ಮನೆ ಸುದ್ದಿ ಜಾಲ ಬೆಂಗಳೂರು: ಹೋಟೆಲ್‌ನಲ್ಲಿ ಬೆಂಕಿ ಅವಘಡ

ಬೆಂಗಳೂರು: ಹೋಟೆಲ್‌ನಲ್ಲಿ ಬೆಂಕಿ ಅವಘಡ

0

ಬೆಂಗಳೂರು: ಬೆಂಗಳೂರಿನ ಗಾಂಧಿನಗರದ ಸುಖ್‌ಸಾಗರ್ ಹೋಟೆಲ್‌ನಲ್ಲಿ ಬೆಂಕಿ ಅವಘಡ ಸಂಭವಿಸಿದೆ.
ಹೋಟೆಲ್‌ನ ೫ನೇ ಮತ್ತು ೬ನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಮಧ್ಯಾಹ್ನ ೨:೪೫ ರ ಸುಮಾರಿಗೆ ಅಗ್ನಿ ಅವಘಡ ಸಂಭವಿಸಿದೆ. ೨ ಅಗ್ನಿಶಾಮಕ ವಾಹನಗಳಿಂದ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ. ಕೂಡಲೇ ಎಚ್ಚೆತ್ತುಕೊಂಡ ಹಿನ್ನೆಲೆ ಭಾರಿ ಅನಾಹುತ ತಪ್ಪಿದೆ. ಶಾರ್ಟ್ ಸರ್ಕೂ್ಯಟ್‌ನಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಹೇಳಲಾಗ್ತಿದೆ. ತಡವಾಗಿದ್ದರೆ ಅಕ್ಕಪಕ್ಕದ ಕಟ್ಟಡಕ್ಕೆ ಬೆಂಕಿ ವ್ಯಾಪಿಸುತ್ತಿತ್ತು. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಹೋಟೆಲ್‌ನಲ್ಲಿ ಮಧ್ಯಾಹ್ನ ೨-೩೦ ಕ್ಕೆ ಹೋಟೆಲ್ ನ ೬ನೇ ಫ್ಲೋರ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಕಾಣಿಸಿಕೊಂಡಿರೋ ವಿಚಾರ ಹೋಟೆಲ್‌ನಲ್ಲಿದ್ದವರಿಗೆ ತಿಳಿದಿಲ್ಲ. ಹೋಟೆಲ್ ನಲ್ಲಿ ಬೆಂಕಿ ಉರಿಯುತ್ತಿರೋದನ್ನ ಗಮನಿಸಿದ ಉಪ್ಪಾರಪೇಟೆ ಪೊಲೀಸ್ ಠಾಣಾ ಸಬ್ ಇನ್ಸ್ ಪೆಕ್ಟರ್ ರವಿ ಅವರು ಕೂಡಲೆ ಅಗ್ನಿಶಾಮಕದಳಕ್ಕೆ ಕರೆ ಮಾಡಿದ್ದಾರೆ.
ಹೋಟೆಲ್ ಮೇಲ್ಭಾಗದಲ್ಲಿ ಹಳೆಯ ೪ ಸೋಫಾ ಸೆಟ್ , ಬೆಡ್ ಇಡಲಾಗಿತ್ತು. ವಾಟರ್ ಹೀಟರ್ ಬರ್ನ್ ಆಗಿ ಬೆಂಕಿ ಹೊತ್ತಿಕೊಂಡಿದೆಯೋ ಅಥವಾ ಶಾರ್ಟ್ ಸರ್ಕೂ್ಯಟ್‌ನಿಂದಲೂ ಬೆಂಕಿ ತಗುಲಿರುವ ಶಂಕೆ ವ್ಯಕ್ತವಾಗಿದೆ. ಉಪ್ಪಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಹಿಂದಿನ ಲೇಖನಮಳವಳ್ಳಿ – ನೇನೆಕಟ್ಟೆ ರಸ್ತೆ ಕಾಮಗಾರಿ ಎರಡೇ ದಿನಕ್ಕೆ ಕಿತ್ತು ಬಂದ ಡಾಂಬಾರ್ 
ಮುಂದಿನ ಲೇಖನಎತ್ತಿನಹೊಳೆ ಯೋಜನೆಯಿಂದ ಗುತ್ತಿಗೆದಾರರ ಜೇಬು ತುಂಬಿಸಲಾಗುತ್ತದೆಯೇ?: ಹೆಚ್.ಡಿ.ಕುಮಾರಸ್ವಾಮಿ