ಮನೆ ರಾಜ್ಯ ಕಾಡಾನೆ ದಾಳಿ: ಕಾರ್ಮಿಕ ಮಹಿಳೆಯರಿಗೆ ಗಾಯ

ಕಾಡಾನೆ ದಾಳಿ: ಕಾರ್ಮಿಕ ಮಹಿಳೆಯರಿಗೆ ಗಾಯ

0

ಕೊಡಗು(Kodagu): ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆಯರಿಬ್ಬರು ಗಾಯಗೊಂಡ ಘಟನೆ ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ ಸಮೀಪದ ತೂಬನಕೊಲ್ಲಿ ಕಾಫಿ ತೋಟದಲ್ಲಿ ನಡೆದಿದೆ.

ಕಾರ್ಮಿಕರಾದ ಲಲಿತಾ ಹಾಗೂ ಸರಿತಾ ಗಾಯಗೊಂಡವರು.

ತೋಟದಲ್ಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದ ಸಂದರ್ಭ ಕಾಡಾನೆ ಹಠಾತ್ತಾನೆ ದಾಳಿ ನಡೆಸಿದೆ. ಕೂಡಲೇ ಗಾಯಗೊಂಡ ಮಹಿಳೆಯರನ್ನು ಸಿದ್ದಾಪುರ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಿದ್ದಾಪುರ ವ್ಯಾಪ್ತಿಯಲ್ಲಿ ಕಾಡಾನೆ ಹಾವಳಿ ಮಿತಿಮೀರಿದ್ದು, ಕಾಫಿ ತೋಟದೊಳಗೆಯೇ ಕಾಡಾನೆ ಹಿಂಡು ಬೀಡುಬಿಟ್ಟಿದೆ. ಅರಣ್ಯ ಇಲಾಖೆ ಕಾಡಾನೆಗಳನ್ನು ಕಾಡಿಗಟ್ಟಿದರೂ ಮತ್ತೆ ಕಾಫಿ ತೋಟಗಳನ್ನೇ ಆಶ್ರಯತಾಣವನ್ನಾಗಿ ಮಾಡಿಕೊಳ್ಳುತ್ತಿದೆ. ಕಾಡಾನೆ ಹಾವಳಿಯಿಂದ ಕಾರ್ಮಿಕರು ಕೆಲಸಕ್ಕೆ ಹೋಗಲು ಹಿಂದೇಟು ಹಾಕುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಕೂಡಲೇ ಶಾಶ್ವತ ಪರಿಹಾರ ಒದಗಿಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು, ಪೊಲೀಸರು ಭೇಟಿ ನೀಡಿದ್ದಾರೆ.

ಹಿಂದಿನ ಲೇಖನ`ಕಾಂತಾರ’ ಸಿನಿಮಾ ಮೆಚ್ಚಿಕೊಂಡ ಕಿಚ್ಚ ಸುದೀಪ್
ಮುಂದಿನ ಲೇಖನವಿವೋ ಪ್ರೋ ಕಬಡ್ಡಿ ಲೀಗ್‌: ಪಿಂಕ್‌ ಪ್ಯಾಂಥರ್ಸ್‌ ತಂಡವನ್ನು ಮಣಿಸಿದ ಯುಪಿ ಯೋಧಾಸ್‌