ಮನೆ ಅಪರಾಧ ಹೆಣ್ಣು ಭ್ರೂಣ ಪತ್ತೆ ಪ್ರಕರಣ: ವೈದ್ಯರು ಸೇರಿದಂತೆ ನಾಲ್ವರ ಬಂಧನ

ಹೆಣ್ಣು ಭ್ರೂಣ ಪತ್ತೆ ಪ್ರಕರಣ: ವೈದ್ಯರು ಸೇರಿದಂತೆ ನಾಲ್ವರ ಬಂಧನ

0

ಬೆಂಗಳೂರು: ನಗದರಲ್ಲಿ ಹೆಣ್ಣು ಭ್ರೂಣ ಪತ್ತೆ ಮಾಡಿ ಹತ್ಯೆ ಮಾಡಿಸುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದ್ದು, ವೈದ್ಯರು ಸೇರಿದಂತೆ ನಾಲ್ವರನ್ನು ಬೆಂಗಳೂರಿನ ಬೈಯಪ್ಪನಹಳ್ಳಿ ಪೊಲೀಸರು ಬಂಧಿಸಿದ್ದಾರೆ.

ಚೆನ್ನೈ ಮೂಲದ ವೈದ್ಯ ಡಾ.ತುಳಸಿರಾಮ್​, ಡಾ.ಚಂದನ್ ಬಲ್ಲಾಳ್, ಡಾ.ಚಂದನ್​ ಬಲ್ಲಾಳ್​ ಪತ್ನಿ ಮೀನಾ, ಲ್ಯಾಬ್​ ಟೆಕ್ನಿಷಿಯನ್ ನಿಸ್ಸಾರ್, ಮೈಸೂರಿನ ಖಾಸಗಿ ಆಸ್ಪತ್ರೆ ರಿಸೆಪ್ಷನಿಸ್ಟ್ ರಿಜ್ಮಾ ಬಂಧಿತರು.

ಆರೋಪಿಗಳು ಸಿಂಡಿಕೇಟ್ ಮಾಡಿಕೊಂಡು ಕೃತ್ಯವೆಸಗುತ್ತಿದ್ದರು. ತಿಂಗಳಲ್ಲಿ 20ರಿಂದ 25 ಭ್ರೂಣ ಹತ್ಯೆ ಮಾಡುತ್ತಿದ್ದ ಬಗ್ಗೆ ಮಾಹಿತಿ ಇದೆ ಪ್ರಕರಣ ಸಂಬಂಧ ರಾಜಕುಮಾರ್ ರಸ್ತೆಯ ಆಯುರ್ವೇದಿಕ್ ಪೈಲ್ಸ್ ಡೇ ಕೇರ್ ಸೆಂಟರ್​, ಉದಯಗಿರಿಯಲ್ಲಿನ ಮಾತಾ ಆಸ್ಪತ್ರೆಯನ್ನು ಪೊಲೀಸರು ಸೀಜ್​ ಮಾಡಿದ್ದಾರೆ.

ತನಿಖೆ ವೇಳೆ 2 ವರ್ಷದಲ್ಲಿ 900 ಹೆಣ್ಣು ಭ್ರೂಣ ಹತ್ಯೆ ಬಗ್ಗೆ ಮಾಹಿತಿ ಇದೆ. ಅಕ್ಟೋಬರ್​​ನಲ್ಲಿ ಮೊದಲಿಗೆ ಕೇಸ್​ ದಾಖಲು ಮಾಡಿದ್ದ ಪೊಲೀಸರು, ಸದ್ಯ ಇಬ್ಬರು ವೈದ್ಯರು ಸೇರಿದಂತೆ 9 ಆರೋಪಿಗಳನ್ನು ಬಂಧಿಸಿದ್ದಾರೆ.

ಬೈಯ್ಯಪ್ಪನಹಳ್ಳಿ ಠಾಣೆ ಪೊಲೀಸರು ಪ್ರಕರಣದ ತನಿಖೆ ಮುಂದುವರೆಸಿದ್ದಾರೆ.

ಹಿಂದಿನ ಲೇಖನಬೆಳಗಾವಿ: ದಂಡು ಮಂಡಳಿ ಸಿಇಒ ಕರ್ನಲ್​ ಆನಂದ್​ ನಿಗೂಢ ಸಾವು
ಮುಂದಿನ ಲೇಖನಮೈಸೂರು ಜಿಲ್ಲಾ ಪಂಚಾಯತ್​: ಎಂಐಎಸ್​ ಸಮಾಲೋಚಕರ ಹುದ್ದೆಗೆ ಅರ್ಜಿ ಆಹ್ವಾನ