ಮನೆ ಆರೋಗ್ಯ ಭ್ರೂಣ ಹತ್ಯೆ ಪ್ರಕರಣ: ಡಿಎಚ್ಓರಿಂದ ಮಾಹಿತಿ ಪಡೆದ ಸಚಿವ ಸುಧಾಕರ್

ಭ್ರೂಣ ಹತ್ಯೆ ಪ್ರಕರಣ: ಡಿಎಚ್ಓರಿಂದ ಮಾಹಿತಿ ಪಡೆದ ಸಚಿವ ಸುಧಾಕರ್

0

ಬೆಳಗಾವಿ(Belagavi): ಜಿಲ್ಲೆಯ ಮೂಡಲಗಿ ಪಟ್ಟಣದಲ್ಲಿ ಶುಕ್ರವಾರ ಏಳು ಭ್ರೂಣಗಳು ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಜಿಲ್ಲಾ ಆರೋಗ್ಯಾಧಿಕಾರಿಗಳಿಂದ ಆರೋಗ್ಯ ಸಚಿವ ಡಾ.ಕೆ‌.ಸುಧಾಕರ್ ಶನಿವಾರ ಮಾಹಿತಿ ಪಡೆದರು.

ಜಿಲ್ಲಾ ಆರೋಗ್ಯಾಧಿಕಾರಿ ಡಾ. ಮಹೇಶ ಕೋಣಿ ಅವರಿಗೆ ಕರೆ ಮಾಡಿದ ಸಚಿವರು, ಈ ಘಟನೆಗೆ ಕಾರಣವೇನು? ಪ್ರಕರಣದಲ್ಲಿ ಯಾರು ಭಾಗಿಯಾಗಿದ್ದಾರೆ ಎನ್ನುವ ಮಾಹಿತಿ ಪಡೆದರು.

ಇದು ಗಂಭೀರವಾದ ಪ್ರಕರಣ. ಯಾರೇ ತಪ್ಪಿತಸ್ಥರಿದ್ದರೂ, ಅವರ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಬೇಕು. ಯಾರ ಒತ್ತಡಕ್ಕೂ ಮಣಿಯಬಾರದು ಎಂದು ಸೂಚಿಸಿದರು.

ಹಿಂದಿನ ಲೇಖನನಿರ್ಮಾಣ ಹಂತದ ಕಟ್ಟಡ ಕುಸಿತ: ಓರ್ವ ಕಾರ್ಮಿಕನ ಸಾವು
ಮುಂದಿನ ಲೇಖನರಾಜ್ಯಾದ್ಯಂತ ಇನ್ನೂ ಎರಡು ದಿನ ಮಳೆ ಸಾಧ್ಯತೆ: ಹವಾಮಾನ ಇಲಾಖೆ