ಮನೆ ರಾಜ್ಯ ಶಿರಸಿಯಲ್ಲಿ ಕರಡಿ ದಾಳಿಗೆ ರೈತ ಸಾವು

ಶಿರಸಿಯಲ್ಲಿ ಕರಡಿ ದಾಳಿಗೆ ರೈತ ಸಾವು

0

ಶಿರಸಿ (Shirasi): ಕರಡಿ ದಾಳಿಗೆ ರೈತರೊಬ್ಬರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ದೇವನಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಸುಂಡಳ್ಳಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.

ಸುಂಡಳ್ಳಿ ಗ್ರಾಮದ ಓಂಕಾರ ಪದ್ಮನಾಭ ಜೈನ್ (52) ಮೃತಪಟ್ಟ ರೈತ. ಮೃತ ಓಂಕಾರ ಈ ಹಿಂದೆ ದೇವನಳ್ಳಿ ಗ್ರಾಮ ಪಂಚಾಯ್ತಿ ಉಪಾಧ್ಯಕ್ಷರಾಗಿಯೂ ಕೆಲಸ ನಿರ್ವಹಿಸಿದ್ದರು.

ಮನೆಯ ಸಮೀಪದ ಕಾಡಿಗೆ ಉಪ್ಪಾಗೆ ಹಣ್ಣು ಸಂಗ್ರಹಕ್ಕೆ ತೆರಳಿದ್ದ ವೇಳೆ ಘಟನೆ ನಡೆದಿದೆ. ಕರಡಿಯಿಂದ ಪಾರಾಗಲು ಓಂಕಾರ ಅವರು ಸಾಕಷ್ಟು ದೂರ ಓಡಿದ್ದಾರೆ. ರಕ್ಷಣೆಗೆ ಮರ ಏರುವಾಗ ಕರಡಿ ದಾಳಿ ಮಾಡಿದೆ. ಮರದ ಬುಡದಲ್ಲೇ ಓಂಕಾರ ಅವರ ಮೃತದೇಹ ಪತ್ತೆಯಾಗಿದೆ.

ಮತ್ತಿಘಟ್ಟ ಭಾಗದ ಅರಣ್ಯದಲ್ಲಿ ಕರಡಿಗಳಿದ್ದು,  ಅದು ಸರಗುಪ್ಪ ಭಾಗಕ್ಕೆ ಬಂದಿರುವ ಸಾಧ್ಯತೆ ಇದೆ. ಸ್ಥಳ ಪರಿಶೀಲನೆ ನಡೆಸಲಾಗುತ್ತಿದ್ದು, ಕಾಡಿನ ಅಂಚಿನಲ್ಲಿರುವ ಗ್ರಾಮಗಳ ಜನರಿಗೆ ಜಾಗರೂಕರಾಗಿರಲು ಸೂಚಿಸಲಾಗಿದೆ ಎಂದು ಜಾನ್ಮನೆ ವಲಯ ಅರಣ್ಯಾಧಿಕಾರಿ ಮಂಜುನಾಥ ಹೆಬ್ಬಾರ್ ಹೇಳಿದ್ದಾರೆ.

ಹಿಂದಿನ ಲೇಖನಉಡುಪಿ: ಕಾಲು ಸಂಕ ದಾಟುವಾಗ ನೀರಿಗೆ ಬಿದ್ದಿದ್ದ ವಿದ್ಯಾರ್ಥಿನಿ ಮೃತದೇಹ ಪತ್ತೆ
ಮುಂದಿನ ಲೇಖನಮಾಟ-ಮಂತ್ರದಂತಹ ಮೂಡನಂಬಿಕೆಗಳ ಬಗ್ಗೆ ಮಾತನಾಡಿ ಜನರ ದಾರಿ ತಪ್ಪಿಸದಿರಿ: ಪ್ರಧಾನಿಗೆ ರಾಹುಲ್ ಗಾಂಧಿ ತಿರುಗೇಟು