ಮನೆ ಸುದ್ದಿ ಜಾಲ ಪ್ರೇಮಿಗಳಿಗೆ ಸಹಕರಿಸಿದ್ದಕ್ಕೆ, ಡಬಲ್‌ ಮರ್ಡರ್‌ – ಐವರು ಬಂಧನ

ಪ್ರೇಮಿಗಳಿಗೆ ಸಹಕರಿಸಿದ್ದಕ್ಕೆ, ಡಬಲ್‌ ಮರ್ಡರ್‌ – ಐವರು ಬಂಧನ

0

ಶಿವಮೊಗ್ಗ : ಪ್ರೇಮಿಗಳಿಗೆ ಸಹಕರಿಸಿದ ಇಬ್ಬರನ್ನು ಯುವತಿಯ ಸಹೋದರ ಹಾಗೂ ಸ್ನೇಹಿತರು ಸೇರಿ ಚಾಕುವಿನಿಂದ ಇರಿದು ಹತ್ಯೆ ಮಾಡಿದ ಘಟನೆ ಭದ್ರಾವತಿಯ ಜೈಭೀಮ್ ಬಡಾವಣೆಯಲ್ಲಿ ನಡೆದಿದೆ.

ನಗರದ ಕಿರಣ್ (25), ಮಂಜುನಾಥ್ (45) ಹತ್ಯೆಯಾದ ಯುವಕರು. 2 ದಿನದ ಹಿಂದೆ ಮನೆ ತೊರೆದಿದ್ದ, ಪ್ರೇಮಿಗಳು ಶುಕ್ರವಾರ ಸಂಜೆ ಹಳೆ ಪೊಲೀಸ್ ಠಾಣೆಗೆ ಬಂದಿದ್ದರು. ಈ ವೇಳೆ ಹುಡುಗನ ಸ್ನೇಹಿತರ ಮೇಲೆ ಯುವತಿಯ ಸಹೋದರ ಹಾಗೂ ಆತನ ಸ್ನೇಹಿತರು ದಾಳಿ ಮಾಡಿದ್ದಾರೆ. ಜಗಳ ನಿಲ್ಲಿಸಲು ಹೋದಾಗ ಇಬ್ಬರಿಗೂ ಚಾಕುವಿನಿಂದ ಇರಿದಿದ್ದಾರೆ.

ಹುಡುಗಿ ಹುಡುಗನ ಜೊತೆ ಓಡಿ ಹೋಗುವಾಗ ಇವರಿಬ್ಬರು ಬೆಂಬಲ ನೀಡಿದ್ದಾರೆಂದು ದಾಳಿ ನಡೆದಿದೆ ಎನ್ನಲಾಗಿದೆ. ಈ ಸಂಬಂಧ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.