ವಿಜಯಪುರ: ನಗರದ ಹೊರ ವಲಯದಲ್ಲಿರುವ ಹಿಟ್ನಳ್ಳಿ ಟೋಲ್ ಬಳಿ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ನಾಲ್ವರು ಮೃತಪಟ್ಟ ಘಟನೆ ಆ.17ರ ಮಂಗಳವಾರ ರಾತ್ರಿ ಸಂಭವಿಸಿದೆ.
ಅಪಘಾತದಲ್ಲಿ ಮೃತರಾದವರನ್ನು ನಗರದ ವಜ್ರಹನುಮಾನ ಪ್ರದೇಶದ ನಿವಾಸಿಗಳಾದ ಶಿವಾನಂದ ಚೌಧರಿ ( 25) ಸುನೀಲ ಖಾನಾಪೂರ(26) ಈರಣ್ಣ ಕೋಲಾರ (26) ಪ್ರವೀಣ ಪಾಟೀಲ್ (30) ಎಂದು ಗುರುತಿಸಲಾಗಿದೆ.
ಟೋಲ್ ಬಳಿಯ ಸರ್ವೀಸ್ ರಸ್ತೆಯ ಡಿವೈಡರ್ ಮೇಲೆ ನಾಲ್ವರು ಕುಳಿತಿದ್ದಾಗ ಅಪರಿಚಿತ ವಾಹನ ಹರಿದು ನಾಲ್ವರೂ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.
ನಾಲ್ವರ ಬೈಕ್ ಮೇಲೂ ಹರಿದು ಅಪರಿಚಿತ ಟ್ರಕ್ ಸವಾರ, ವಾಹನ ಸಮೇತ ಪರಾರಿಯಾಗಿದ್ದಾನೆ.
ಅಪಘಾತದಲ್ಲಿ ಪಲ್ಸರ್ ಹಾಗೂ ಸಿಬಿಝಡ್ ಬೈಕ್ ಜಖಂಗೊಂಡಿದೆ.
ಸ್ಥಳಿಯರ ಮಾಹಿತಿ ಪ್ರಕಾರ ಚಾಲಕನ ನಿರ್ಲಕ್ಷ್ಯದಿಂದ ಈ ಅಪಘಾತ ಸಂಭವಿಸಿದ್ದು, ಅಪಘಾತಕ್ಕೆ ಕಾರಣವಾದ ಪರಾರಿಯಾಗಿರುವ ಲಾರಿ MH12 QW 8521 ಸಂಖ್ಯೆ ಹೊಂದಿತ್ತು ಎಂದು ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.
ಸುದ್ದಿ ತಿಳಿಯುತ್ತಲೇ ವಿಜಯಪುರ ಗ್ರಾಮೀಣ ವಿಭಾಗದ ಡಿವೈಎಸ್ಪಿ ಗಿರಿಮಲ್ಲ ತಳಕಟ್ಟಿ ಹಾಗೂ ಇತರ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಿಜಯಪುರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿ ಘಟನೆ ಸಂಭವಿಸಿದೆ.
ಪ್ರಜ್ವಲ್ ವಿರುದ್ಧ ಪಕ್ಷದಿಂದ ಕ್ರಮ…
ಹಾಸನದಲ್ಲಿ ಅಭ್ಯರ್ಥಿ ಗೆಲ್ತಾರೆ, ಅದರಲ್ಲಿ ಸಂಶಯ ಇಲ್ಲ…..
ಕುಟುಂಬದ ಹೆಸರು ತರಬೇಡಿ
ಬಾಲ್ಕನಿಯಿಂದ ಅಪಾರ್ಟ್ಮೆಂಟ್ನ ಛವಣಿಗೆ ಬಿದ್ದ ಮಗು ರಕ್ಷಣೆ.
ಸಂಸದ ಶ್ರೀನಿವಾಸ್ ಪ್ರಸಾದ್ ವಿಧಿವಶ.
ಕೆ ಸುಧಾಕರ್ ಗೆ ಗಂಡಾಂತರ.
ಕಾಂಗ್ರೆಸ್ ಕಾರ್ಯಕರ್ತರಿಗೆ ಐಟಿ ಕಿರುಕುಳ
ಇಂಡಿಗನತ್ತ ಗ್ರಾಮದಲ್ಲಿ ಮತಗಟ್ಟೆ ದ್ವಂಸ
ಏಪ್ರಿಲ್ 26ಕ್ಕೆ ಮೊದಲ ಹಂತದ ಚುನಾವಣೆ……
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.