ಮನೆ ರಾಜ್ಯ ದೇವಸ್ಥಾನದ ಅಡುಗೆ ಮನೆಯಲ್ಲಿ ಅಗ್ನಿ ಅವಘಡ: ನಾಲ್ವರಿಗೆ ಗಾಯ

ದೇವಸ್ಥಾನದ ಅಡುಗೆ ಮನೆಯಲ್ಲಿ ಅಗ್ನಿ ಅವಘಡ: ನಾಲ್ವರಿಗೆ ಗಾಯ

0

ಹುಬ್ಬಳ್ಳಿ(Hubballi): ಅಡುಗೆ ಅನಿಲ ಸೋರಿಕೆಯಿಂದಾಗಿ ಸಂಭವಿಸಿದ ಅಗ್ನಿ ಅವಘಡದಲ್ಲಿ ನಾಲ್ವರು ಗಾಯಗೊಂಡಿರುವ ಘಟನೆ ವೀರಾಪೂರ ಓಣಿಯ ಶ್ರೀ ಗಣಪತಿ ಈಶ್ವರ ದೇವಸ್ಥಾನದ ಅಡುಗೆ ಮನೆಯಲ್ಲಿ  ನಡೆದಿದೆ.

ಮಗು ಹಾಗೂ ಇಬ್ಬರು ಮಹಿಳೆಯರು ದೇವರ ದರ್ಶನಕ್ಕೆ ಆಗಮಿಸಿದ ಸಂದರ್ಭದಲ್ಲಿ ಈ ಈ ಅವಘಡ ಸಂಭವಿಸಿದೆ. ದೇವಸ್ಥಾನದ ಅರ್ಚಕ, ಮಗು ಹಾಗೂ ಇಬ್ಬರು ಮಹಿಳೆಯರು ಗಾಯಗೊಂಡಿದ್ದಾರೆ.

ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ಮಗುವನ್ನು ಹುಬ್ಬಳ್ಳಿಯ ಎಸ್.ಡಿ.ಎಂ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದ ಮೂವರನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನಾ ಸ್ಥಳಕ್ಕೆ ಬೆಂಡಿಗೇರಿ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

ಹಿಂದಿನ ಲೇಖನತಮಿಳುನಾಡು ಬಿಜೆಪಿ ಮಹಿಳಾ ಘಟಕದ ನಾಯಕಿ ಗಾಯತ್ರಿ ರಘುರಾಮ್ ರಾಜೀನಾಮೆ
ಮುಂದಿನ ಲೇಖನಪಾಂಚಜನ್ಯ ಕ್ಷೇತ್ರ ಶಂಖ