ಮನೆ ಅಪರಾಧ ಮೈಸೂರು: ಕಾಡಾನೆ ದಾಳಿಗೆ ರೈತ ಬಲಿ

ಮೈಸೂರು: ಕಾಡಾನೆ ದಾಳಿಗೆ ರೈತ ಬಲಿ

0

ಮೈಸೂರು(Mysuru): ಕಾಡಾನೆ ದಾಳಿಗೆ ರೈತ ಬಲಿಯಾಗಿರುವ ಘಟನೆ ಜಿಲ್ಲೆಯ ಸರಗೂರು ತಾಲ್ಲೂಕಿನ ಎತ್ತಿಗೆ ಗ್ರಾಮದಲ್ಲಿ ನಡೆದಿದೆ. 

ಕೇರಳ ಮೂಲದ ಬಾಲನ್ (51) ಮೃತಪಟ್ಟ ರೈತ. 

ಜಮೀನು ಗುತ್ತಿಗೆಗೆ ಪಡೆದು ಶುಂಠಿ ಬೆಳೆದಿದ್ದ ಬಾಲನ್, ಬೆಳಗಿನ ಜಾವ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದರು. ಈ ವೇಳೆ ಕಾಡಾನೆ ದಾಳಿ ನಡೆಸಿದ್ದು,   ರೈತ ಬಾಲನ್ ಸಾವನ್ನಪ್ಪಿದ್ದಾರೆ.

ನುಗು ಅರಣ್ಯ ಪ್ರದೇಶದಿಂದ ಕಾಡಾನೆ ಬಂದಿರುವ ಶಂಕೆ ವ್ಯಕ್ತವಾಗಿದ್ದು, ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಹಿಂದಿನ ಲೇಖನಶಿವಮೊಗ್ಗ ಸುಬ್ಬಣ್ಣ ನಿಧನ: ಸಿಎಂ ಬೊಮ್ಮಾಯಿ, ಸಿದ್ದರಾಮಯ್ಯ, ಹೆಚ್.ಡಿ.ಕೆ ಸೇರಿದಂತೆ ಹಲವರಿಂದ ಸಂತಾಪ
ಮುಂದಿನ ಲೇಖನಮೇಡ್ ಇನ್ ಇಂಡಿಯಾ ಶ್ರೇಣಿಯ ಸೌಂಡ್ ಬಾರ್