು ಲಿಂಗದ ನೋಂದಣಿ ಬದಲಾವಣೆ ಮಾಡಲಾಗುವುದು ಎಂದರು.
ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಕೆ.ಎಮ್ ಗಾಯತ್ರಿ ಅವರು ಮಾತನಾಡಿ ಚುನಾವಣೆ ಮುಗಿದ ನಂತರ ಜಾಗೃತಿ ಕಾರ್ಯಕ್ರಮಗಳನ್ನು ಮಾಡಿ ಹೆಸರು ಹಾಗೂ ಲಿಂಗ ನೋಂದಣಿ ಬದಲಾವಣೆ ಮಾಡುವ ಅಭಿಯಾನವನ್ನು ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಜಿ.ಪಂ.ನ ಉಪ ಕಾರ್ಯದರ್ಶಿಗಳಾದ ಕೃಷ್ಣಂರಾಜು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ-ನಿರ್ದೇಶಕರಾದ ಬಸವರಾಜು ಅವರನ್ನು ಒಳಗೊಂಡಂತೆ ಇತರರು ಉಪಸ್ಥಿತರಿದ್ದರು.
ಶಾಲೆಗೆ ಕುಡಿದು ಬರುತ್ತಿದ್ದ ಶಿಕ್ಷಕ ; ಚಪ್ಪಲಿ – ಶೂ ಎಸೆದು ಓಡಿಸಿದ ವಿದ್ಯಾರ್ಥಿಗಳು
ಮತದಾರರಿಗೆ ' ಸಿಹಿ ', ಸುದ್ದಿ..
ಮೋದಿ ಅಭಿಮಾನಿಯ ಕೋರಿಕೆ…
ಪ್ರಸ್ತುತ ಪೊಲೀಸ್ ವ್ಯವಸ್ಥೆಯನ್ನು ಅಣುಕಿಸುತ್ತಿರುವ ಕಾಲ್ಪನಿಕ ಸನ್ನಿವೇಶಗಳು..
ಅಭಿಮಾನಿ ದೇವರುಗಳ ಜೊತೆ ಜಾಕಿ ಚಲನಚಿತ್ರ ವೀಕ್ಷಿಸಿದ ಅಶ್ವಿನಿ ಪುನೀತ್
ಮೈಸೂರು ಮೆಡಿಕಲ್ ಕಾಲೇಜು ಮತ್ತು ಕೆ ಆರ್ ಆಸ್ಪತ್ರೆಯ ಕರ್ಮಕಾಂಡ
ಕರ್ನಾಟಕದ ಹೆಮ್ಮೆಯ ರತ್ನ ಶ್ರೀಮತಿ ಸುಧಾಮೂರ್ತಿಯವರು ರಾಜ್ಯಸಭಾ ಸದಸ್ಯೆಯಾಗಿ ಪ್ರಮಾಣ ವಚನ ಸ್ವೀಕರಿಸಿದರು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.