ಮೈಸೂರು : ಆದಿ ಚುಂಚನಗಿರಿ ಶ್ರೀಗಳು ಡಿಕೆ ಶಿವಕುಮಾರ್ ಸಿಎಂ ಆಗವಬೇಕು ಎಂದು ಹೇಳಿಕೆ, ಕೊಟ್ಟ ಬೆನ್ನಲ್ಲೇ ಒಕ್ಕಲಿಗರ ಸಂಘ ಅಲರ್ಟ್ ಆಗಿ ಸ್ವಾಮೀಜಿಗಳ ಧ್ವನಿಗೆ ದನಿ ಗೂಡಿಸಿದ್ದಾರೆ ಎಂದು ಹೇಳಲಾಗಿದೆ.
ಸಿಎಂ ತವರಿನಲ್ಲಿ ಒಕ್ಕಲಿಗ ಸಮುದಾಯದ ಮುಖಂಡರು ಡಿಕೆ ಶಿವಕುಮಾರ್ ಪರವಾಗಿ ಧ್ವನಿ ಜೋರು ಮಾಡಿದ್ದಾರೆ. ಡಿಕೆ ಶಿವಕುಮಾರ್ ಪರವಾಗಿ ಒಕ್ಕಲಿಗ ಸಮುದಾಯದ ಮುಖಂಡರು ಫೀಲ್ಡಿಗಿಳಿದಿದ್ದು, ಖಾಸಗಿ ಹೋಟೆಲ್ನಲ್ಲಿ ಸಭೆ ನಡೆಸಿ ಡಿಕೆಶಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.
ಮೈಸೂರು ಒಕ್ಕಲಿಗರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು, ಒಕ್ಕಲಿಗ ಮುಖಂಡರ ಸಭೆ ನಡೆಸಿದ್ದು ಸಭೆಯಲ್ಲಿ 50ಕ್ಕೂ ಹೆಚ್ಚು ಒಕ್ಕಲಿಗ ಮುಖಂಡರು ಭಾಗಿಯಾಗಿದ್ದರು. ಈ ಸಭೆಯಲ್ಲಿ ಜೆಡಿಎಸ್ ಬಿಜೆಪಿ-ಕಾಂಗ್ರೆಸ್ ಪಕ್ಷದ ಒಕ್ಕಲಿಗ ಮುಖಂಡರು ಇದ್ದರು. ಡಿಕೆ ಶಿವಕುಮಾರ್ಗೆ ಸಿದ್ದರಾಮಯ್ಯ ಅಧಿಕಾರ ಬಿಟ್ಟುಕೊಡಬೇಕು ಎಂದು ಹೇಳಿದ್ದಾರೆ.
ಸಿದ್ದರಾಮಯ್ಯ ಅಧಿಕಾರ ಬಿಟ್ಟುಕೊಟ್ಟರೆ, ಒಕ್ಕಲಿಗ ಸಮುದಾಯ ಸಿದ್ದರಾಮಯ್ಯ ಅವರನ್ನು ಗೌರವಿಸುತ್ತದೆ. ಡಿಕೆಶಿಗೆ ಅನ್ಯಾಯ ಆದರೆ ಬೀದಿಗಿಳಿದು ಹೋರಾಟ ಮಾಡುತ್ತೇವೆ ಎಂದು ಎಚ್ಚರಿಸಿರುವುದು ತಿಳಿದುಬಂದಿದೆ.















