ನವದೆಹಲಿ: ನಗರದ ಪಿತಾಂಪುರ ಪ್ರದೇಶದ ಮನೆಯೊಂದರಲ್ಲಿ ಗುರುವಾರ ಸಂಜೆ ಬೆಂಕಿ ಅನಾಹುತ ಸಂಭವಿಸಿದ್ದು, ಎರಡು ಕುಟುಂಬಗಳ ಆರು ಮಂದಿ ಸಜೀವ ದಹನವಾಗಿದ್ದಾರೆ.
ಮೃತರಲ್ಲಿ ನಾಲ್ವರು ಮಹಿಳೆಯರಿದ್ದಾರೆ. ಬಹುಮಹಡಿ ಕಟ್ಟಡದಲ್ಲಿ ರಾತ್ರಿ ಘಟನೆ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಅಗ್ನಿಶಾಮಕ ದಳವು ಸ್ಥಳೀಯ ಪೊಲೀಸರ ನೆರವಿನಿಂದ ಸ್ಥಳಕ್ಕೆ ಧಾವಿಸಿ ಏಳು ಮಂದಿಯನ್ನು ರಕ್ಷಿಸಿ ಬಾಬು ಜಗಜೀವನ್ ರಾಮ್ ಆಸ್ಪತ್ರೆಗೆ ರವಾನಿಸಿದರು. ಎಂಟು ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದವು. ಕಟ್ಟಡದ ಮೊದಲ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಮೇಲಿನ ಮೂರು ಮಹಡಿಗಳು ದಟ್ಟ ಹೊಗೆಯಿಂದ ಆವರಿಸಿದ್ದವು ಎಂದು ಪೊಲೀಸರು ತಿಳಿಸಿದರು.
ಅನಾಹುತಕ್ಕೆ ಕಾರಣ ಇನ್ನಷ್ಟೇ ಗೊತ್ತಾಗಬೇಕಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ಅಧಿಕಾರಿ ಹೇಳಿದರು.
ಅಗ್ನಿಶಾಮಕ ಅಧಿಕಾರಿಗಳ ಪ್ರಕಾರ, ಬೆಂಕಿ ಕಾಣಿಸಿಕೊಂಡಾಗ ಕೆಲವರು ಮನೆಯೊಳಗೆ ಸಿಲುಕಿಕೊಂಡಿದ್ದರು. ಅಗ್ನಿಶಾಮಕ ದಳದ ವಾಹನಗಳು ಮೊದಲು ಬೆಂಕಿ ನಿಯಂತ್ರಿಸುವ ಕಾರ್ಯ ಆರಂಭಿಸಿದ್ದು, ಬಳಿಕ ರಕ್ಷಣಾ ಕಾರ್ಯಾಚರಣೆ ಕೈಗೊಂಡಿತು. ಕಾರ್ಯಾಚರಣೆಯಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿ 7 ಮಂದಿಯನ್ನು ಒಬ್ಬೊಬ್ಬರಾಗಿ ರಕ್ಷಿಸಿದರು. ಗಾಯಾಳುಗಳನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಯಿತು. ವೈದ್ಯರು ಮೊದಲು ಮೂವರು ಸಾವನ್ನಪ್ಪಿರುವುದಾಗಿ ಘೋಷಿಸಿದರು. ಉಳಿದ ಗಾಯಾಳುಗಳ ಸ್ಥಿತಿ ಚಿಂತಾಜನಕವಾಗಿದೆ ಎಂದಿದ್ದರು. ಬಳಿಕ ಮತ್ತೆ ಮೂವರು ಸಾವನ್ನಪ್ಪಿದರು. ಇದೀಗ ಶವಗಳನ್ನು ರೋಹಿಣಿಯಲ್ಲಿರುವ ಅಂಬೇಡ್ಕರ್ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಮಿನಿ ಉದ್ಯೋಗ ಮೇಳ..!
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.