‘ಬಾನ ದಾರಿಯಲ್ಲಿ’ ಚಿತ್ರದ ಚಿತ್ರೀಕರಣಕ್ಕಾಗಿ ಕೀನ್ಯಾದಲ್ಲಿರುವ ಗೋಲ್ಡನ್ ಸ್ಟಾರ್ ಗಣೇಶ್, ಗುಹೆಯೊಳಗಿನ ವಿಡಿಯೊವೊಂದನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ. ‘ಶಿಲಾಯುಗ‘ ಎಂಬ ತಲೆಬರಹದೊಂದಿಗೆ ಹಂಚಿಕೊಂಡಿರುವ ಈ ವಿಡಿಯೊಕೆ ಅಭಿಮಾನಿಗಳು ಖುಷಿಯಿಂದ ಪ್ರತಿಕ್ರಿಯಿಸುತ್ತಿದ್ದಾರೆ. ಜೋಪಾನ ಎಂಬ ಸಂದೇಶಗಳನ್ನು ನೀಡುತ್ತಿದ್ದಾರೆ.
ಕೀನ್ಯಾದ ಪುಟ್ಟಮಕ್ಕಳ ಜೊತೆ ಬೀದಿಯಲ್ಲಿ ಡ್ಯಾನ್ಸ್ ಮಾಡುತ್ತಿರುವ ವಿಡಿಯೊವನ್ನು ಕೂಡ ಗಣೇಶ್ ಹಂಚಿಕೊಂಡಿದ್ದರು. ಇದಕ್ಕೂ ಕೂಡ ಅಭಿಮಾನಿಗಳು ಖುಷಿಖುಷಿಯಾಗಿ ಪ್ರತಿಕ್ರಿಯಿಸಿದ್ದರು.
ಕೀನ್ಯಾದ ಸ್ಥಳಗಳನ್ನು ಎಂಜಾಯ್ ಮಾಡುತ್ತಿರುವ ಗೋಲ್ಡನ್ಸ್ಟಾರ್, ಅಲ್ಲಿನ ವಿಭಿನ್ನವಾದ ಅನುಭವಗಳನ್ನು ಅಭಿಮಾನಿಗಳೊಂದಿಗೆ ಹಂಚಿಕೊಳ್ಳುತ್ತಿದ್ದಾರೆ. ಗಣೇಶ್ ಕ್ರಿಕೆಟಿಗನಾಗಿ ಕಾಣಿಸಿಕೊಂಡಿರುವ ‘ಬಾನ ದಾರಿಯಲ್ಲಿ’ ಚಿತ್ರ ಎರಡು ಹಂತಗಳ ಶೂಟಿಂಗ್ ಮುಗಿಸಿದೆ. ಇದೀಗ ಮೂರನೇ ಹಂತದ ಶೂಟಿಂಗ್ಗೆ ಆಫ್ರಿಕಾ ಪ್ರವಾಸದಲ್ಲಿದೆ.
ಇದು ಪ್ರೀತಂ ಗುಬ್ಬಿ ನಿರ್ದೇಶನದ ಚಿತ್ರ.ಕ್ರೀಡಾ ವಿಷಯದ ಕಥಾ ವಸ್ತುವನ್ನಿಟ್ಟುಕೊಂಡು ಚಿತ್ರ ಮೂಡಿಬರಲಿದೆ. ನಾಯಕಿ ರುಕ್ಮಿಣಿ ವಸಂತ್ ಇಲ್ಲಿ ಈಜುಗಾರ್ತಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈಜುಡುಗೆ ಧರಿಸಿರುವ ಅವರ ಚಿತ್ರಗಳು ಈಗಾಗಲೇ ಜಾಲತಾಣಗಳಲ್ಲಿ ಗಮನ ಸೆಳೆದಿವೆ.
ಈ ಚಿತ್ರದ ಕಥೆ ಪ್ರೀತಾ ಜಯರಾಂ ಅವರದು. ಮಾಸ್ತಿ ಸಂಭಾಷಣೆ, ಅರ್ಜುನ್ ಜನ್ಯ ಸಂಗೀತ ನಿರ್ದೇಶನ, ಅಭಿಲಾಷ್ ಕಲ್ಲತ್ತಿ ಛಾಯಾಗ್ರಹಣ ಹಾಗೂ ಕೆ.ಎಂ.ಪ್ರಕಾಶ್ ಸಂಕಲನ ಈ ಚಿತ್ರಕ್ಕಿದೆ. ರೀಶ್ಮಾ ನಾಣಯ್ಯ, ರಂಗಾಯಣ ರಘು ತಾರಾಗಣದಲ್ಲಿದ್ದಾರೆ. ಶ್ರೀವಾರಿ ಟಾಕೀಸ್ ಲಾಂಛನದಲ್ಲಿ ಚಿತ್ರ ನಿರ್ಮಾಣವಾಗುತ್ತಿದೆ.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.