ಮನೆ ರಾಜ್ಯ ಅಧಿಕಾರಿ ಹೆಸರಲ್ಲಿ ಸುಳ್ಳು ಮಾಹಿತಿ ಆರೋಪ – ಮೂವರ ವಿರುದ್ಧ ಎಫ್‌ಐಆರ್‌

ಅಧಿಕಾರಿ ಹೆಸರಲ್ಲಿ ಸುಳ್ಳು ಮಾಹಿತಿ ಆರೋಪ – ಮೂವರ ವಿರುದ್ಧ ಎಫ್‌ಐಆರ್‌

0

ಮಂಗಳೂರು : ವ್ಯಕ್ತಿಯೊಬ್ಬರನ್ನು ಮಾನವ ಹಕ್ಕುಗಳ ಆಯೋಗದ ಅಧಿಕಾರಿ ಅಂತ ಪರಿಚಯಿಸಿ‌ ಸುಳ್ಳು ಮಾಹಿತಿ ನೀಡಿದ ಆರೋಪದ ಮೇಲೆ ಗಿರೀಶ್‌ ಮಟ್ಟಣ್ಣನವರ್‌ ಸೇರಿ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ.

ಶ್ರೀಕ್ಷೇತ್ರ ಧರ್ಮಸ್ಥಳದ ಭಕ್ತ ಪ್ರವೀಣ್ ಕೆ.ಆರ್ ಎಂಬುವವರು ನೀಡಿದ ದೂರಿನಡಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಮಟ್ಟಣ್ಣನವರ್, ತಿಮರೋಡಿ, ಮದನ್ ಬುಗುಡಿ ವಿರುದ್ಧ ಕೇಸ್‌ ದಾಖಲಿಸಲಾಗಿದೆ.

ಈ ಹಿಂದೆ ಮಟ್ಟಣ್ಣನವರ್‌ ಮಾಧ್ಯಮಗಳ ಎದುರು ಮಾತನಾಡುವ ವೇಳೆ ಮದನ್ ಬುಗುಡಿಯನ್ನ ಮಾನವ ಹಕ್ಕು ಆಯೋಗದ ಅಧಿಕಾರಿ ಎಂದು ಪರಿಚಯಿಸಿದ್ದರು. ಇದು ಸುಳ್ಳು ಎಂದು ಆರೋಪಿಸಿ ಪ್ರವೀಣ್‌ ದೂರು ನೀಡಿದ್ದರು. ದೂರಿನ ಆಧಾರದ ಮೇರೆಗೆ 204, 319(2), 353(2) ಸೆಕ್ಷನ್ ಗಳಡಿ ಪ್ರಕರಣ ದಾಖಲಾಗಿದೆ.

ಈಗಾಗಲೇ ಬುರುಡೆ ಗ್ಯಾಂಗ್ ಬೆನ್ನತ್ತಿರುವ ಎಸ್‌ಐಟಿ ಅಧಿಕಾರಿಗಳು ತನಿಖೆಯ ಹಂತವಾಗಿ ಬೆಂಗಳೂರಿಗೆ ಬಂದು ತನಿಖೆ ನಡೆಸಿದ್ದಾರೆ. ಹೀಗಾಗಿ ಮಂಡ್ಯ, ತಮಿಳುನಾಡಿಗೂ ಹೋಗಿ ವಿಚಾರಣೆ ನಡೆಸುತ್ತಾ ಅನ್ನೋ ಪ್ರಶ್ನೆಗಳು ಮೂಡಿವೆ. ಬೆಂಗಳೂರಲ್ಲಿ ನಿನ್ನೆ ಇವತ್ತು ತೀವ್ರ ಶೋಧ ನಡೆಸಿದ್ದು ಮಂಡ್ಯ, ತಮಿಳುನಾಡಿಗೂ ಬುರುಡೆ ತನಿಖೆ ವಿಸ್ತರಣೆ ಆಗೋ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.