ಮನೆ ರಾಜ್ಯ ಹೆಣ್ಣು ಭ್ರೂಣ ಹತ್ಯೆ ಕರಾಳ ದಂಧೆ ಕೋರರಿಗೆ ಶಿಕ್ಷೆಯಾಗಲಿ:ಕೆ.ನಾಗಣ್ಣಗೌಡ

ಹೆಣ್ಣು ಭ್ರೂಣ ಹತ್ಯೆ ಕರಾಳ ದಂಧೆ ಕೋರರಿಗೆ ಶಿಕ್ಷೆಯಾಗಲಿ:ಕೆ.ನಾಗಣ್ಣಗೌಡ

0

ಮಂಡ್ಯ:ಹೆಣ್ಣು ಭ್ರೂಣ ಪತ್ತೆ ಹಾಗೂ ಹತ್ಯೆ ಮಾಡುವ ಜಾಲ ದೊಡ್ಡ ಮಟ್ಟದಲ್ಲಿ ವಿಸ್ತರಿಸಿದ್ದು,ಸಮಗ್ರ ತನಿಖೆ ನಡೆಸಿ ಇದರ ಮೂಲ ಪತ್ತೆ ಹಚ್ಚಿ ತಪ್ಪಿತಸ್ಥರನ್ನು ಶಿಕ್ಷಿಸಬೇಕು ಎಂದು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಕೆ.ನಾಗಣ್ಣಗೌಡ ಹೇಳಿದರು.


ತಾಲೂಕಿನ ಹಾಡ್ಯದ ಆಲೆಮನೆಗೆ ಭೇಟಿ ನೀಡಿ ಪರಿಶೀಲಿಸಿದ ಆವರು, ಆಧುನಿಕ ಕಾಲದಲ್ಲೂ ಹೆಣ್ಣು ಗಂಡು ಎಂದು ತಾರತಮ್ಯ ಮಾಡಿ ಗರ್ಭದಲ್ಲಿಯೇ ಭ್ರೂಣ ಪತ್ತೆಗೆ ಮುಂದಾಗಿರುವುದು ನಾಚಿಕೆಗೇಡಿನ ವಿಚಾರ ಎಂದರು.
ಹಣಕ್ಕಾಗಿ ನಾಗರಿಕ ಸಮಾಜ ತಲೆತಗ್ಗಿಸುವ ಇಂಥ ಕೃತ್ಯವನ್ನು ಮಾಡುವುದು ಕ್ರೂರವಾದ ಸಂಗತಿ, ವಿದ್ಯಾವಂತ ಜನತೆ ಇಂತಹ ಕೃತ್ಯಕ್ಕೆ ಇಳಿದಿರುವುದು ನೋವಿನ ವಿಚಾರವಾಗಿದೆ,ಸಮಾಜದಲ್ಲಿ ಈಗಾಗಲೇ ಹೆಣ್ಣು ಮಕ್ಕಳ ಸಂಖ್ಯೆ ಕ್ಷೀಣಿಸುತ್ತಿದೆ,ಇಂತಹ ಮಾನವ ವಿರೋಧಿ ಕೃತ್ಯವನ್ನು ಎಲ್ಲರೂ ತಡೆಯಬೇಕಾಗಿದೆ ಎಂದರು.
ಪ್ರಕರಣವನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿ ಉನ್ನತ ತನಿಖೆ ನಡೆಸುವ ಮೂಲಕ ಆರೋಪಿಗಳನ್ನು ಪತ್ತೆಹಚ್ಚಬೇಕು, ಆರೋಗ್ಯ ಇಲಾಖೆ ಮುನ್ನಚ್ಚರಿಕೆ ವಹಿಸಬೇಕು,ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಗಳು ಸುತ್ತಮುತ್ತಲ ಪ್ರದೇಶದಲ್ಲಿ ಯಾವ್ಯಾವ ಚಟುವಟಿಕೆ ನಡೆಯುತ್ತಿದೆ ಎಂಬುದರ ಬಗ್ಗೆ ಗಮನಹರಿಸಬೇಕು, ಸುತ್ತಲು ಬೆಳೆ ಇರುವ ಜಮೀನು ಮಧ್ಯ ಭಾಗದ ಆಲೆಮನೆಯ ಕೊಠಡಿಯಲ್ಲಿ ಹೆಣ್ಣು ಭ್ರೂಣ ಪತ್ತೆ ಹಾಗೂ ಹತ್ಯೆ ಮಾಡುವ ಜಾಲ ಬೇರೂರಿದೆ,
ಹೆಣ್ಣು ಭ್ರೂಣ ಹತ್ಯೆ ಮಾಡುವುದು ಘೋರ ಅಪರಾಧ ಕರಾಳ ದಂಧೆಯಲ್ಲಿ ಭಾಗಿಯಾಗಿರುವ ತಪ್ಪಿತಸ್ಥರ ವಿರುದ್ದ ಕಠಿಣ ಕ್ರಮ ವಾಗಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಮಿಕ್ಕೆರೆ ವೆಂಕಟೇಶ್, ಆರೋಗ್ಯ ಇಲಾಖೆ ಅಧಿಕಾರಿಗಳು ಹಾಜರಿದ್ದರು.

ಹಿಂದಿನ ಲೇಖನಚಿತ್ರೀಕರಣದ ವೇಳೆ ಅವಘಡ: ಹಿರಿಯ ನಟ ಮಂಡ್ಯ ರಮೇಶ್‌ ಅವರಿಗೆ ತೀವ್ರ ಗಾಯ
ಮುಂದಿನ ಲೇಖನಮಹಾನ್ ವ್ಯಕ್ತಿಗಳ ತತ್ವಾದರ್ಶ ಅಳವಡಿಸಿಕೊಂಡರೆ ಅದೇ ಸಂವಿಧಾನ: ಸಚಿವ ಎಸ್ ಮಧು ಬಂಗಾರಪ್ಪ