ಮೈಸೂರು(Mysuru): ಎಲ್ಲರೂ ದೇಶ ಪ್ರೇಮ ಬೆಳೆಸಿಕೊಳ್ಳಬೇಕು. ಸುಸಂಸ್ಕೃತ ವ್ಯಕ್ತಿಯಾಗಿ ಬದುಕಬೇಕು ಎಂದು ಕರ್ನಾಟಕ ಬ್ರಾಹ್ಮಣ ಅಭಿವೃದ್ಧಿ ಮಂಡಳಿಗೆ ರಾಜ್ಯ ನಿರ್ದೇಶಕ ಕ್ಯಾಪ್ಟನ್ ಸಿ ವಿ ಗೋಪಿನಾಥ್ ತಿಳಿಸಿದರು.
75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ಅಗ್ರಹಾರದ ಶಂಕರಮಠದಲ್ಲಿ ವಿಪ್ರ ಮಹಿಳಾ ಸಂಗಮ ವತಿಯಿಂದ ದೇಶಭಕ್ತಿ ಗಾಯನ ಸ್ಪರ್ಧೆ ಹಾಗೂ ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಜನಗಣಮನ ಹೇಳುವಾಗ ಎಲ್ಲರೂ ಎದ್ದು ನಿಂತು ಗೌರವ ಸಲ್ಲಿಸುವ ಮೂಲಕ ಗೌರವಿಸುವುದನ್ನು ಕಲಿತಿದ್ದು, ನಮ್ಮ ಪೂರ್ವಿಕರಿಂದ ಅದೇ ನಮ್ಮ ಸಂಸ್ಕಾರ ಮತ್ತು ದೇಶಪ್ರೇಮ, ನಮ್ಮ ರಾಷ್ಟ್ರವನ್ನು ತಮ್ಮ ಜವಾಬ್ದಾರಿ ಅರಿತು ನಮ್ಮ ಕರ್ತವ್ಯ ಜೋಪಾನವಾಗಿ ಕಾಪಾಡಿಕೊಳ್ಳಬೇಕು ಎಂದು ಹೇಳಿದರು.
ರಾಷ್ಟ್ರಪತಿ ವಿಜೇತರು ಹಾಗೂ ಸುಧರ್ಮ ಪತ್ರಿಕೆಯ ಮುಖ್ಯಸ್ಥರಾದ ಜಯಲಕ್ಷ್ಮಿ ಮಾತನಾಡಿ, ಹೆಣ್ಣುಮಕ್ಕಳಿಗೆ ಬಿಡುವಿಲ್ಲದ ಸಮಯದಲ್ಲೂ ಉತ್ಸಾಹವಾಗಿ ಇಂತಹ ಕಾರ್ಯಕ್ರಮ ಮಾಡುತ್ತಿರುವುದು ನಿಜಕ್ಕೂ ಶ್ಲಾಘನೀಯ ಎಂದರು.
ನಮಗೆ ಸಂಸ್ಕೃತ ಮುಖ್ಯ. ಅದನ್ನು ಉಳಿಸುವುದು ಬೆಳೆಸುವುದು ನಮ್ಮ ನಿಮ್ಮ ಆದ್ಯ ಕರ್ತವ್ಯ. ಮನೆ ಮನೆಯಲ್ಲೂ ವಿಶ್ವದ ಏಕೈಕ ಸಂಸ್ಕೃತ ಪತ್ರಿಕೆಯನ್ನು ಓದುವಂಥ ಕೆಲಸವಾಗಲಿ ಎಂದು ಮನವಿ ಮಾಡಿದರು.
ದೇಶದ ಪ್ರಧಾನಿ ನರೇಂದ್ರ ಮೋದಿಯವರು ಸಂಸ್ಕೃತ ಪತ್ರಿಕೆ ನೆನೆದಿರುವುದು ನಮಗೆ ಹೆಮ್ಮೆಯ ವಿಚಾರ. ಆದರೆ ಮೈಸೂರಿಗರು ಸಂಸ್ಕೃತವನ್ನು ಎಲ್ಲೋ ಒಂದು ಕಡೆ ನಿರ್ಲಕ್ಷಿಸುತ್ತಿರುವುದು ತುಂಬ ಬೇಸರ ಎಂದು ಹೇಳಿದರು.
ದೇಶಭಕ್ತಿ ಗಾಯನ ಸ್ಪರ್ಧೆ
ದೇಶಭಕ್ತಿ ಗಾಯನ ಸ್ಪರ್ಧೆಯಲ್ಲಿ 40ಕ್ಕೂ ಹೆಚ್ಚು ಮಹಿಳೆಯರು ಸ್ಪರ್ಧಿಸಿದ್ದು ವಿವಿಧ ದೇಶಭಕ್ತಿ ಗೀತೆಗಳನ್ನು ಹಾಡುವ ಮೂಲಕ ದೇಶಪ್ರೇಮ ಮೆರೆದರು.
