ಹುಬ್ಬಳ್ಳಿ: ಪ್ರತಿಭಟನೆಯಲ್ಲಿ ಕಲ್ಲು ಹೊಡೆಯುತ್ತಿರುವವರು ರೈತರಲ್ಲ. ಅನುಮತಿ ಪಡೆಯದೆ ಬರುವವರನ್ನು ತಡೆಯಲಾಗುತ್ತಿದೆ. ರೈತರು ತಮ್ಮ ಬೇಡಿಕೆಗಳ ಬಗ್ಗೆ ಚರ್ಚೆಗೆ ಬರಬೇಕು. ಅವರೊಂದಿಗೆ ನಾವು ಸಹಾನುಭೂತಿಯಿಂದ ನಡೆದುಕೊಳ್ಳುತ್ತಿದ್ದೇವೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ ಹೇಳಿದರು.
ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿವಿಧ ಬೇಡಿಕೆ ಈಡೇರಿಸಲು ರೈತರು ದೆಹಲಿಯಲ್ಲಿ ನಡೆಸುತ್ತಿರುವ ಪ್ರತಿಭಟನೆ ಹತ್ತಿಕ್ಕುವ ಕೆಲಸ ಬಿಜೆಪಿ ಮಾಡುತ್ತಿಲ್ಲ. ಈಗಾಗಲೇ ಕೃಷಿ ಸಚಿವ ಮುಂಡಾ ಅವರು ರೈತರ ಸಂಘಟನೆ ಜೊತೆ ಮಾತನಾಡಿದ್ದಾರೆ. ರೈತರು ಹೊಸ ಬೇಡಿಕೆ ಇಟ್ಟಿದ್ದು, ನಮ್ಮ ಸರ್ಕಾರ ಸಹಾನಭೂತಿಯಿಂದ ಆ ಬಗ್ಗೆ ಪರಿಶೀಲಿಸುತ್ತಿದೆ ಎಂದರು.
ಲೋಕಸಭೆ ಚುನಾವಣೆಗೆ ಭರ್ಜರಿ ತಯಾರಿ ನಡೆದಿದೆ. ಈ ಬಾರಿಯು ನನ್ನ ಗೆಲುವು ಖಚಿತ. ಜೆಡಿಎಸ್, ಬಿಜೆಪಿ ಸೀಟು ಹಂಚಿಕೆ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ. ಈಗ ಮಾತನಾಡುವುದು ಕೇವಲ ಉಹಾಪೋಹ ಅಷ್ಟೆ. ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಬಳಿಕ ಎಲ್ಲವೂ ಅಂತಿಮವಾಗಲಿದೆ. ಒಂದು ಹಂತದಲ್ಲಿ ಕೇಂದ್ರದಲ್ಲಿ ಚರ್ಚೆ ನಡೆಯುತ್ತಿತದೆ. ಅದೆಲ್ಲವೂ ಅಪೂರ್ಣ ಆಗಿದೆ. ಕಾರ್ಯಕಾರಿಣಿ ನಂತರವೇ ಎಲ್ಲವೂ ಅಂತಿಮವಾಗಲಿದೆ ಎಂದರು.
ಸಿದ್ದರಾಮಯ್ಯ ಸುಳ್ಳು ಹೇಳುವುದನ್ನೆ ಕಾಯಕ ಮಾಡಿಕೊಂಡಿದ್ದಾರೆ. ಅವರೊಬ್ಬ ಸಿದ್ದರಾಮಯ್ಯ ಅಲ್ಲ ಸುಳ್ಳು ರಾಮಯ್ಯ ಎಂದು ಕುಟುಕಿದರು.
ಅವರು ರಾಜ್ಯವನ್ನು ಆರ್ಥಿಕ ದುಸ್ಥಿತಿಗೆ ತಂದು ಕೇಂದ್ರದತ್ತ ಬೊಟ್ಟು ಮಾಡುತ್ತಿದ್ದಾರೆ. ನಾವು ಒಂದೇ ಒಂದು ರೂಪಾಯಿ ಜಿಎಸ್ಟಿ ಹಣ ಕೊಡುವುದು ಬಾಕಿ ಇಲ್ಲ ಎಂದರು.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಮಿನಿ ಉದ್ಯೋಗ ಮೇಳ..!
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.