ಮನೆ ರಾಜ್ಯ ಗುಜರಿ ವಸ್ತುಗಳು ತುಂಬಿದ್ದ ಕಟ್ಟಡದಲ್ಲಿ ಬೆಂಕಿ: ವ್ಯಕ್ತಿ ಸಜೀವ ದಹನ

ಗುಜರಿ ವಸ್ತುಗಳು ತುಂಬಿದ್ದ ಕಟ್ಟಡದಲ್ಲಿ ಬೆಂಕಿ: ವ್ಯಕ್ತಿ ಸಜೀವ ದಹನ

0

ತುಮಕೂರು: ಗುಜರಿ ವಸ್ತುಗಳನ್ನು ತುಂಬಿದ್ದ ಕಟ್ಟಡದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ವ್ಯಕ್ತಿಯೊಬ್ಬರು ಸಜೀವ ದಹನವಾಗಿರುವ ಘಟನೆ ನಗರದ ಕ್ಯಾತ್ಸಂದ್ರದ ಬಳಿ ಬುಧವಾರ ತಡರಾತ್ರಿ ನಡೆದಿದೆ.

ಬಡ್ಡಿಹಳ್ಳಿ ನಿವಾಸಿ ಶಿವಕುಮಾರ್ ಎಂಬವರಿಗೆ ಸೇರಿದ ಕಟ್ಟಡದ ಮೊದಲ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ನೆಲ ಮಹಡಿಯಲ್ಲಿ ವೆಂಕಟೇಶ್ ಎಂಬುವರು ಗೋಬಿ ಮಂಚೂರಿ ತಯಾರಿಸುವ ಅಂಗಡಿ ಇಟ್ಟುಕೊಂಡಿದ್ದರು. ಮೊದಲ ಮಹಡಿ ಖಾಲಿ ಇದ್ದು, ಗುಜರಿ ವಸ್ತುಗಳನ್ನು ತುಂಬಿಸಲಾಗಿತ್ತು. ವಿದ್ಯುತ್ ಶಾರ್ಟ್ ಸರ್ಕೀಟ್‌ ನಿಂದ ಅಗ್ನಿ ಅವಘಡ ಸಂಭವಿಸಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಮೃತ ವ್ಯಕ್ತಿಯ ದೇಹ ಸಂಪೂರ್ಣವಾಗಿ ಸುಟ್ಟು ಹೋಗಿದ್ದು, ಗುರುತು ಪತ್ತೆಯಾಗಿಲ್ಲ. ಕ್ಯಾತ್ಸಂದ್ರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಿಂದಿನ ಲೇಖನದಲಿತ ಮುಖಂಡನ ಹತ್ಯೆ ಪ್ರಕರಣ: ಮೂವರ ಬಂಧನ
ಮುಂದಿನ ಲೇಖನಕೇರಳ ಸಿಎಂ ಪಿಣರಾಯಿ ವಿಜಯನ್‌ ಗೆ ಬೆದರಿಕೆ ಕರೆ ಮಾಡಿದ 12 ವರ್ಷದ ಬಾಲಕ