ನವದೆಹಲಿ: ಸಮಾಜದ ನಿರ್ಲಕ್ಷ್ಯ ಮತ್ತು ಅಸಡ್ಡೆಗೆ ಗುರಿಯಾಗಿರುವ ತೃತೀಯ ಲಿಂಗಿಗಳಿಗಾಗಿ ಇಲ್ಲಿನ ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಯಲ್ಲಿ ಪ್ರತ್ಯೇಕ ಹೊರರೋಗಿ ವಿಭಾಗ(ಒಪಿಡಿ)ವನ್ನು ಇಂದು ಆರಂಭಿಸಲಾಯಿತು. ಇದು ದೇಶದ ಮೊದಲ ತೃತೀಯ ಲಿಂಗಿಗಳ ಒಪಿಡಿಯಾಗಿದೆ. ಆರ್ಎಂಎಲ್ ಆಸ್ಪತ್ರೆಯ ನಿರ್ದೇಶಕ ಪ್ರೊಫೆಸರ್ ಡಾ. ಅಜಯ್ ಶುಕ್ಲಾ ಅವರು ಒಪಿಡಿಯನ್ನು ಉದ್ಘಾಟಿಸಿದರು. ಇದರ ಬಳಿಕ ಹಲವಾರು ತೃತೀಯ ಲಿಂಗಿಗಳು ಕೌಂಟರ್ನಲ್ಲಿ ಟಿಕೆಟ್ ಪಡೆದುಕೊಂಡು ಆರೋಗ್ಯ ತಪಾಸಣೆಗೆ ಒಳಪಟ್ಟರು.
ಉದ್ಘಾಟನೆಯ ಬಳಿಕ ಮಾತನಾಡಿ ಡಾ. ಅಜಯ್ ಶುಕ್ಲಾ ಅವರು, ತೃತೀಯ ಲಿಂಗಿಗಳು ತಮ್ಮ ಆರೋಗ್ಯದ ಕಡೆಗೆ ಹೆಚ್ಚಿನ ಗಮನ ಹರಿಸಬೇಕು. ಆರೋಗ್ಯ ಸೇವೆ ಪಡೆದುಕೊಳ್ಳಲು ತೃತೀಯ ಲಿಂಗಿಗಳು ಪಡುತ್ತಿರುವ ತೊಂದರೆಗಳನ್ನು ಕಂಡು ಅವರಿಗಾಗಿಯೇ ಪ್ರತ್ಯೇಕ ಒಪಿಡಿಯನ್ನು ಆರಂಭಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದಂದೇ ಆರೋಗ್ಯ ಸೇವೆಯ ವಿಭಾಗವನ್ನು ಆರಂಭಿಸಿರುವುದು ಸಂತಸ ತಂದಿದೆ ಎಂದರು.
ಅಸ್ವಸ್ಥತೆ ಮತ್ತು ತಾರತಮ್ಯದ ಭಯದಿಂದಾಗಿ ಆಸ್ಪತ್ರೆಗೆ ತೃತೀಯ ಲಿಂಗಿಗಳು ಬರುವುದೇ ಕಡಿಮೆಯಾಗಿತ್ತು. ಇದನ್ನು ಆಡಳಿತ ಮಂಡಳಿ ಪರಿಗಣಿಸಿ, ಅವರಿಗಾಗಿಯೇ ಪ್ರತ್ಯೇಕ ಆರೋಗ್ಯ ತಪಾಸಣಾ ವಿಭಾಗವನ್ನು ಆರಂಭಿಸಲು ಉದ್ದೇಶಿಸಲಾಗಿತ್ತು. ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಸಂದರ್ಭದಲ್ಲಿ ಟ್ರಾನ್ಸ್ಜೆಂಡರ್ ಸಮುದಾಯಕ್ಕಾಗಿ ವಿಶೇಷ ಒಪಿಡಿಯನ್ನು ಪ್ರಾರಂಭಿಸಿದ್ದೇವೆ ಎಂದು ತಿಳಿಸಿದರು.