ಸಾಮೂಹಿಕ ಗಾಯನ
ಸಾಮೂಹಿಕ ದೇಶಭಕ್ತಿ ಗೀತೆ ಸ್ಪರ್ಧೆಯಲ್ಲಿ ಅರುಂಧತಿ ತಂಡಕ್ಕೆ ಪ್ರಥಮ ಬಹುಮಾನ, ಪದ್ಮಿನಿ ವಲ್ಲಭ ತಂಡಕ್ಕೆ ದ್ವಿತೀಯ ಬಹುಮಾನ ಮತ್ತು ತೃತೀಯ ಬಹುಮಾನವನ್ನು ಅನ್ನಪೂರ್ಣ ತಂಡ ಪಡೆದುಕೊಂಡಿತು.
ಪ್ರತ್ಯೇಕ ವಿಭಾಗ
ಮೊದಲನೇ ಬಹುಮಾನ ಹೇಮಲತಾ ಕುಮಾರಸ್ವಾಮಿ, ಎರಡನೇ ಬಹುಮಾನ ಪ್ರಭಾ ಬಿ ಎಸ್, ಮೂರನೇ ಬಹುಮಾನ ಸುಜಾತಾ ಕೆ, ನಾಲ್ಕನೇ ಬಹುಮಾನ ವನಮಾಲಾ ಪಡೆದುಕೊಂಡರು.
ವಿಪ್ರ ಮಹಿಳಾ ಸಂಘದ ಅಧ್ಯಕ್ಷೆ ಡಾ.ಕೆ ವಿ ಲಕ್ಷ್ಮಿದೇವಿ, ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷ ಡಿ ಟಿ ಪ್ರಕಾಶ್, ಜಿಎಸ್ ಎಸ್ ಎಸ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ವನಜಾ ಪಂಡಿತ್, ಪದ್ಮಶ್ರೀ ಪ್ರಶಸ್ತಿ ಪುರಸ್ಕತರಾದ ಸುಧರ್ಮ ಪತ್ರಿಕೆಯ ಜಯಲಕ್ಷ್ಮಿ, ಶಂಕರ್ ಮಠದ ಕಾರ್ಯದರ್ಶಿ ಶೇಷಾದ್ರಿ, ಇಳೈ ಆಳ್ವಾರ್ ಸ್ವಾಮೀಜಿ, ನಂ ಶ್ರೀಕಾಂತ್ ಕುಮಾರ್, ನಂ ಶ್ರೀಕಾಂತ್ ಕುಮಾರ್, ನಗರ ಪಾಲಿಕೆ ಮಾಜಿ ಸದಸ್ಯರಾದ ಸೌಭಾಗ್ಯ ಮೂರ್ತಿ, ಲತಾ ಮೋಹನ್, ಹೇಮಲತಾ, ವೀಣಾ ಡೋಂಗ್ರೆ, ಸಹನಾ, ಜಯಶ್ರೀ ಹಾಗೂ ಇನ್ನಿತರರು ಹಾಜರಿದ್ದರು.
ಏಪ್ರಿಲ್ 26ಕ್ಕೆ ಮೊದಲ ಹಂತದ ಚುನಾವಣೆ……
'ಕೈ' ಪರ ಪ್ರಚಾರದಲ್ಲಿದ್ದಾಗ ತಡೆದ ಬಿಜೆಪಿ ಕಾರ್ಯಕರ್ತರು….
ಹಿರಿಯ ನಾಗರಿಕರಿಗೆ ಹಾಗೂ ಅಂಗವಿಕಲರಿಗೆ ರಾಪಿಡೋ ವತಿಯಿಂದ ಸಿಹಿ ಸುದ್ದಿ
ಏಪ್ರಿಲ್ 26ಕ್ಕೆ ಏನೆಲ್ಲ ಲಭ್ಯವಿರುತ್ತದೆ….
ಲಂಡನ್ನಲ್ಲಿ ಅನಂತ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್ ಮದುವೆ.
ಲೋಕಸಭಾ ಚುನಾವಣೆಗೆ ಬೆಂಗಳೂರಿನಲ್ಲಿ ನಿಷೇಧಾಗ್ನೆ ಜಾರಿ..
ಮನೆ ಮಾರಾಟಕ್ಕೆಮನೆ ಮಾರಾಟಕ್ಕೆ….
ಅಮೆರಿಕದಲ್ಲೂ ಕೂಡ ಹೆಚ್ಚಾಗುತ್ತಿದ್ದಾರೆ ಭಾರತೀಯರು.
27ರೂ. ಗೆ, 28000 ಸಾವಿರ ದಂಡ.
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.