ಟೆಹ್ರಾನ್: ಇರಾನ್ ವಶದಲ್ಲಿದ್ದ ಸರಕು ಸಾಗಣೆ ಹಡಗಿನಲ್ಲಿದ್ದ 16 ಭಾರತೀಯರ ಪೈಕಿ ಐವರನ್ನು ಶುಕ್ರವಾರ ಬಿಡುಗಡೆ ಮಾಡಲಾಗಿದೆ ಎಂದು ಇರಾನ್ ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಪ್ರಕಟಿಸಿದೆ.
ಪೋರ್ಚುಗೀಸ್ ಧ್ವಜವಿರುವ ‘ಎಂಎನ್ಸಿ ಏರೀಸ್’ ಹಡಗಿನಲ್ಲಿ 17 ಭಾರತೀಯರು ಸೇರಿದಂತೆ 25 ಮಂದಿ ಇದ್ದರು. ಈ ಹಡಗನ್ನು ಇರಾನ್ ಅರೆಸೇನಾ ಪಡೆ ಏಪ್ರಿಲ್ 13ರಂದು ವಶಪಡಿಸಿಕೊಂಡಿತ್ತು. ಕೆಲವು ದಿನಗಳ ಹಿಂದಷ್ಟೇ ಇಸ್ರೇಲ್ ನಡೆಸಿದ ಸರಣಿ ದಾಳಿಯ ಬೆನ್ನಲ್ಲೇ ತನ್ನ ಜಲಮಾರ್ಗದ ಮೂಲಕ ಸಾಗುವ ಹಡಗುಗಳನ್ನು ಇಸ್ರೇಲ್ ವಶಕ್ಕೆ ಪಡೆದಿತ್ತು.
ಹಡಗಿನಲ್ಲಿದ್ದ ಭಾರತೀಯರ ಪೈಕಿ ಏಕೈಕ ಮಹಿಳೆ ಅ್ಯನ್ ಟೆಸ್ಸಾ ಜೋಸೆಫ್ ಅವರನ್ನು ಏಪ್ರಿಲ್ 18ರಂದು ಬಿಡುಗಡೆ ಮಾಡಲಾಗಿತ್ತು. ಟೆಹ್ರಾನ್ನಲ್ಲಿರುವ ಭಾರತೀಯ ಆಯೋಗ ಮತ್ತು ಇರಾನ್ ಸರ್ಕಾರದ ನಡುವಣ ನಿರಂತರ ಮಾತುಕತೆಗಳಿಂದಾಗಿ ಜೋಸೆಫ್ ಬಿಡುಗಡೆ ಸಾಧ್ಯವಾಗಿತ್ತು.
ಸದ್ಯ ಐವರ ಬಿಡುಗಡೆ ಸೇರಿದಂತೆ ಒಟ್ಟು 6 ಮಂದಿ ಇರಾನ್ ವಶದಿಂದ ಹೊರಬಂದಿದ್ದಾರೆ. ಇನ್ನೂ 11 ಮಂದಿಯ ಬಿಡುಗಡೆಗೆ ಪ್ರಯತ್ನ ಮುಂದುವರಿದಿದೆ.
ಹಡಗಿನಲ್ಲಿರುವ ಭಾರತೀಯರನ್ನು ಬಿಡುಗಡೆ ಮಾಡುವ ಸಂಬಂಧ ಆ ದೇಶದ ವಿದೇಶಾಂಗ ಸಚಿವರ ಜತೆ ಮಾತನಾಡಿದ್ದು, ಅವರಿಂದ ಸಕಾರಾತ್ಮಕ ಪ್ರತಿಕ್ರಿಯೆ ಸಿಕ್ಕಿದೆ ಎಂದು ವಿದೇಶಾಂಗ ಸಚಿವ ಎಸ್. ಜೈ ಶಂಕರ್ ಇತ್ತೀಚೆಗೆ ಹೇಳಿದ್ದರು.
ಹಡಗಿನಲ್ಲಿರುವ ಸಿಬ್ಬಂದಿಯ ಯೋಗಕ್ಷೇಮ ಮತ್ತು ಹಡಗನ್ನು ಮರಳಿ ಪಡೆಯುವ ಕುರಿತಂತೆ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಲಾಗುತ್ತಿದೆ ಎಂದು ಎಂಎನ್ಸಿಯೂ (ಮೆಡಿಟರೇನಿಯನ್ ಶಿಪ್ಪಿಂಗ್ ಕಂಪನಿ) ತಿಳಿಸಿತ್ತು.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.