ಕಠ್ಮಂಡು : ಭ್ರಷ್ಟಾಚಾರ ಹಾಗೂ ಫೇಸ್ಬುಕ್, ಯೂಟ್ಯೂಬ್, ಎಕ್ಸ್ ಆ್ಯಪ್ಗಳನ್ನು ಬ್ಯಾನ್ ಮಾಡಿದ ಸರ್ಕಾರದ ವಿರುದ್ಧ ನೇಪಾಳದ ಜನತೆಗೆ ತಿರುಗಿಬಿದ್ದಿದ್ದಾರೆ. ಈ ಹಿಂಸಾಚಾರಕ್ಕೆ 9 ಮಂದಿ ಬಲಿಯಾಗಿದ್ದಾರೆ. ದೇಶಾದ್ಯಂತ ಪ್ರತಿಭಟನೆ ನಡೆಸಲಾಗುತ್ತಿದೆ.
ಪ್ರತಿಭಟನಾಕಾರರು ಬೀದಿಗಿಳಿದಾಗ ನಡೆದ ಹಿಂಸಾತ್ಮಕ ಘರ್ಷಣೆಗಳಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ. ಕೋಪಗೊಂಡ ಪ್ರತಿಭಟನಾಕಾರರು ಕರ್ಫ್ಯೂ ನಿರ್ಬಂಧಗಳನ್ನು ಮುರಿದು ಸಂಸತ್ತಿನ ಬಳಿಯ ನಿರ್ಬಂಧಿತ ವಲಯಗಳನ್ನು ಪ್ರವೇಶಿಸಿದರು. ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿದ್ದಂತೆ, ನೇಪಾಳ ರಾಜಧಾನಿಯಲ್ಲಿ ಸೈನ್ಯವನ್ನು ನಿಯೋಜಿಸಲಾಗಿದೆ.
ಪ್ರತಿಭಟನಾಕಾರರು ಮರದ ಕೊಂಬೆಗಳು ಮತ್ತು ನೀರಿನ ಬಾಟಲಿಗಳನ್ನು ಎಸೆದು ಸರ್ಕಾರದ ವಿರೋಧಿ ಘೋಷಣೆಗಳನ್ನು ಕೂಗಿದರು. ಪೊಲೀಸರು ಜಲಫಿರಂಗಿ, ಅಶ್ರುವಾಯು ಮತ್ತು ರಬ್ಬರ್ ಗುಂಡು ಸಿಡಿಸಿದರು. ಕೆಲವು ಪ್ರತಿಭಟನಾಕಾರರು ಸಂಸತ್ತಿನ ಆವರಣವನ್ನು ಪ್ರವೇಶಿಸುವಲ್ಲಿ ಯಶಸ್ವಿಯಾದರು, ಇದು ಪರಿಸ್ಥಿತಿಯನ್ನು ಇನ್ನಷ್ಟು ಉಲ್ಬಣಗೊಳಿಸಿದೆ.

ಮುಖ್ಯ ಜಿಲ್ಲಾ ಅಧಿಕಾರಿ ಛಬಿಲಾಲ್ ರಿಜಾಲ್ ಪ್ರಕಾರ, ಕರ್ಫ್ಯೂ ಮಧ್ಯಾಹ್ನ 12:30 ರಿಂದ ರಾತ್ರಿ 10:00 ರವರೆಗೆ ಜಾರಿಯಲ್ಲಿದೆ. ಈ ವಲಯಗಳಲ್ಲಿ ಸಾರ್ವಜನಿಕರ ಓಡಾಟ, ಸಭೆ ಸೇರುವುದು, ಪ್ರತಿಭಟನೆಗಳು ಅಥವಾ ಸುತ್ತುವರಿದ ಚಟುವಟಿಕೆಗಳನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.
ನೇಪಾಳ ಸರ್ಕಾರ ನೋಂದಾಯಿತ 26 ಪ್ಲಾಟ್ಫಾರ್ಮ್ಗಳನ್ನು ನಿರ್ಬಂಧಿಸಿದೆ. ಇಲ್ಲಿನ ಜನತೆಗೆ ಯೂಟ್ಯೂಬ್, ಎಕ್ಸ್, ಫೇಸ್ಬುಕ್ ಸೈಟ್ಗಳನ್ನು ಪ್ರವೇಶಿಸಲು ಸಾಧ್ಯವಾಗುತ್ತಿಲ್ಲ. ಇದು ಬಳಕೆದಾರರ ಆಕ್ರೋಶ ಕಾರಣವಾಗಿದೆ. ಇನ್ಸ್ಟಾಗ್ರಾಮ್ನಂತಹ ಜನಪ್ರಿಯ ಪ್ಲಾಟ್ಫಾರ್ಮ್ಗಳು ನೇಪಾಳದಲ್ಲಿ ಲಕ್ಷಾಂತರ ಬಳಕೆದಾರರನ್ನು ಹೊಂದಿದೆ.
ಸರ್ಕಾರದ ಕ್ರಮವು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಸಾವಿರಾರು ಯುವ ನೇಪಾಳಿಗಳು ಕಠ್ಮಂಡುವಿನಲ್ಲಿ ಮೆರವಣಿಗೆ ನಡೆಸಿ, ಸರ್ಕಾರವು ಸಾಮಾಜಿಕ ಮಾಧ್ಯಮ ವೇದಿಕೆಗಳ ಮೇಲಿನ ನಿಷೇಧವನ್ನು ತೆಗೆದುಹಾಕಬೇಕು. ದೇಶವನ್ನು ವ್ಯಾಪಿಸಿರುವ ಭ್ರಷ್ಟಾಚಾರದ ಸಂಸ್ಕೃತಿಯನ್ನು ಕೊನೆಗೊಳಿಸಬೇಕೆಂದು ಒತ್ತಾಯಿಸಿದ್ದಾರೆ.















