ಸಹ ನಟಿಯ ಮೇಲೆ ಅತ್ಯಾಚಾರ ಆರೋಪ ಪ್ರಕರಣದಲ್ಲಿ ಜೈಲು ಪಾಲಾಗಿದ್ದ, ಕಾಮಿಡಿ ಕಿಲಾಡಿಗಳು ಖ್ಯಾತಿಯ ಮಡೆನೂರು ಮನು ನಟ ಶಿವರಾಜ್ಕುಮಾರ್ ಅವರ ಕಾಲಿಗೆ ಬಿದ್ದು ಕ್ಷಮೆ ಕೇಳಿಕೊಂಡಿದ್ದಾರೆ.
ಈ ಹಿಂದೆ ಮನು ವಿರುದ್ಧ ಕೇಸ್ ದಾಖಲಾದಾಗ ಆಡಿಯೋವೊಂದು ಸಖತ್ ವೈರಲ್ ಆಗಿತ್ತು. ಆ ಆಡಿಯೋ ಕೂಡ ನನ್ನದೇ ಎಂದು ಮಡೆನೂರು ಮನು ಒಪ್ಪಿಕೊಂಡಿದ್ದರು. ಜೊತೆಗೆ ಆ ರೀತಿ ಮಾತನಾಡುವಂತೆ ಪ್ರಚೋದನೆ ಮಾಡಿದ್ದರು. ನಾನಾಗಿಯೇ ಆ ರೀತಿ ಮಾತನಾಡಿದ್ದಲ್ಲ ಎಂದು ಮಡೆನೂರು ಮನು ಜೈಲಿನಿಂದ ಆಚೆ ಬಂದ ಬಳಿಕ ಹೇಳಿಕೊಂಡಿದ್ದರು.
ಜೈಲಿನಿಂದ ಆಚೆ ಬಂದ ಬಳಿಕ ನಟ ಶಿವರಾಜ್ಕುಮಾರ್, ದರ್ಶನ್ ಹಾಗೂ ಧ್ರುವ ಸರ್ಜಾ ಅವರನ್ನ ನೇರವಾಗಿ ಭೇಟಿ ಮಾಡಿ ಕ್ಷಮೆ ಕೇಳಲು ಪ್ರಯತ್ನ ಪಟ್ಟಿದ್ದರು. ಅದು ಸಾಧ್ಯವಾಗಿರಲಿಲ್ಲ. ಇದೀಗ ನಟ ಶಿವರಾಜ್ ಕುಮಾರ್ ಅವರನ್ನ ನೇರವಾಗಿ ಭೇಟಿ ಮಾಡಿ, ಅವರ ಕಾಲಿಗೆ ಬಿದ್ದು ಕ್ಷಮೆ ಕೇಳಿದ್ದಾರೆ. ನಟ ಮಡೆನೂರು ಮನು. ಅಲ್ಲದೇ ತಮ್ಮ ʻಕುಲದಲ್ಲಿ ಕೀಳ್ಯಾವುದೋʼ ಸಿನಿಮಾವನ್ನ ಮತ್ತೆ ಬಿಡುಗಡೆ ಮಾಡುವುದಕ್ಕೆ ಕೇಳಿಕೊಂಡಿದ್ದಾರೆ.
ನಟ ಶಿವರಾಜ್ಕುಮಾರ್, ನಟ ಮಡೆನೂರು ಮನುಗೆ ಒಳ್ಳೆಯದಾಗಲಿ, ʼಒಳ್ಳೆಯ ಟೈಟಲ್ನ ಸಿನಿಮಾ ರಿಲೀಸ್ ಮಾಡಿ. ಕುಲದಲ್ಲಿ ಯಾರೂ ಕೀಳಲ್ಲ, ಮೇಲಲ್ಲ. ಯಾರೇ ಬೈದ್ರೂ, ಹೊಗಳಿದ್ರು ಅದಕ್ಕೆ ನಾನು ತಲೆ ಕೆಡಿಸಿಕೊಳ್ಳಲ್ಲ’ ಎಂದು ತಮ್ಮ ದೊಡ್ಡತನ ಮೆರೆದಿದ್ದಾರೆ.
ಜೈಲಿನಿಂದ ಹೊರ ಬಂದ ಬಳಿಕ ನಟ ಮಡೆನೂರು ಮನು ಫಿಲ್ಮ್ ಚೇಂಬರ್ಗೂ ಭೇಟಿ ನೀಡಿ ತಮ್ಮ ಮೇಲೆ ಹೇರಿದ್ದ ಬ್ಯಾನ್ ತೆರುವುಗೊಳಿಸಿ ಸಿನಿಮಾ ಹಾಗೂ ಕಿರುತೆರೆಯಲ್ಲಿ ನಟಿಸಲು ಸಹಕರಿಸುವಂತೆ ಮನವಿ ಮಾಡಿಕೊಂಡಿದ್ದಾರೆ.















