ಬೆಂಗಳೂರು: ನಕಲಿ ಮತದಾರರ ಗುರುತಿನ ಚೀಟಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರ ಬೆಂಬಲಿಗ ಮೌನೇಶ್ ಕುಮಾರ್ ಅವರನ್ನು ಹೆಬ್ಬಾಳ ಪೊಲೀಸರು ವಿಚಾರಣೆ ನಡೆಸಿದ್ದಾರೆ.
ನಕಲಿ ಆಧಾರ್ ಕಾರ್ಡ್ಗಳು, ಮತದಾರರ ಗುರುತಿನ ಚೀಟಿಗಳು, ಡ್ರೈವಿಂಗ್ ಲೈಸೆನ್ಸ್ ಮತ್ತು ಪ್ಯಾನ್ ಕಾರ್ಡ್ಗಳನ್ನು ಮುದ್ರಿಸಲಾಗುತ್ತಿದೆ ಎಂಬ ಮಾಹಿತಿ ಕೇಳಿ ಬಂದ ಹಿನ್ನೆಲೆಯಲ್ಲಿ ಆರ್ಟಿ ನಗರದ ಕನಕನಗರದ ಸುಲ್ತಾನ್ ಪಾಳ್ಯ ಮುಖ್ಯರಸ್ತೆಯಲ್ಲಿರುವ ಮೌನೇಶ್ ಕುಮಾರ್ ಅವರ ಎಂಎಸ್ಎಲ್ ಟೆಕ್ನೋ ಸೊಲ್ಯೂಷನ್ಸ್ ಕಚೇರಿಯ ಮೇಲೆ ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಅಧಿಕಾರಿಗಳು ದಾಳಿ ನಡೆಸಿದ್ದರು.
ಪ್ರಕರಣ ಸಂಬಂಧ ಮೌನೇಶ್ ಹಾಗೂ ಆತನ ಸಹಚರರಾದ ಭಗತ್ ಹಾಗೂ ರಾಘವೇಂದ್ರ ವಿರುದ್ಧ ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಆರೋಪಿಯಾಗಿರುವ ಮೌನೇಶ್ ತನ್ನ ಸಾಮಾಜಿಕ ಜಾಲತಾಣಗಳ ಖಾತೆಗಳಲ್ಲಿ ಸಚಿವ ಭೈರತ್ ಸುರೇಶ್ ಅವರೊಂದಿಗಿರುವ ಫೋಟೋಗಳನ್ನು ಹಾಕಿಕೊಂಡಿದ್ದು, ಹೀಗಾಗಿ ಭೈರತಿ ಸುರೇಶ್ ಅವರ ಆಪ್ತನೆಂದು ಹಲವುರು ಟೀಕಿಸುತ್ತಿದ್ದಾರೆ. ಬಿಜೆಪಿ ಕೂಡ ವಾಗ್ದಾಳಿ ನಡೆಸಿದೆ.
ಆರೋಪಿಗಳನ್ನು ಬಂಧನಕ್ಕೊಳಪಡಿಸಿರುವ ಪೊಲೀಸರು, ಶನಿವಾರ ವಿಚಾರಣೆಗೊಳಸಪಡಿಸಿದರು. ಈ ವೇಳೆ ಆರೋಪಿಗಳಿಂಗ ಕಂಪ್ಯೂಟರ್, ಲ್ಯಾಪ್ ಟಾಪ್, ಫೋನ್ ಗಳನ್ನು ವಶಪಡಿಸಿಕೊಂಡಿದ್ದು, ಮೌನೇಶ್ ಅವರಿಗೆ ನೋಟಿಸ್ ಜಾರಿ ಮಾಡಿ, ಮತ್ತೆ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆಂದು ಮೂಲಗಳು ತಿಳಿಸಿವೆ.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.