ಮನೆ ಅಪರಾಧ ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

0

ಬೆಂಗಳೂರು: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಡ್ರೋನ್‌ ಪ್ರತಾಪ್‌ ಅವರಿಗೆ ಜಾಮೀನು ಮಂಜೂರಾಗಿದೆ.

Join Our Whatsapp Group

ಮಂಗಳವಾರ (ಡಿ.23 ರಂದು) ಮಧುಗಿರಿ 4ನೇ ಹೆಚ್ಚುವರಿ ಸೆಷನ್ಸ್​ ನ್ಯಾಯಾಲಯವು ಡ್ರೋನ್ ಪ್ರತಾಪ್​ಗೆ ಜಾಮೀನು ನೀಡಿದೆ.

ತಮ್ಮ ಯೂಟ್ಯೂವ್‌ ಚಾನೆಲ್‌ಗೆ ವಿಡಿಯೋ ಹಾಕುವ ನಿಟ್ಟಿನಲ್ಲಿ ಪ್ರತಾಪ್‌ ಸೋಡಿಯಂ ಮೆಟಲ್ ಬಳಸಿ ಮಧುಗಿರಿ ತಾಲೂಕಿನ ಜನಕಲೋಟಿ ಬಳಿಯ ಕೃಷಿ ಹೊಂಡದಲ್ಲಿ ಸ್ಫೋಟ ಮಾಡಿದ್ದರು. ಈ ಸಂಬಂಧ ಅವರನ್ನು ಮಿಡಿಗೇಶಿ ಠಾಣೆಯ ಪೊಲೀಸರು ಸ್ವಯಂ ಪ್ರಕರಣವನ್ನು ದಾಖಲಿಸಿಕೊಂಡು ಬಂಧಿಸಿದ್ದರು.

ಪ್ರತಾಪ್‌ ಅವರನ್ನು  ಡಿ.16 ರಂದು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ಆ ಬಳಿಕ  ನ್ಯಾಯಾಲಯ ಅವರಿಗೆ 10 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿತ್ತು. ಡಿಸೆಂಬರ್​ 26ರ ತನಕ ಅವರು ನ್ಯಾಯಾಂಗ ಬಂಧನದಲ್ಲಿ ಇರಬೇಕಾಗಿತ್ತು.  ಇದೀಗ ಮಧುಗಿರಿ 4ನೇ ಹೆಚ್ಚುವರಿ ಸೆಷನ್ಸ್​ ನ್ಯಾಯಾಲಯ ಪ್ರತಾಪ್‌ ಅವರಿಗೆ ಜಾಮೀನು ಮಂಜೂರು ಮಾಡಿದೆ.

ಪ್ರಕರಣ ಸಂಬಂಧ ಪ್ರತಾಪ್‌ ಅವರ ಕ್ಯಾಮೇರಾ ಮ್ಯಾನ್ ವಿನಯ್, ಹಾಗೂ ಸೋಡಿಯೋಂ ಕೊಡಿಸಿದ್ದ ಪ್ರಜ್ವಲ್  ಅವರನ್ನು ಸಹ ಪೊಲೀಸರು ಬಂಧಿಸಿದ್ದರು.

ಮಂಗಳವಾರ (ಡಿ.24 ರಂದು) ಜಾಮೀನು ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಅವರು ಜೈಲಿನಿಂದ ಹೊರಬರುವ ಸಾಧ್ಯತೆಯಿದೆ.