ಮನೆ ಸುದ್ದಿ ಜಾಲ ಬಾವಿಯಲ್ಲಿ ಬಿದ್ದಿದ್ದ ಹಸುವನ್ನು ರಕ್ಷಿಸಿದ ಅಗ್ನಿಶಾಮಕ ದಳ ಸಿಬ್ಬಂದಿ

ಬಾವಿಯಲ್ಲಿ ಬಿದ್ದಿದ್ದ ಹಸುವನ್ನು ರಕ್ಷಿಸಿದ ಅಗ್ನಿಶಾಮಕ ದಳ ಸಿಬ್ಬಂದಿ

0

ಹನೂರು(Hanuru): ತೋಟದ ಬಾವಿಯಲ್ಲಿ ಬಿದ್ದಿದ್ದ ಹಸುವನ್ನು ಅಗ್ನಿಶಾಮಕ ದಳ ಸಿಬ್ಬಂದಿಗಳು ರಕ್ಷಣೆ ಮಾಡಿದ್ದಾರೆ.

ತಾಲ್ಲೂಕಿನ ಮಂಚಾಪುರ ಗ್ರಾಮದ ತೋಟದ ಬಾವಿಯ ಸಮೀಪದಲ್ಲಿ ಮೇಯುತ್ತಿದ್ದ ಹಸುವೊಂದು ಆಕಸ್ಮಿಕವಾಗಿ ಬಾವಿಗೆ ಬಿದ್ದಿದೆ. ನಂತರ ಸುಧಾರಾಣಿ ಎಂಬುವವರು ಅಗ್ನಿಶಾಮಕ ಕಚೇರಿಗೆ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಬಾವಿಗೆ ಬಿದ್ದಿದ್ದ ಹಸುವನ್ನು ರಕ್ಷಣೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

ಕಾರ್ಯಚರಣೆಯಲ್ಲಿ ಪ್ರಭಾರ ಠಾಣಾಧಿಕಾರಿಯಾದ ಟಿ ಪ್ರಶಾಂತ್ ನಾಯ್ಕ ಅವರು, ಮಾರ್ಗದರ್ಶನದಲ್ಲಿ ಸಿಬ್ಬಂದಿಗಳಾದ ಮಹೇಶ್, ಗಿರೀಶ್, ನವೀನ್ ಹಾಗೂ ನಾಗೇಶ್ ಪಾಲ್ಗೊಂಡಿದ್ದರು.