ವಿಶೇಷತೆಗಳೇನು?: ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಯಲ್ಲಿ ಟ್ರಾನ್ಸ್ಜೆಂಡರ್ಗಳಿಗಾಗಿ ಆರಂಭಿಸಲಾಗಿರುವ ಪ್ರತ್ಯೇಕ ಆರೋಗ್ಯ ತಪಾಸಣಾ ವಿಭಾಗವು ಹಲವು ವಿಶೇಷಗಳಿಂದ ಕೂಡಿದೆ. ಇಲ್ಲಿ ತೃತೀಯ ಲಿಂಗಿಗಳಿಗೆ ಮಾತ್ರ ಅವಕಾಶವಿರುತ್ತದೆ. ಸಾಮಾನ್ಯ ರೋಗಿಗಳಿಗೆ ಇಲ್ಲಿ ತಪಾಸಣೆ ನಡೆಸಲಾಗುವುದಿಲ್ಲ. ಇಲ್ಲಿ ಟ್ರಾನ್ಸ್ಜೆಂಡರ್ ರೋಗಿಗಳಿಗಾಗಿಯೇ ಮೀಸಲಾದ ವಿಶ್ರಾಂತಿ ಕೊಠಡಿ ಇರುತ್ತದೆ. ಅವರಿಗಿರುವ ರೋಗಗಳಿಂದ ಇತರ ರೋಗಿಗಳೊಂದಿಗೆ ಸೇರುವ ಮುಜುಗರವನ್ನು ತಪ್ಪಿಸಲು ಪ್ರತ್ಯೇಕ ಚಿಕಿತ್ಸಾ ವಿಭಾಗವೂ ಇಲ್ಲಿರಲಿದೆ.
ತೃತೀಯಲಿಂಗಿಗಳು ಖುಷ್: ಆರ್ಎಂಎಲ್ ಆಸ್ಪತ್ರೆಯಲ್ಲಿ ತಮಗಾಗಿ ಪ್ರತ್ಯೇಕ ವಿಭಾಗವನ್ನು ಆರಂಭಿಸಿದ್ದಕ್ಕೆ ತೃತೀಯಲಿಂಗಿಗಳು ಖುಷಿ ವ್ಯಕ್ತಪಡಿಸಿದ್ದಾರೆ. ಜೊತೆಗೆ ಆಸ್ಪತ್ರೆ ಆಡಳಿತ ಮಂಡಳಿಗೆ ಧನ್ಯವಾದ ಹೇಳಿದ್ದಾರೆ. ಆಸ್ಪತ್ರೆಯ ನಡೆಯಿಂದಾಗಿ ನಾವು ಸಂತೋಷಗೊಂಡಿದ್ದೇವೆ. ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದಂದು ನಮಗೆ ವಿಶೇಷ ಉಡುಗೊರೆ ನೀಡಲಾಗಿದೆ. ಆಸ್ಪತ್ರೆಗೆ ಬರಲು ಹಿಂಜರಿಯುತ್ತಿದ್ದೆವು. ಈಗ ಯಾವುದೇ ಮುಜುಗರವಿಲ್ಲದೇ ತಪಾಸಣೆಗೆ ಬರಬಹುದು ಎಂದು ಮಂಗಳಮುಖಿಯರು ಅಭಿಪ್ರಾಯ ಹಂಚಿಕೊಂಡರು.
ತೃತೀಯಲಿಂಗಿಗಳ ಒಪಿಡಿ ಉದ್ಘಾಟನೆಯ ಜೊತೆಗೆ ಆರ್ಎಂಎಲ್ ಆಸ್ಪತ್ರೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಪ್ರಯುಕ್ತ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು. ಆರ್ಎಂಎಲ್ ಆಸ್ಪತ್ರೆಯ ವಿಶೇಷ ನಡೆಯು ಮೆಚ್ಚುಗೆ ಗಳಿಸಿದ್ದಲ್ಲದೇ, ರಾಷ್ಟ್ರದಾದ್ಯಂತ ಇದೇ ರೀತಿಯ ಪ್ರಯತ್ನಗಳಿಗೆ ಪ್ರೇರೇಪಣೆ ನೀಡಲಿದೆ.
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಕಾಂಗ್ರೆಸ್ ಯುವ ಮುಖಂಡರಾದ ರಮೇಶ್ ಗೌಡರವರ ಹುಟ್ಟುಹಬ್ಬವನ್ನು ಶಾಸಕರ ಕಚೇರಿಯಲ್ಲಿ, ಆಚರಿಸಿದರು….
ರಾಜ್ಯದ 25 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ವಾರ್ತಾ ಇಲಾಖೆಯ ಆಯುಕ್ತರಾಗಿ ಹೇಮಂತ್ ನಿಂಬಾಳ್ಳರ್ ವರ್ಗಾವಣೆ
ನಯನ ಕುಮಾರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ವೈದ್ಯರ ದಿನಾಚರಣೆ ಅಂಗವಾಗಿ ಉಚಿತ ತಪಾಸಣಾ…..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.