ಮನೆ ಸುದ್ದಿ ಜಾಲ ಅಗ್ನಿ ಅವಘಡ: ದಂಪತಿ ಸಜೀವ ದಹನ

ಅಗ್ನಿ ಅವಘಡ: ದಂಪತಿ ಸಜೀವ ದಹನ

0

ಯಾದಗಿರಿ: ಮನೆಯೊಂದರಲ್ಲಿ ಸೋಮವಾರ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ದಂಪತಿ ಸಜೀವ ದಹನವಾಗಿರುವ ಘಟನೆ ಇಲ್ಲಿನ ಸೈದಾಪುರ ಪಟ್ಟಣದಲ್ಲಿ ನಡೆದಿದೆ.

ಕೆ.ಬಿ.ರಾಘವೇಂದ್ರ (39), ಶಿಲ್ಪಾ ರಾಘವೇಂದ್ರ (32) ಮೃತಪಟ್ಟವರು.

ಬಟ್ಟೆ ಅಂಗಡಿ ವ್ಯಾಪಾರಿಗಳಾಗಿದ್ದ ಇವರು ಮನೆಯ ಮೂರು ಮಹಡಿಗಳ ಪೈಕಿ ಎರಡರಲ್ಲಿ ಬಟ್ಟೆ ವ್ಯಾಪಾರ, ಒಂದರಲ್ಲಿ ವಾಸವಿದ್ದರು. ಎಂದಿನಂತೆ ವ್ಯವಹಾರ ಮುಗಿಸಿಕೊಂಡು ಮನೆಯಲ್ಲಿ ಮಲಗಿದ್ದಾಗ ಭಾನುವಾರ ತಡರಾತ್ರಿ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಅಂದಾಜಿಸಲಾಗಿದೆ.

ಸೋಮವಾರ ಬೆಳಗಿನ ಜಾವ 5 ಗಂಟೆಗೆ ಸಾರ್ವಜನಿಕರು ಗಮನಿಸಿದ್ದಾರೆ‌. ಅಂಗಡಿಯಲ್ಲಿ ಮಾರಾಟಕ್ಕಿಟ್ಟಿದ್ದ ಬಟ್ಟೆಗಳು ಸಂಪೂರ್ಣವಾಗಿ ಸುಟ್ಟು ಬೂದಿಯಾಗಿವೆ.

ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ.

ಹಿಂದಿನ ಲೇಖನ‌‌‌ಜೆಡಿಎಸ್‌ ಶಾಸಕ ಎಸ್‌.ಆರ್‌ ಶ್ರೀನಿವಾಸ್‌ ರಾಜೀನಾಮೆ: ಕಾಂಗ್ರೆಸ್ ಸೇರ್ಪಡೆ ಸಾಧ್ಯತೆ ?
ಮುಂದಿನ ಲೇಖನಬ್ಯಾಂಕ್ ಸಿಬ್ಬಂದಿ ಸೋಗಿನಲ್ಲಿ ಒಟಿಪಿ ಪಡೆದು ವೃದ್ಧೆಗೆ 1.80 ಲಕ್ಷ ವಂಚಿಸಿದ ಸೈಬರ್ ಕಳ್ಳರು